ರಾಜ್ಯದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್

ಕೇಂದ್ರ ಸಚಿವ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಿಸಲಾಗಿದೆ. ರಾಜ್ಯಸಭೆಯಲ್ಲಿ ಬಿಜೆಪಿ ಯ ನಾಯಕರೂ ಆಗಿರುವ ಗೆಹ್ಲೋಟ್ ಕೇಂದ್ರದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ಸಚಿವರಾಗಿದ್ದಾರೆ.

ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿದ್ದ ಬಂಡಾರು ದತ್ತಾತ್ರೇಯ ಅವರನ್ನು ಹರಿಯಾಣ ರಾಜ್ಯಪಾಲರಾಗಿ ನೇಮಿಸಲಾಗಿದೆ. ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಹಿಮಾಚಲ ಪ್ರದೇಶದ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ.ಮಿಜೋರಾಮ್ ರಾಜ್ಯಪಾಲ ಪಿ ಎಸ್ ಶ್ರೀಧರನ್ ಪಿಳ್ಳೈ ಅವರನ್ನು ಗೋವಾ ರಾಜ್ಯಕ್ಕೆ ವರ್ಗಾಯಿಸಲಾಗಿದೆ.

ಹರಿಯಾಣ ರಾಜ್ಯಪಾಲ ಸತ್ಯದೇವ ನಾರಾಯಣ ಆರ್ಯ ಅವರನ್ನು ತ್ರಿಪುರಾ ರಾಜ್ಯಪಾಲರಾಗಿಯೂ, ತ್ರಿಪುರ ರಾಜ್ಯಪಾಲರಾಗಿದ್ದ ರಮೇಶ್ ವ್ಯಾಸ್ ಅವರನ್ನು ಜಾರ್ಖಂಡ್ ರಾಜ್ಯಪಾಲರನ್ನಾಗಿಯೂ ನೇಮಿಸಲಾಗಿದೆ. ಡಾ. ಹರಿ ಬಾಬು ಕಂಬಂಪತಿ ಅವರು ಮಿಜೋರಾಮ್ ಗೂ ,  ಮಂಗುಭಾಯ್ ಛಗ್ಗನ್ ಭಾಯ್ ಪಟೇಲ್ ಅವರು ಮಧ್ಯಪ್ರದೇಶ ರಾಜ್ಯಪಾಲರಾಗಿಯೂ ನೇಮಕವಾಗಿದ್ದಾರೆ.

LEAVE A REPLY

Please enter your comment!
Please enter your name here