22 C
Karnataka
Tuesday, May 21, 2024

    ರಾಜ್ಯದಲ್ಲಿ OMICRON : ಶುಕ್ರವಾರ ತಜ್ಞರೊಂದಿಗೆ ಸಿಎಂ ಸಭೆ; ಹೊಸ ಮಾರ್ಗಸೂಚಿ ಸಂಭವ

    Must read

    NEW DELHI DEC 2

    ರಾಜ್ಯದಲ್ಲಿ-karnataka- ಎರಡು ಒಮೈಕ್ರಾನ್ ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶುಕ್ರವಾರ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಪರಿಣತರೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ-basavaraja bommai- ಅವರು ತಿಳಿಸಿದರು.

    ರಾಜ್ಯದಿಂದ NCBS ಗೆ ಕಳುಹಿಸಿದ್ದ ಮಾದರಿಯಲ್ಲಿ ಕೇಂದ್ರ ಸರ್ಕಾರವು ಇಂದು ಎರಡು ಒಮೈಕ್ರಾನ್ ಪ್ರಕರಣಗಳನ್ನು ದೃಢ ಪಡಿಸಿದೆ. ಆದರೆ ವಿವರವಾದ ಪರೀಕ್ಷಾ ವರದಿ ಬಂದಿಲ್ಲ. ಪ್ರಕರಣಗಳ ಸಂಪೂರ್ಣ ವಿವರ ಪಡೆಯುವಂತೆ ರಾಜ್ಯದ ಆರೋಗ್ಯ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ. ನಾಳೆ ಪರಿಣತರು ಹಾಗೂ ಹಿರಿಯ ಅಧಿಕಾರಿಗಳ ತುರ್ತು ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಹೊಸ ಹೊಸ ತಳಿಗಳ ಸೋಂಕನ್ನು ನಿಯಂತ್ರಿಸುವ ಕುರಿತು ರಾಜ್ಯ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಗುವುದು. ಕೇಂದ್ರದ ಪರಿಣತರ ಜೊತೆಗೂ ಈ ಕುರಿತು ಚರ್ಚಿಸಲಾಗುವುದು ಹಾಗೂ ಹೊಸ ಮಾರ್ಗ ಸೂಚಿಯನ್ನು ರೂಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

    ಪ್ರಕರಣ ವರದಿಯಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವರನ್ನು ಮತ್ತೊಮ್ಮೆ ಭೇಟಿಯಾಗಿದ್ದೇನೆ. ಈ ಪ್ರಕರಣದ ವಿವರ ಒದಗಿಸುವುದಾಗಿ ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಈ ಪ್ರಬೇಧದ ಸೋಂಕು ತೀವ್ರ ಸ್ವರೂಪದಲ್ಲ ಎಂದು ತಿಳಿದು ಬಂದಿದೆ ಎಂದು ಅವರು ನುಡಿದರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!