ಹಳ್ಳಿಗಳತ್ತ ಸಾಗಲು ಇಲಾಖೆ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ

BENGALURU AUG 31

ಸರ್ಕಾರದ ಕಾರ್ಯದರ್ಶಿಗಳು ಜಿಲ್ಲೆ, ತಾಲ್ಲೂಕು, ಹಳ್ಳಿಗಳಿಗೆ ಭೇಟಿ ನೀಡಬೇಕು. ತಮ್ಮ ಇಲಾಖೆಯ ಕಾರ್ಯಕ್ರಮ ಅನುಷ್ಠಾನವನ್ನು ಖುದ್ದಾಗಿ ಪರಿಶೀಲನೆ ನಡೆಸಬೇಕು. ತೊಡಕುಗಳಿದ್ದಲ್ಲಿ, ಸ್ಥಳದಲ್ಲಿಯೇ ಬಗೆಹರಿಸಬೇಕು. ಆಗ ಜನರ ಬಳಿಗೆ ಸರ್ಕಾರ ಹೋದಂತಾಗುತ್ತದೆ. ಜನ ಇದ್ದಲ್ಲಿ ಅಭಿವೃದ್ದಿಯಾಗಲು ಸಾಧ್ಯ.

ಇದು ಇಂದು ವಿಕಾಸಸೌಧ ದಲ್ಲಿ ಮುಖ್ಯ ಕಾರ್ಯದರ್ಶಿಗಳ ಆಹ್ವಾನದ ಮೇರೆಗೆ ಸರ್ಕಾರದ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿ ಗಳೊಂದಿಗೆ ಕೆಡಿಪಿ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅಧಿಕಾರಿಗಳಿಗೆ ನೀಡಿದ ಸೂಚನೆ.

ಹಿರಿಯ ಅಧಿಕಾರಿಗಳ ಈ ಕ್ರಮದಿಂದ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತವೆ. ಜನರು ಅಭಿವೃದ್ಧಿ ಸುತ್ತ ಸುತ್ತುವುದಲ್ಲ, ಅಭಿವೃದ್ಧಿ ಜನರಿದ್ದ ಕಡೆ ಆಗಬೇಕು. ಆದ್ದರಿಂದ ಇಲಾಖೆ ಮುಖ್ಯಸ್ಥರು ಜಿಲ್ಲಾ ಮತ್ತು ತಾಲ್ಲೂಕುಗಳಿಗೆ ಭೇಟಿ ನೀಡಬೇಕು ಎಂದರು.‌

ಆಡಳಿತದಲ್ಲಿ ಪಾರದರ್ಶಕತೆ ಇರಬೇಕು. ಇಲಾಖೆಗಳಲ್ಲಿ ಭ್ರಷ್ಟಾಚಾರ ನಿಯಂತ್ರಿಸಿ, ಕಡತ ವಿಲೇವಾರಿಯನ್ನು ವಿಳಂಬ ಮಾಡಬೇಡಿ. ಜನಸಾಮಾನ್ಯರ ಕೆಲಸಗಳಲ್ಲಿ ವಿಳಂಬ ಮಾಡಬಾರದು. ಅವರು ಕಚೇರಿಗಳಿಗೆ ಭೇಟಿ ನೀಡಿದಾಗ ಗೌರವ, ಸೌಜನ್ಯದಿಂದ ನಡೆಸಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ನುಡಿದರು.

ಈ ಜಡತ್ವ ಒಂದೇ ದಿನದಲ್ಲಿ ಬದಲಾಗಲು ಸಾಧ್ಯವಿಲ್ಲ. ಆದರೆ ಈ ಬದಲಾವಣೆ ತರುವಲ್ಲಿ ನಿಮ್ಮ ಪಾತ್ರ ಬಹುಮುಖ್ಯವಾದುದು. ನಾವೆಲ್ಲರೂ ಸೇರಿ ಮಾಡೋಣ. ಧೈರ್ಯವಾಗಿ ಜನಪರ ಕೆಲಸ ಮಾಡಬೇಕು.ಆಡಳಿತದಲ್ಲಿ ಬದಲಾವಣೆ ಬಂದರೆ, ಜನರ ಬದುಕಿನಲ್ಲಿ ಬದಲಾವಣೆ ತರಲು ಸಾಧ್ಯ. ಸಕಾರಾತ್ಮಕ ಚಿಂತನೆಯೊಂದಿಗೆ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸಲಹೆ ನೀಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಆಡಳಿತ ಸುಧಾರಣೆಗೆ ಕ್ರಮ

ಆಡಳಿತ ಸುಧಾರಣಾ ಆಯೋಗದ ಶಿಫಾರಸುಗಳಲ್ಲಿ ಆಡಳಿತಾತ್ಮಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಿಶೀಲಿಸಲು ಸಲಹಾ ಸಮಿತಿಯನ್ನು ರಚಿಸಲಾಗುತ್ತಿದ್ದು, ನವೆಂಬರ್ 1 ರಿಂದ ಹಲವು ಆಡಳಿತ ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದು ಅವರು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ತಿಳಿಸಿದರು..

ಸ್ವಚ್ಛ ಭಾರತ ಕಾರ್ಯಕ್ರಮಕ್ಕೆ ಒತ್ತು ನೀಡಿ

ಸ್ವಚ್ಛ ಭಾರತ ಯೋಜನೆ ಬಹಳ ಮಹತ್ವದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆ. ಹೀಗಾಗಿ ಯೋಜನೆಯ‌ ಅನುಷ್ಠಾನದಲ್ಲಿ ನಾವು ಹಿಂದೆ ಬಿಡಬಾರದು. ಕೇಂದ್ರ ಸರ್ಕಾರದ ಯೋಜನೆಗಳು ಪರಿಣಾಮವಾಗಿ ಕಾರಿಯಾಗಿ ಅನುಷ್ಠಾನಗಳ್ಳುವಂತೆ ನೋಡಿಕೊಳ್ಳಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

LEAVE A REPLY

Please enter your comment!
Please enter your name here