ಅಮರನಾಥ್ ಯಾತ್ರೆ ಈ ವರ್ಷವೂ ರದ್ದು

ಕೋವಿಡ್ ಕಾರಣದಿಂದಾಗಿ ಸತತ ಎರಡನೇ ವರ್ಷ ಅಮರನಾಥ್ ಯಾತ್ರೆಯನ್ನು ರದ್ದು ಪಡಿಸಲಾಗಿದೆ.

ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಕರ್ನಲ್ ಮನೋಜ್ ಸಿನ್ಹಾ ಅವರ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಅಮರನಾಥ್ ದೇವಾಲಯ ಆಡಳಿತ ಮಂಡಳಿ ಸಭೆ ಈ ನಿರ್ಧಾರವನ್ನು ಕೈಗೊಂಡಿದೆ.

ನಮಗೆ ಭಕ್ತರ ಭಾವನೆ ಅರ್ಥವಾಗುತ್ತದೆ. ಆದರೆ ಕೋವಿಡ್ ಸಾಂಕ್ರಾಮಿಕದಿಂದಾಗಿ ಆಗಬಹುದಾದ ಹಾನಿಯನ್ನು ಗಮನಿಸಿ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಆದರೆ ಪವಿತ್ರ ಅಮರನಾಥ್ ಗುಹೆಯಲ್ಲಿ ಪೂಜಾ ವಿಧಿ ವಿಧಾನಗಳು ಎಂದಿನಂತೆ ನಡೆಯಲಿದ್ದು ಅದರ ಲೈವ್ ಪ್ರಸಾರ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಹಿಮಾಲಯದಲ್ಲಿ ಸಮುದ್ರಮಟ್ಟದಿಂದ 3800 ಮೀಟರ್ ಎತ್ತರದಲ್ಲಿರುವ ಅಮರನಾಥ್ ಗುಹಾ ದೇವಾಲಯದ ಯಾತ್ರೆ ಇದೇ 28ರಿಂದ ಆರಂಭವಾಗಬೇಕಿತ್ತು. 56 ದಿನಗಳ ಈ ಯಾತ್ರೆ ಆಗಸ್ಟ್ 22ರಂದು ಮುಕ್ತಾಯವಾಗುತಿತ್ತು.

LEAVE A REPLY

Please enter your comment!
Please enter your name here