MUDHOL AUG 8
ಪ್ರವಾಹದಿಂದ ಬಾದಿತವಾದ ಪ್ರದೇಶಗಳಲ್ಲಿ ತೀವ್ರ ನಿಗಾವಹಿಸಿ, ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ
ಜಲಸಂಪನ್ಮೂಲಸಚಿವ ಗೋವಿಂದ ಎಂ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮುಧೋಳ್ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿಂದು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೈಗೊಂಡ ಕ್ರಮಗಳು ಮತ್ತು ಕೋವಿಡ್ 19 ಸೋಂಕು ನಿಯಂತ್ರಣ ಕುರಿತ ಸಭೆಯಲ್ಲಿ ನಡೆಸಿ ಮಾತನಾಡಿದ ಅವರು, ಪ್ರವಾಹ ಪೀಡಿತ ಪ್ರದೇಶಗಳ ಎಲ್ಲಾ ಅರ್ಹ ಸಂತ್ರಸ್ತರಿಗೆ ಪರಿಹಾರ ಧನವನ್ನು ನೀಡಬೇಕು. ಮಾರ್ಗಸೂಚಿಯನ್ವಯ ಪರಿಹಾರ ದನ ನೀಡಬೇಕು. ರಸ್ತೆ, ಸೇತುವೆ ಸಂಪರ್ಕ ಮಾರ್ಗಗಳನ್ನು ಪುನರ್ ನಿರ್ಮಿಸಬೇಕು. ಕೋವಿಡ್ ನಿಯಂತ್ರಣ ಕ್ಕಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಸಾರ್ವಜನಿಕರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ.ರಾಜೇಂದ್ರ, ಪೊಲೀಸ್ ವರಿಷ್ಟಧಿಕಾರಿಗಳಾದ ಜಗದೀಶ್ ಸಗಲಸರ, ಅಧಿಕಾರಿಗಳು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.


