ಬಿಎಸ್ ವೈ ರಾಜಿನಾಮೆ ನೀಡಿದ ನಂತರ ದಲಿತರನ್ನೇ ಸಿಎಂ ಮಾಡಲು ಸಿದ್ಧರಾಮಯ್ಯ ಆಗ್ರಹ

ದಲಿತರ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಯಡಿಯೂರಪ್ಪ ರಾಜಿನಾಮೆ ನೀಡಿದ ಬಳಿಕ ದಲಿತರನ್ನೇ ಮುಖ್ಯಮಂತ್ರಿ ಮಾಡಲಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಮಂಗಳೂರಿನಲ್ಲಿ ಹೇಳಿದ್ದಾರೆ..

ಈ ವಿಷಯದಲ್ಲಿ ನಾನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸವಾಲು ಹಾಕುವೆ ಎಂದಿದ್ದಾರೆ.ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ದಲಿತರನ್ನು ಸಿಎಂ ಮಾಡುವ ಅವಕಾಶ ಈಗ ಬಿಜೆಪಿಗೆ ಬಂದಿದೆ ಎಂದರು.

ಸಿದ್ದರಾಮಯ್ಯ ದಲಿತರನ್ನ ಸಿಎಂ ಮಾಡಲಿ ಅಂತ ಕಟೀಲ್ ಅವರು ನನಗೆ ಹೇಳಿದ್ದರು.ನಮ್ಮಲ್ಲಿ ದಲಿತರು ಸಿಎಂ ಆಗಿದ್ದಾರೆ.‌ ಹೀಗಾಗಿ ಸದ್ಯ ಅವರಿಗೆ ಆ ಅವಕಾಶ ಇದೆ, ಕಟೀಲ್ ದಲಿತರನ್ನ ಸಿಎಂ ಮಾಡಲಿ.

ಯಡಿಯೂರಪ್ಪರನ್ನ ಹೇಗಿದ್ದರೂ ತೆಗೀತಾರೆ, ಈಗ ದಲಿತರನ್ನ ಮುಖ್ಯಮಂತ್ರಿ ಹುದ್ದೆಯಲ್ಲಿ ಕೂರಿಸಲಿ. ದಲಿತರ ಬಗ್ಗೆ ಕಟೀಲ್ ಗೆ ಪ್ರೀತಿ ಇದೆ ಅಲ್ವಾ, ಹಾಗಾದ್ರೆ ಸಿಎಂ ಮಾಡಲಿ ಎಂದರು ಸಿದ್ಧರಾಮಯ್ಯ.

ಜನಗಳ ಬಗ್ಗೆ ಬಿಜೆಪಿಗೆ ಕಾಳಜಿ ಇಲ್ಲ, ಹಿಂದೆಯೂ ಇರಲಿಲ್ಲ, ಈಗ ಬರೋಕೂ ಸಾಧ್ಯ ಇಲ್ಲ.2019ರಲ್ಲಿ ಬಂದ ಪ್ರವಾಹದಿಂದ ಸಂತ್ರಸ್ತರಾದವರಿಗೇ ಇನ್ನೂ ಯಡಿಯೂರಪ್ಪ ಪರಿಹಾರ ಕೊಟ್ಟಿಲ್ಲ.ಈಗ ಎಲ್ಲಾ ಕಡೆ ಮಳೆ ಬಂದು ಜನ, ಜಾನುವಾರು ಕೊಚ್ಚಿ ಹೋಗಿವೆ. ಮನೆಗಳು ಬಿದ್ದಿವೆ.ಈಗ ಸರ್ಕಾರ ಯುದ್ದೋಪಾದಿಯಲ್ಲಿ ಕೆಲಸ ಮಾಡೋ ಬದಲು ಸಿಎಂ ಬದಲಾವಣೆ ಮಾಡುವ ಪ್ರಯತ್ನದಲ್ಲಿ ಇದ್ದಾರೆ ಎಂದು ಸಿದ್ಧರಾಮಯ್ಯ ಹೇಳಿದರು.

ವಲಸಿಗ ಸಚಿವರನ್ನ ಮತ್ತೆ ಕಾಂಗ್ರೆಸ್ ಗೆ ಪಡೆದುಕೊಳ್ಳೋ ವಿಚಾರ, ಅವರು ನಮ್ಮ‌ಪಕ್ಷಕ್ಕೆ ಬರ್ತಾರೆ ಅನ್ನೋದು ನನಗಂತೂ ಗೊತ್ತಿಲ್ಲ. ಪಕ್ಕಕ್ಕೆ ಅವರನ್ನ ವಾಪಾಸ್ ಸೇರಿಸಿಕೊಳ್ಳುವುದಿಲ್ಲ ಎಂದು ಸದನದಲ್ಲೇ ಹೇಳಿದ್ದೇನೆ. ಅದಕ್ಕೆ ಈಗಲೂ ಬದ್ಧ ಎಂದರು.

LEAVE A REPLY

Please enter your comment!
Please enter your name here