ಇನ್ನುಕೆಂಗೇರಿವರೆಗೂ ಮೆಟ್ರೋದಲ್ಲಿ ಹೋಗಿ ಬರಬಹುದು

BENGALURU AUG 29

ಮೈಸೂರು ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ಮೆಟ್ರೋ ನಿಲ್ದಾಣದ ವರೆಗಿನ 7.5 ,ಕಿ ಮೀ ಮೆಟ್ರೋ ನೇರಳೆ ಮಾರ್ಗವನ್ನು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹಾಗೂ ಕೇಂದ್ರ ವಸತಿ, ನಗರ ವ್ಯವಹಾರ, ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವರಾದ ಹರ್ದಿಪ್ ಸಿಂಗ್ ಪುರಿ ಹಸಿರು ನಿಶಾನೆ ತೋರುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್ , ವಿ ಸೋಮಣ್ಣ, ಎಸ್ ಟಿ ಸೋಮಶೇಖರ, ಕೆ. ಗೋಪಾಲಯ್ಯ, ಮುನಿರತ್ನ , ಸಂಸದರಾದ ಪಿ ಸಿ ಮೂಹನ್, ತೇಜಸ್ವಿ ಸೂರ್ಯ, ಶಾಸಕ ಮುನಿರಾಜುಗೌಡ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here