HUBBALLI OCT 15
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಂಗಕರ್ಮಿ ಜಿ.ಕೆ. ಗೋವಿಂದ ರಾವ್ (86) ಅವರು ಶುಕ್ರವಾರ ಹುಬ್ಬಳ್ಳಿಯ ತಮ್ಮ ಪುತ್ರಿಯ ಮನೆಯಲ್ಲಿ ನಿಧನರಾದರು.
ಬೆಂಗಳೂರಿನಲ್ಲಿದ್ದ ಅವರು ಆರೋಗ್ಯ ಬಿಗಡಾಯಿಸಿದ್ದ ಕಾರಣ ಹುಬ್ಬಳ್ಳಿಯ ಪುತ್ರಿಯ ಮನೆಗೆ ತೆರಳಿದ್ದರು. ಎರಡು ತಿಂಗಳಿಂದ ಅಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು.
ಪುತ್ರಿ ಶ್ಯಾಮಲಾ ಗುರುಪ್ರಸಾದ್ ಮನೆಯಲ್ಲಿ ಉಳಿದುಕೊಂಡಿದ್ಧಅವರಿಗೆ ಅಳಿಯ ಹುಬ್ಬಳ್ಳಿಯ ಖ್ಯಾತ ನೇತ್ರ ತಜ್ಞ ವೈದ್ಯ ಡಾ. ಗುರು ಪ್ರಸಾದ್ -DR GURU PRASAD_ ಚಿಕಿತ್ಸೆ ಕೊಡಿಸುತ್ತಿದ್ದರು. ಕೇಶ್ವಾಪುರದ ಮುಕ್ತಿದಾಮದಲ್ಲಿ ಬೆಳಿಗ್ಗೆಯೇ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಜಿ.ಕೆ. ಗೋವಿಂದ ರಾವ್ 1937 ಏಪ್ರಿಲ್ 27ರಂದು ಬೆಂಗಳೂರಿನಲ್ಲಿ ಜನಿಸಿದ್ದರು. ಇಂಗ್ಲಿಷ್ ಸಾಹಿತ್ಯದ ಅಧ್ಯಯನ ನಡೆಸಿದ ಅವರು ಇಂಗ್ಲಿಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ರಂಗಭೂಮಿ, ಸಿನಿಮಾರಂಗದ ಒಡನಾಟ ಅವರಿಗಿದೆ.
ಗೃಹ, ಮಿಥಿಲೆಯ ಸೀತೆಯರು, ಕರ್ಫ್ಯೂ, ಶಾಸ್ತ್ರಿ ಸೇರಿದಂತೆ ಹಲವು ಚಿತ್ರಗಳಲ್ಲಿ ಗೋವಿಂದ ರಾವ್ ನಟಿಸಿದ್ದರು. ಗೋವಿಂದ ರಾವ್ ಅವರು ತಮ್ಮ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಗೋವಿಂದರಾವ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.