ಕುಮಟಾ-ತಡಸ ಹೆದ್ದಾರಿ ಸುಧಾರಣೆ ಕಾಮಗಾರಿಗೆ ಚಾಲನೆ

SHIGGAOV, SEPT 1

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಕ್ಷೇತ್ರ ಶಿಗ್ಗಾಂವ ತಾಲೂಕಿನ ತಡಸ ಗ್ರಾಮದಲ್ಲಿ ಬುಧವಾರ ಲೋಕೋಪಯೋಗಿ ಇಲಾಖೆಯ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ನೂತನ ಪ್ರವಾಸಿ ಮಂದಿರ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು.

ರೂ.3.30ಕೋಟಿ ವೆಚ್ಚದ ಕುಮಟಾ-ತಡಸ ಹೆದ್ದಾರಿ ಸುಧಾರಣೆ, ರೂ.2 ಕೋಟಿ ವೆಚ್ಚದ ಪಡುಬಿದ್ರಿ-ಚಿಕ್ಕಲಗುಡ್ಡ ಹೆದ್ದಾರಿ ಸುಧಾರಣಾ ಕಾಮಗಾರಿಗಳಿಗೆ ಭೂಮಿ ಪೂಜೆ ಹಾಗೂ ರೂ.2 ಕೋಟಿ ವೆಚ್ಚದಲ್ಲಿ ನಿರ್ಮಾಣ ಉದ್ದೇಶಿತ ನೂತನ ಪ್ರವಾಸಿ ಮಂದಿರ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದರು.


ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಲೋಕೋಪಯೋಗಿ ಖಾತೆ ಸಚಿವರಾದ ಸಿ.ಸಿ ಪಾಟೀಲ, ಉಪಸ್ಥಿತರಿದ್ದರು.
ಸಿ.ಸಿ. ಪಾಟೀಲರ ಹೇಳಿಕೆ: ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳುವಾಗ ನಿಗದಿತ ತಾಂತ್ರಿಕ ಗುಣಮಟ್ಟಗಳನ್ನು ಕಾಪಾಡಿಕೊಳ್ಳಲು ಆದ್ಯತೆ ನೀಡಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಇದರಿಂದ ರಸ್ತೆಗಳ ತಾಳಿಕೆ ಮತ್ತು ಬಾಳಿಕೆಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಿ.ಸಿ. ಪಾಟೀಲರು ವಿವರಿಸಿದರು.

LEAVE A REPLY

Please enter your comment!
Please enter your name here