ಬಿಎಸ್ ವೈ – ಮೋದಿ ಭೇಟಿ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಯಡಿಯೂರಪ್ಪನವರ ಹರ್ಷ ಚಿತ್ತ ಮುಖ ರಾಜಕೀಯ ಸಮಸ್ಯೆಗಳು ಬಗೆ ಹರಿದ ಸೂಚನೆಯನ್ನು ತೋರುವಂತಿತ್ತು.

ಪ್ರಧಾನಿ ಅವರನ್ನು ಭೇಟಿ ಮಾಡಿ ರಾಜ್ಯದ ಯೋಜನೆಗಳ ಬಗ್ಗೆ ಫಲಪ್ರದವಾಗಿ ಮಾತುಕತೆ ನಡೆಸಲಾಯಿತು ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಬೇಕು ಮತ್ತು ಬೆಂಗಳೂರು ಫೆರಿಫೆರಲ್ ರಿಂಗ್ ರೋಡ್ ಗೆ 6000 ಕೋಟಿ ರೂಪಾಯಿಗಳ ಹಣಕಾಸು ನೆರವನ್ನು ಮುಖ್ಯಮಂತ್ರಿಗಳು ಕೋರಿದರು ಎಂದು ಉನ್ನತ ಮೂಲಗಳು ತಿಳಿಸಿವೆ. ಇದೇ ಸಂದರ್ಭದಲ್ಲಿ ಮೇಕೆದಾಟು ಯೋಜನೆ ಮತ್ತು ಬೆಂಗಳೂರಲ್ಲಿ ಅಮೆರಿಕ ದೂತವಾಸದ ಕಚೇರಿ ತೆರೆಯುವ ಬಗ್ಗೆಯೂ ಚರ್ಚಿಸಿದ್ದಾರೆ.

ಪ್ರಧಾನಿ ಭೇಟಿಯ ನಂತರ ಕರ್ನಾಟಕದ ನೂತನ ಸಚಿವರು ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು.

LEAVE A REPLY

Please enter your comment!
Please enter your name here