23ರಿಂದ 9 ರಿಂದ 12ನೇ ತರಗತಿ ಆರಂಭ: ಬ್ಯಾಚ್ ವೈಸ್ ಪಾಠ ಪ್ರವಚನ

MANGALURU AUG 12

ಕೋವಿಡ್‌ ನಡುವೆಯೂ ಶೈಕ್ಷಣಿಕ ಚಟುವಟಿಕೆಗಳು ಹಳಿತಪ್ಪದಂತೆ ನೋಡಿಕೊಳ್ಳಲು ರಾಜ್ಯದಲ್ಲಿ ಆಗಸ್ಟ್ 23ರಿಂದ 9 ರಿಂದ 12ನೇ ತರಗತಿವರೆಗೆ ಶಾಲೆ-ಕಾಲೇಜುಗಳನ್ನು ಆರಂಭಿಸಲು ನಿರ್ಧಾರಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳೂರಿನಲ್ಲಿ ಗುರುವಾರ ಮಾಧ್ಯಮಗಳ ಜತೆ ಮಾತನಾಡಿದ ಅವರು; ಆಗಸ್ಟ್ 23ರಿಂದ 9 ರಿಂದ 12 ತರಗತಿವರೆಗೆ ಶಾಲೆ-ಕಾಲೇಜುಗಳನ್ನು ಆರಂಭಿಸಲಾಗುವುದು. ತಜ್ಞರ ಸಲಹೆಯಂತೆ ಬ್ಯಾಚ್ʼವೈಸ್ ತರಗತಿ ಆರಂಭಕ್ಕೆ ನಿರ್ಧರಿಸಲಾಗಿದೆ ಎಂದರು.

ಕಳೆದ ಎರಡು ವರ್ಷಗಳಿಂದ ಶೈಕ್ಷಣಿಕ ಚಟುವಟಿಕೆಗಳು ಬಂದ್‌ ಆಗಿವೆ. ವಿದ್ಯಾರ್ಥಿಗಳಿ ಆನ್‌ಲೈನ್‌ ಮೂಲಕ ಮಾತ್ರ ಕಲಿಯುತ್ತಿದ್ದಾರೆ. ಶಿಕ್ಷಣ ವ್ಯವಸ್ಥೆ ಯಾವುದೇ ಕಾರಣಕ್ಕೂ ಹಳಿತಪ್ಪಬಾರದು ಎನ್ನುವುದು ಸರಕಾರದ ಉದ್ದೇಶ ಎಂದು ಅವರು ಹೇಳಿದರು.

ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಹಾರ ತುರಾಯಿಗಳ ಬದಲಾಗಿ ಕನ್ನಡ ಪುಸ್ತಕ ಕೊಡುವ ಮೂಲಕ ಸ್ವಾಗತಿಸಲಾಯಿತು.

LEAVE A REPLY

Please enter your comment!
Please enter your name here