ಮೈಸೂರು ದಸರಾ ಉದ್ಘಾಟನೆಗೆ ಎಸ್ ಎಂ ಕೃಷ್ಣ

BENGALURU SEP 28

ಈ ಬಾರಿಯ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ, ರಾಜಕೀಯ ಮುತ್ಸುದ್ದಿ ಎಸ್.ಎಂ‌.ಕೃಷ್ಣ ಅವರ ಹೆಸರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಂತಿಮಗೊಳಿಸಿ ಪ್ರಕಟಿಸಿದರು.

ಇಡೀ ವಿಶ್ವವನ್ನೇ ಬೆಂಗಳೂರಿನತ್ತ ತಿರುಗಿ ನೋಡುವಂತೆ ಮಾಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆಯ್ಕೆ ಮಾಡಿರುವ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಅವರ ನಿರ್ಧಾರ ಸ್ವಾಗತಾರ್ಹ ಹಾಗೂ ಹಿರಿಯ ಮುತ್ಸುದ್ಧಿ ಎಸ್. ಎಂ.ಕೃಷ್ಣ ಅವರಿಗೆ ಸಹಕಾರ ಸಚಿವರು ಹಾಗೂ ಮೈಸೂರು-ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here