ಬಿಡದಿಯಲ್ಲೇ ಕುಮಾರ ಸ್ವಾಮಿ ಬಿಡಾರ

ರಾಮನಗರ ಜಿಲ್ಲೆ ಬಿಡದಿ ಸಮೀಪ ಇರುವ ಕೇತಗಾನಹಳ್ಳಿಯ ತೋಟದ ಮನೆಯಲ್ಲಿ ಕಳೆದ ಆರು ತಿಂಗಳಿಂದ ವಾಸ್ತವ್ಯ ಹೂಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಾರ್ವಜನಿಕರಿನ್ನು ಭೇಟಿ ಮಾಡಲು ಅಲ್ಲೇ ಒಂದು ಕಚೆೇರಿಯನ್ನು ಆರಂಭಿಸಿದ್ದು ಸಮಯವನ್ನು ನಿಗದಿ ಮಾಡಿದ್ದಾರೆ.

ನನ್ನ ಹೊಲ ಮತ್ತು ತೋಟದ ಕೃಷಿಯನ್ನು ಇಸ್ರೇಲ್ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇನೆ. ಹೀಗಾಗಿ ತೋಟ ಮನೆಯಲ್ಲೇ ಇದ್ದೇನೆ. ನನ್ನ ಭೇಟಿಗೆ ರಾಜ್ಯದ ನಾನಾ ಭಾಗಗಳಿಂದ ನಮ್ಮ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿತೈಷಿಗಳು ಆಗಮಿಸುತ್ತಿದ್ದಾರೆ.ಬೆಳಗ್ಗೆ 8.30 ರಿಂದ 10.30 ಗಂಟೆಯವರೆಗೆ ನನ್ನ ತೋಟದ ಮನೆಯಲ್ಲಿ ಭೇಟಿಯಾಗಲು ಸಾರ್ವಜನಿಕರಿಗೆ ಮುಕ್ತ ಅವಕಾಶವಿದೆ. ಭಾನುವಾರ ಹೊರತುಪಡಿಸಿ, ಉಳಿದ ದಿನಗಳಲ್ಲಿ ಈ ಸಮಯದಲ್ಲಿ ಬಂದು ನನ್ನನ್ನು ಭೇಟಿ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಸಾರ್ಜನಿಕರು ನನ್ನನ್ನು ಭೇಟಿ ಮಾಡುವ ಸದುದ್ದೇಶಕ್ಕಾಗಿಯೇ ನನ್ನ ತೋಟದ ಮನೆಯಲ್ಲಿ ಆರಂಭಿಸಿರುವ ಪುಟ್ಟ ಕಚೇರಿಯ ಔಪಚಾರಿಕ ಪೂಜೆ ಇಂದು ನೆರವೇರಿತು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here