ಇಷ್ಟು ಬೇಗ ಹೊರಟು ಹೋಗಲು ಅವಸರ ಏನಿತ್ತು ಚಿರಂಜೀವಿ

ಕೊರೊನಾ ದಾಳಿಯಿಂದ ಈಗಾಗಲೇ ತತ್ತರಿಸಿರುವ ಸಿನಿಮಾ ರಂಗಕ್ಕೆ ಮತ್ತೊಂದು ಶಾಕಿಂಗ್ ಸುದ್ದಿ. ಅತೀ ಚಿಕ್ಕ ವಯಸ್ಸಿನಲ್ಲೇ ಚಿರಂಜೀವಿ ಸರ್ಜಾ, ಇಹಲೋಕ ತ್ಯಜಿಸಿದ್ದಾರೆ. ಅವರಿಗೆ ರವಿವಾರ ಮಧ್ಯಾಹ್ನ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿ ಆಗದೇ ಬಾರದ ಲೋಕಕ್ಕೆ ತೆರಳಿದ್ದಾರೆ. ಜತೆಗೆ ಕಳೆದೆರಡು ತಿಂಗಳಿಂದ ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿದ್ದರು ಎನ್ನಲಾಗುತ್ತಿದೆ.

2009 ರಲ್ಲಿ ವಾಯು ಪುತ್ರ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದ ಇವರು, ಈವರೆಗೂ 22 ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಮ್ಮ ಐ ಲವ್ ಯೂ, ಚಂದ್ರಲೇಖ, ಗಂಡೆದೆ, ಆಟಗಾರ, ವಾಯುಪುತ್ರ ಇವರ ಸೂಪರ್ ಹಿಟ್ ಚಿತ್ರಗಳು. ಕೊನೆಯದಾಗಿ ಇವರ ಶಿವಾರ್ಜುನ ಸಿನಿಮಾ ರಿಲೀಸ್ ಆಗಿತ್ತು. ರಾಜಮಾರ್ತಾಂಡ ಬಿಡುಗಡೆಗೆ ಸಿದ್ಧವಾಗಿದೆ.


ಕನ್ನಡ ಸಿನಿಮಾ ರಂಗಕ್ಕೆ ಸರ್ಜಾ ಕುಟುಂಬದ ಕೊಡುಗೆ ಅಪಾರ. ಇವರ ಸೋದರ ಮಾವ ಕಿಶೋರ್ ಸರ್ಜಾ ಇವರನ್ನು ವಾಯುಪುತ್ರ ಸಿನಿಮಾದ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಲಾಂಚ್ ಮಾಡಿದ್ದರು. ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಇವರ ಬೆನ್ನೆಲುಬಾಗಿ ನಿಂತಿದ್ದರು. ಸಹೋದರ ಧ್ರುವ ಸರ್ಜಾ ಕೂಡ ಸಹೋದರ ಅನೇಕ ಸಿನಿಮಾಗಳಿಗೆ ಸಾಥ್ ನೀಡಿದ್ದರು.
ಚಿರಂಜೀವಿ ಸರ್ಜಾ ನಟಿ ಮೇಘನಾ ರಾಜ್​ ಅವರ ಜೊತೆ 2017ರಲ್ಲಿ ನಿಶ್ವಿತಾರ್ಥ ಮಾಡಿಕೊಂಡಿದ್ದು, ಈ ಜೋಡಿ 2018ರಲ್ಲಿ ಹೊಸ ಜೀವನಕ್ಕೆ ಕಾಲಿಟ್ಟಿದ್ದರು.


ಅವರ ಸಾವಿಗೆ ಇಡೀ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ನಟಿ, ಸಂಸದೆ ಸುಮಲತಾ ಅಂಬರೀಶ್, ನಟರಾದ ಕಿಚ್ಚ ಸುದೀಪ್, ದರ್ಶನ್, ಗಣೇಶ್, ಶಿವರಾಜ್ ಕುಮಾರ್, ಪುನೀತ್, ನಿರ್ದೇಶಕ ಚೈತನ್ಯ ಸೇರಿದಂತೆ ಸಿನಿಮಾ ರಂಗದ ಅನೇಕ ಗಣ್ಯರು ಚಿರು ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ನಟಿ ಸುಮಲತಾ ಅಂಬರೀಶ್ ತಮ್ಮ ಕುಟುಂಬದ ಜತೆಗಿನ ಚಿರು ಒಡನಾಟವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂಓದಿ : ನಿನ್ನ ಮಡದಿಯ ಪರವಾಗಿ ನಾನಲ್ಲ.. ಯಾರೂ ನಿನ್ನನ್ನ ಕ್ಷಮಿಸೋದಿಲ್ಲ, ಅರ್ಧಕ್ಕೆ ಯಾತ್ರೆ ಮುಗಿಸಿದವನು ನೀನು ಅಂತ

LEAVE A REPLY

Please enter your comment!
Please enter your name here