ಧರ್ಮಸ್ಥಳ: ಶನಿವಾರ ಭಾನುವಾರ ದರ್ಶನ ಇಲ್ಲ

BELTHANGADI AUG 5

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರಕಾರದ ನಿರ್ದೇಶನದಂತೆ ಮಾರ್ಗಸೂಚಿ ಹೊರಡಿಸಿದೆ. ಅದರ ಪ್ರಕಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಅಗಸ್ಟ್‌ 5ರಿಂದ 15 ರವರೆಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು ಸೇವೆ, ಪ್ರಸಾದ, ಅನ್ನ ಸಂತರ್ಪಣೆ, ವಸತಿ ವ್ಯವಸ್ಥೆಗಳನ್ನು ಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

ವಾರಾಂತ್ಯದಲ್ಲಿ (ಶನಿವಾರ/ಭಾನುವಾರ) ದೇವರ ದರ್ಶನವನ್ನೂ ನಿರ್ಬಂಧಿಸಲಾಗಿದ್ದು, ಧರ್ಮಸ್ಥಳಕ್ಕೆ ಹೋಗುವ ಭಕ್ತರು ಈ ಅಂಶವನ್ನು ಗಮನಿಸಬೇಕಿದೆ.

ಭಕ್ತಾದಿಗಳೆಲ್ಲರೂ ಸಹಕರಿಸುವಂತೆ ವಿನಂತಿಸುತ್ತೇವೆ. ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ.ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ

LEAVE A REPLY

Please enter your comment!
Please enter your name here