33.6 C
Karnataka
Tuesday, May 14, 2024

    ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ತಾವು ಬರೆದ ಪುಸ್ತಕ ಕಳುಹಿಸಿದ ಸಿದ್ಧರಾಮಯ್ಯ

    Must read

    BENGALURU AUG 16

    ಬಿಜೆಪಿ ಎಂಬ ಸುಳ್ಳಿನ ಫ್ಯಾಕ್ಟರಿಯು ಉತ್ಪಾದಿಸಿ ಹಂಚುತ್ತಿರುವ ಸುಳ್ಳುಗಳ ಕುರಿತು ಜನರಿಗೆ ಸತ್ಯ ಹೇಳುವುದರ ಜೊತೆಗೆ ಆ ಬಗ್ಗೆ ಅರಿವು ಮೂಡಿಸುವಂತೆ ಕಾಂಗ್ರೆಸ್ ಪಕ್ಷದ ಜಿಲ್ಲಾ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರಿಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

    ರಚನಾತ್ಮಕ ಹೋರಾಟದ ಮೂಲಕ ಮನುಷ್ಯ ವಿರೋಧಿಯಾದ ಬಿಜೆಪಿಯ ಕ್ರೂರ ಹುನ್ನಾರಗಳನ್ನು ಬಯಲಿಗೆಳೆದು ಸೋಲಿಸುವುದೆ ಇಂದಿನ ಎಲ್ಲ ಸಮಸ್ಯೆಗಳಿಗೆ ಇರುವ ನಿಜವಾದ ಪರಿಹಾರ. ಹಾಗೆ ಮಾಡಬೇಕೆಂದರೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ವಿಷಯಗಳನ್ನು ಅಧ್ಯಯನ ಮಾಡಿ ತಿಳಿದುಕೊಳ್ಳುವುದು ಬಹಳ ಮುಖ್ಯ ಎಂದು ಜಿಲ್ಲಾ ಅಧ್ಯಕ್ಷರಿಗೆ ಪತ್ರ ಬರೆದು ಸಿದ್ದರಾಯ್ಯ ಅವರು ಮನವಿ ಮಾಡಿದ್ದಾರೆ.

    ನಾನು ಬರೆದಿರುವ ‘ಜನಪೀಡಕ ಸರ್ಕಾರ’, ‘ ಐದು ಕಾಯ್ದೆಗಳು- ಅಸಂಖ್ಯಾತ ಸುಳ್ಳುಗಳು’ ಮತ್ತು ‘ಪೆಟ್ರೋಲ್, ಡೀಸೆಲ್ ನೂರು –ಜನರ ಬದುಕು ನುಚ್ಚು ನೂರು’ ಎಂಬ ಕಿರು ಪುಸ್ತಕಗಳನ್ನು ತಮ್ಮ ಓದಿಗಾಗಿ ಕಳಿಸುತ್ತಿದ್ದೇನೆ. ತಾವುಗಳು ಈ ವಿಚಾರಗಳನ್ನು ಓದಿ, ಕಿರು ಪುಸ್ತಕಗಳ ಕೊರತೆಯಾದರೆ ಪಕ್ಷದ ಶಿಷ್ಟಾಚಾರದಂತೆ ಮುದ್ರಿಸಿಕೊಂಡು ಎಲ್ಲ ಬೂತು ಮಟ್ಟದ ಕಾರ್ಯಕರ್ತರೂ ಓದುವಂತೆ ಮಾಡಿ ಜನರನ್ನು ನಿಜದ ಬೆಳಕಿನ ಕಡೆಗೆ ಮುನ್ನಡೆಸಬೇಕೆಂದು ಅವರು ಕೋರಿದ್ದಾರೆ.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!