ರಾಣಿ ಚನ್ನಮ್ಮ ವಿವಿಯಲ್ಲಿ ವಿದೇಶಿ ಭಾಷೆ ಅಧ್ಯಯನ ವಿಭಾಗ ತೆರೆಯಲು ನಿರ್ಧಾರ

ಬೆಳಗಾವಿಯ ಸಂಗೊಳ್ಳಿರಾಯಣ್ಣ ಪ್ರಥಮದರ್ಜೆ ಘಟಕ ಮಹಾ ವಿದ್ಯಾಲಯದ ಇಂಗ್ಲಿಷ್ ವಿಭಾಗದ ಆಶ್ರಯದಲ್ಲಿ ಜಾಗತಿಕ ಸ್ಪರ್ಧೆಗಾಗಿ ಸಂವಹನ ಕೌಶಲ್ಯಗಳು (Communication skills for Global Competence) ವಿಷಯ ಕುರಿತು ಒಂದು ದಿನದ ರಾಷ್ಟ್ರಮಟ್ಟದ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.

ಈ ಕಾರ್ಯಗಾರವನ್ನು ಉದ್ಘಾಟಿಸಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ರಾಮಚಂದ್ರ ಗೌಡ ಅವರು ಇಂದಿನ ಯುವಕರಲ್ಲಿ ಸಂವಹನ ಕೌಶಲ್ಯಗಳ ಕೊರತೆಯಿಂದ ತಾವು ಪಡೆದ ಪದವಿಗೆ ತಕ್ಕ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಅಭಿಪ್ರಾಯ ಪಟ್ಟರು. ಜಗತ್ತಿನ ಯಾವುದೇ ಮೂಲೆಗೆ ಹೋದರು ಸಂವಹನ ಎನ್ನುವುದು ಬಹಳ ಮುಖ್ಯ ಪಾತ್ರವಹಿಸುತ್ತದೆ ಎಂದರು.

ಬರುವ ದಿನಗಳಲ್ಲಿ ರಾಣಿ ಚನ್ನಮ್ಮ ವಿವಿಯಲ್ಲಿ ವಿದೇಶಿ ಭಾಷಾ ಅಧ್ಯಯನ ವಿಭಾಗಗಳನ್ನು ತೆರೆಯಲಾಗುವುದು ಎಂದು ಪ್ರಕಟಿಸಿದರು.

ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಂ.ಜಯಪ್ಪ ಅವರು ಮಾತನಾಡಿ ಇಂದು ಭಾರತ ದೇಶ ಇಂಗ್ಲಿಷ್ ಭಾಷೆಯನ್ನು ಬಳಸುವ ಎರಡನೇ ದೊಡ್ಡ ರಾಷ್ಟ್ರವಾಗಿದೆ ಎಂದರು . ಗ್ರಾಮೀಣ ಪ್ರತಿಭೆಗಳಿಗೆ ಸೂಕ್ತ ಭಾಷಾ ಕೌಶಲ್ಯ ಗಳನ್ನು ರೂಢಿಸಿ ಅವರ ಪ್ರತಿಭೆಯನ್ನು ಪ್ರಪಂಚಕ್ಕೆ ಪರಿಚಯಿಸುವ ಕನಸು ನಮ್ಮದಾಗಿದೆ ಎಂದರು.

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾದ ಪ್ರೊ.ಎಂ.ಬಿ.ಹೆಗ್ಗನ್ನವರ ಹಾಗೂ ರಾಣಿ ಚನ್ನಮ್ಮ ವಿವಿ ಅಧ್ಯಾಪಕರ ಸಂಘದ ಅಧ್ಯಕ್ಷರಾದ ಪ್ರೊ ಏ.ಶ್ರೀನಿವಾಸಗೌಡ, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧ್ಯಾಪಕರ ಸಂಘದ ಮಾಜಿ ಅಧ್ಯಕ್ಷರಾದ ಪ್ರೊ.ಎಂ.ಬಿ.ಸಂಗಾಪೂರ ಅವರನ್ನು ಸತ್ಕರಿಸಲಾಯಿತು.

ಇಂಗ್ಲಿಷ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ಪೂಜಾ ಹಲ್ಯಾಳ ಅವರು ಪ್ರಾಸ್ತಾವಿಕನುಡಿಗಳನ್ನುಆಡಿದರು

ಡಾ.ಶಾಂತಿ ವರದರಾಜನ್ ಅವರು ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಭಾಗಿಯಾಗಿದ್ದರು. ಕಾರ್ಯಾಗಾರಕ್ಕೆ1000ಕ್ಕೂ ಹೆಚ್ಚು ಪ್ರಾಧ್ಯಾಪಕರು ಹಾಗೂ ಸಂಶೋಧನಾ ವಿದ್ಯಾರ್ಥಿಗಳು ನೋಂದಣಿ ಪಡೆದು ಆನ್ ಲೈನ್ ಮೂಲಕ ಉಪಸ್ಥಿತರಿದ್ದರು

1 COMMENT

LEAVE A REPLY

Please enter your comment!
Please enter your name here