ಅಭಿನಯ ಶಾರದೆ ಜಯಂತಿ ಇನ್ನಿಲ್ಲ

ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದು ಖ್ಯಾತಿ ಗಳಿಸಿದ್ದ ನಟಿ ಜಯಂತಿ ಈಗ್ಗೆ ಸ್ವಲ್ಪ ಹೊತ್ತಿಗೆ ಮುಂಚೆ ನಿಧನರಾದರು. ಕೆಲಕಾಲದದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 76 ವರ್ಷ ವಯಸ್ಸಾಗಿತ್ತು.

1968ರಲ್ಲಿ ತೆರೆ ಕಂಡ ವೈ.ಅರ್. ಸ್ವಾಮಿ ನಿರ್ದೇಶನದ ಜೇನು ಗೂಡು ಚಿತ್ರದ ಮೂಲಕ ಚಿತ್ರ ರಂಗ ಪ್ರವೇಶಿಸಿದ ಜಯಂತಿಯವರ ಮೂಲ ಹೆಸರು ಕಮಲ ಕುಮಾರಿ. ಅದಕ್ಕಿಂತ ಮುನ್ನ ಜಗದೇಕ ವೀರನ ಕಥೆ ಚಿತ್ರದಲ್ಲಿ ಸಣ್ಣ ಪಾತ್ರ ವೊಂದರಲ್ಲಿ ಅಭಿನಯಿಸಿದ್ದರು. ಒಟ್ಟು ಆರು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ಜಯಂತಿ ಕನ್ನಡದ 190 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ನಿರ್ಮಾಪಕಿ , ನಿರ್ದೇಶಕಿಯೂ ಆಗಿದ್ದ ಜಯಂತಿ ಅವರಿಗೆ 1965ರ ಮಿಸ್ ಲೀಲಾವತಿ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ.ಎರಡು ಮುಖ(1969),ಮನಸ್ಸಿನಂತೆ ಮಾಂಗಲ್ಯ(1976),ಧರ್ಮ ದಾರಿ ತಪ್ಪಿತು(1981),ಮಸಣದ ಹೂವು (1985),ಆನಂದ್ (1986) ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ.

ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ಕಾಮತೃಷೆಯಿಂದ ಬಳಲುವ ಹೆಣ್ಣಾಗಿ ಮೊದಲ ಭಾರಿಗೆ ವಿಶಿಷ್ಟ ಅಭಿನಯ ನೀಡಿದ್ದಾರೆ.

ಅವರ ನಿಧನಕ್ಕೆ ಅನೇಕ ಗಣ್ಯರು ಕಂಬನಿ ಮಿಡಿದದ್ದು ಕನ್ನಡ ಚಿತ್ರರಂಗ ಒಬ್ಬ ಪ್ರತಿಭಾವಂತ ಕಲಾವಿದೆಯನ್ನು ಕಳೆದುಕೊಂಡಂತಾಗಿದೆ ಎಂದು ದುಃಖಿಸಿದ್ದಾರೆ.

1 COMMENT

LEAVE A REPLY

Please enter your comment!
Please enter your name here