ಜೀವನ್ಮರಣ ಹೋರಾಟದಲ್ಲಿ ನಟ ಸಂಚಾರಿ ವಿಜಯ್; ಮಿದುಳು ನಿಷ್ಕ್ರಿಯ; ಚಿತ್ರರಂಗ ಆಘಾತ‌, ವೆಂಟಿಲೇಟರ್‌ ಮೇಲೆ ನಟ

ರಸ್ತೆ ಅಪಘಾತಲ್ಲಿ ತೀವ್ರ ಗಾಯಗೊಂಡು ಬನ್ನೇರುಘಟ್ಟ ರಸ್ತೆಯ ಸಾಗರ್‌ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್‌ ಅವರ ಆರೋಗ್ಯದ ಬಗ್ಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ‌ ಅವರು ವೈದ್ಯರಿಂದ ಸೋಮವಾರ ಮಾಹಿತಿ ಪಡೆದರು. ನಟರಾದ ಜಗ್ಗೇಶ್, ನೀನಾಸಂ ಸತೀಶ್‌, ಸಂಚಾರಿ ವಿಜಯ್‌ ಸಹೋದರ ಸಿದ್ದೇಶ್‌ ಜತೆಯಲ್ಲಿದ್ದರು.

ಶನಿವಾರ ರಾತ್ರಿ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಬನ್ನೇರುಘಟ್ಟ ರಸ್ತೆಯ ಸಾಗರ್‌ ಅಪೊಲೋ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್‌ ಚಿಂತಾಜನಕ ಸ್ಥಿತಿಯಲ್ಲೇ ಇದ್ದಾರೆ. ಅವರ ಮೆದುಳು ಸದ್ಯಕ್ಕೆ ಕೆಲಸ ಮಾಡುತ್ತಿಲ್ಲ. ಆದರೆ ಇತರ ಅಂಗಾಗಗಳು ಸುಸ್ಥಿತಿಯಲ್ಲಿವೆ. ಹೀಗಾಗಿ ಸಂಜೆಯ ನಂತರ ನಡೆಯುವ ಮತ್ತೊಂದು ಪರೀಕ್ಷೆ ಅವರ ಆರೋಗ್ಯದ ಸ್ಥಿತಿಯನ್ನು ತಿಳಿಸಲಿದೆ.

ವೆಂಟಿಲೇಟರ್‌ ಮೇಲೆ ಚಿಕಿತ್ಸೆ ಪಡೆಯುತ್ತ ಜೀವನ್ಮರಣ ಹೋರಾಟ ನಡೆಸುತ್ತಿರುವ ವಿಜಯ್‌ ಅವರ ಅಂಗಾಂಗಳನ್ನು ದಾನ ಮಾಡುವ ನಿರ್ಧಾರವನ್ನು ಅವರ ಕುಟುಂಬ ಸದಸ್ಯರು ಕೈಗೊಂಡಿದ್ದು, ಸದ್ಯಕ್ಕೆ ಅಪೊಲೋ ವೈದ್ಯರೂ ಈ ಕಾರ್ಯದಲ್ಲಿ ನಿರತರಾಗಿದ್ದಾರೆ.

ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ ಆಸ್ಪತ್ರೆಗೆ ಭೇಟಿ ನೀಡಿದ್ದರು. ನಟ ಜಗ್ಗೇಶ ಕೂಡ ಜತೆಯಲ್ಲಿದ್ದರು.

LEAVE A REPLY

Please enter your comment!
Please enter your name here