22.7 C
Karnataka
Monday, May 20, 2024

    ಕಿರುತೆರೆ ಚಿತ್ರೀಕರಣಕ್ಕೆ ಅನುಮತಿ: ಕೆ-ಟಿವಿಯಲ್ಲಿ ಭುಗಿಲೆದ್ದ ವಿವಾದ

    Must read

    ಅಧ್ಯಕ್ಷರ ಏಕಪಕ್ಷೀಯ ನಿರ್ಧಾರ ಎಂದ ಕಾರ್ಯದರ್ಶಿ

    ಕಳೆದ ವಾರ ಕಿರುತೆರೆ ಚಿತ್ರೀಕರಣವನ್ನು ಮನೆಯೊಳಗೆ ಮಾಡಿಕೊಳ್ಳಬಹುದು ಎಂದು ರಾಜ್ಯ ಸರ್ಕಾರ ಅನುಮತಿ ಕೊಟ್ಟಿದೆ. ಆದರೆ ಈ ಅನುಮತಿ ನೀಡಿದ ತಕ್ಷಣ ಕರ್ನಾಟಕ ಟೆಲಿವಿಷನ್‌ ಅಸೋಸಿಯೇಶನ್‌ ಒಳಗಿದ್ದ ವಿವಾದ ಹೊರ ಬಂದಿದೆ.

    ಹೌದು, ಕರ್ನಾಟಕ ಟೆಲಿವಿಷನ್‌ ಅಸೋಸಿಯೇಶನ್‌ ಅಧ್ಯಕ್ಷ ಶಿವಕುಮಾರ್‌ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸೀರಿಯಲ್‌ಗಳನ್ನು ಮನೆಯೊಳಗೆ ಶೂಟಿಂಗ್‌ ಮಾಡಿಕೊಳ್ಳುತ್ತೇವೆ ನಮಗೆ ಅನುಮತಿ ನೀಡಿ ಎಂದು ಮನವಿ ಸಲ್ಲಿಸಿದ್ದರು. ಅದರಂತೆ ಮನೆಯೊಳಗೆ ಚಿತ್ರೀಕರಣ ಮಾಡಿಕೊಳ್ಳಬಹುದು, ಶುಚಿತ್ವ ಕಾಪಾಡಿಕೊಳ್ಳಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಎಂಬಂತಹ ನಿಯಮಗಳನ್ನು ಸೂಚಿಸಿ ಸರ್ಕಾರ ಅನುಮತಿ ನೀಡಿತು. ಆದರೆ ಈ ನಿರ್ಧಾರವನ್ನು ಕೆಲವರು ವಿರೋಧಿಸಿ ಸಾರ್ವಜನಿಕವಾಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.

    ಸಾಂದರ್ಬಿಕ ಚಿತ್ರ

    ಶೂಟಿಂಗ್‌ ಅನುಮತಿ ಪತ್ರ ಎಂಬುದು ಗೊತ್ತಿರಲಿಲ್ಲ.

    ಶಿವಕುಮಾರ್ ಚಿತ್ರೀಕರಣಕ್ಕೆ ಅನುಮತಿಗೆ ಮನವಿ ಸಲ್ಲಿಸುವಾಗ ನಟಿ ತಾರಾ ಅವರ ಜತೆ ಇದ್ದರು. ಆದರೆ ಚಿತ್ರೀಕರಣಕ್ಕೆ ಅನುಮತಿ ಪತ್ರ ನೀಡಲು ಬಂದಿದ್ಧಾರೆ ಎಂಬುದರ ಬಗ್ಗೆ ನನಗೆ ಗೊತ್ತಿರಲಿಲ್ಲ. ನಾನು ಆಗ ಸಿಎಂ ಆಫೀಸ್‌ ಬಳಿ ಇದ್ದಾಗ ಅವರು ಬಂದು ಮನವಿ ಕೊಟ್ಟು ಹೋದರು ಹಾಗಾಗಿ ಆ ಫೊಟೋದಲ್ಲಿ ನಾನಿದ್ದೇನೆ ಎಂದು ಅವರು ಮರು ದಿನ ಮಾಧ್ಯಮಗಳಿಗೆ ತಿಳಿಸಿದರು. ಅಲ್ಲಿಂದಲೇ ವಿವಾದ ಆರಂಭವಾಯಿತು.

    ಅಧ್ಯಕ್ಷರ ವಿರುದ್ಧ ಕಾರ್ಯದರ್ಶಿ ಮಾತು

    ಕೆಟಿವಿಯ ಕಾರ್ಯದರ್ಶಿ ವೀರೇಂದ್ರ ಬೆಳ್ಳಿಚುಕ್ಕಿ ಮಾಧ್ಯಮಗಳ ಜತೆ ಮಾತನಾಡಿ ‘ಚಿತ್ರೀಕರಣಕ್ಕೆ ಅನುಮತಿ ನೀಡಿರುವುದು ನನ್ನ ಗಮನಕ್ಕೆ ಬಂದಿದೆ. ಆದರೆ ಮನವಿ ಪತ್ರಕ್ಕೆ ಕಾರ್ಯದರ್ಶಿಯಾದ ನನ್ನ ಸಹಿ ಪಡೆಯದೇ ತೆಗೆದುಕೊಂಡಿಲ್ಲ. ಅಲ್ಲದೇ ಈ ಸಮಯದಲ್ಲಿ ನಿರ್ಮಾಪಕರ ಜತೆ ಮಾತನಾಡಿ, ಮನವಿ ಸಲ್ಲಿಸಬೇಕಿತ್ತು. ಈ ಸಾಂಕ್ರಾಮಿಕ ರೋಗ ಉಲ್ಬಣವಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಚಿತ್ರೀಕರಣ ಮಾಡುವುದು ಒಳ್ಳೆಯದಲ್ಲಿ ಇದರಿಂದ ಸಾಕಷ್ಟು ಸಮಸ್ಯೆಗಳು ಎದುರಾಗುತ್ತದೆ. ಅಲ್ಲದೇ ಅಧ್ಯಕ್ಷರು ಯಾರಿಗೂ ಹೇಳದೆ ಅವರಷ್ಟಕ್ಕೆ ಅವರೇ ಪತ್ರ ತೆಗೆದುಕೊಂಡು ಹೋಗಿದ್ದಾರೆ ಎಂದು ಮಾತನಾಡಿದರು.

    ಕಾರ್ಯಕಾರಿ ಸಮಿತಿ ಎದುರು ಮನವಿ ಸಲ್ಲಿಸುತ್ತಿರುವ ಬಗ್ಗೆ ಚರ್ಚೆ ಮಾಡಿಯೇ ಪತ್ರ ತೆಗೆದುಕೊಂಡು ಹೋಗಿದ್ದು, ಎಂದು ಅಧ್ಯಕ್ಷ ಶಿವಕುಮಾರ್‌ ಹೇಳಿದ್ದಾರೆ. ಇದನ್ನೆಲ್ಲ ನೋಡಿದರೆ ಕೆಟಿವಿಯಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಗೊತ್ತಾಗುತ್ತದೆ.  ಜತೆಗೆ ಕೆಟಿವಿ ಚುನಾವಣೆ ಹತ್ತಿರ ಇರುವುದರಿಂದ ಈ ಘಟನೆಯನ್ನು ವಿವಾದಕ್ಕೆ ತಿರುಗಿಸಲಾಗಿದೆಯಂತೆ.

    ಸಾಂದರ್ಬಿಕ ಚಿತ್ರ

    ವಿಶೇಷ ಎಂದರೆ ಮೇ 11 ರಿಂದ ಚಿತ್ರೀಕರಣ ಆರಂಭ ಮಾಡುತ್ತೇವೆ ಎಂದಿದ್ದ ಕೆಟಿವಿ ಮರುದಿನ ಸಭೆ ನಡೆಸಿ 21 ರ ನಂತರ ಚಿತ್ರೀಕರಣ ಆರಂಭಿಸುವುದಾಗಿ ಅನೌನ್ಸ್‌ ಮಾಡಿತು. ಇದರ ಜತೆಗೆ ಕೆಲ ಹಿರಿಯ ನಟ, ನಟಿಯರು ಚಿತ್ರೀಕರಣಕ್ಕೆ ಬರಲು ಹಿಂದೇಟು ಹಾಕಿದರು ಎನ್ನುವ ಮಾಹಿತಿ ಸಹ ಲಭ್ಯವಾಯಿತು.

    ಅನುಮತಿ ಪಡೆದಿರುವುದು ಅಧ್ಯಕ್ಷ ಶಿವಕುಮಾರ್‌ ಅವರ ವೈಯಕ್ತಿಕ  ಹಿತಾಸಕ್ತಿ ಎಂಬ ಮಾತುಗಳು ಸಹ ಕೇಳಿ ಬಂದವು. ಶಿವಕುಮಾರ್‌ ಅವರು ಮೂಲತಃ ನಿರ್ಮಾಪಕರು ಅವರ ನಿರ್ಮಾಣ ಸಂಸ್ಥೆಯಿಂದ ಒಂದೆರೆಡು ಸೀರಿಯಲ್‌ಗಳು, ಅಡುಗೆ ಕಾರ್ಯಕ್ರಮಗಳು ನಡೆಯುತ್ತಿದ್ದು, ಅದಕ್ಕೆ ಸಹಾಯವಾಗಲಿ ಎಂದು ಅವಸರವಾಗಿ ಅನುಮತಿ ಪಡೆದುಕೊಂಡಿದ್ದಾರೆ ಎಂದು ಕೆಲವರು ಮಾತನಾಡಿಕೊಂಡರು.

    ಇದರ ಜತೆಗೆ ಖಾಸಗಿ ವಾಹಿನಿಯೊಂದು ರೇಟಿಂಗ್‌ನಲ್ಲಿ  ತನ್ನ ಸ್ಥಾನವನ್ನು ಗಟ್ಟಿ ಮಾಡಿಕೊಳ್ಳಲು ನಿರ್ಮಾಣ ಸಂಸ್ಥೆಗಳಿಗೆ ಚಿತ್ರೀಕರಣಕ್ಕೆ ಒತ್ತಾಯ ಮಾಡಿ ಸರ್ಕಾರದ ಮಟ್ಟದಲ್ಲಿಯೂ ಒತ್ತಡ ಹೇರಿ ಚಿತ್ರೀಕರಣಕ್ಕೆ ಅನುಮತಿ ಪಡೆದುಕೊಂಡಿದೆ ಎಂಬ ಮಾತುಗಳು ಸಹ ಹೆಚ್ಚಾಗಿ ಕೇಳಿ ಬಂದಿವೆ.

    ಈ ಎಲ್ಲ ಘಟನೆಗಳನ್ನು ನೋಡಿದರೆ ಕಿರುತೆರೆ ಚಿತ್ರೀಕರಣಕ್ಕೆ ಅನುಮತಿ ಸಿಕ್ಕಿರುವುದು ದೊಡ್ಡ ವಿವಾದಕ್ಕೆ ತಿರುಗಿದೆ ಎಂಬುದು ಸ್ಪಷ್ಟವಾಗುತ್ತದೆ.

    ಶ್ರೀವತ್ಸ ನಾಡಿಗ್
    ಶ್ರೀವತ್ಸ ನಾಡಿಗ್https://kannadapress.com/
    ಶ್ರೀವತ್ಸ ನಾಡಿಗ್ ಕನ್ನಡಪ್ರೆಸ್.ಕಾಮ್ ನ ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ
    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!