BMTC ಬಸ್ ನಲ್ಲಿ ಸುರೇಶ್ ಕುಮಾರ್ ಸಂಚಾರಕ್ಕೆ ಮೆಚ್ಚುಗೆ

BENGALURU DEC 31

ಇಂದು ಮುಂಜಾನೆಯೇ ಬೆಂಗಳೂರು ನಗರದಿಂದ ಮಾಗಡಿ ರಸ್ತೆಯಲ್ಲಿ ಬಿಎಂಟಿಸಿ ಬಸ್ ಮೂಲಕ ಸಂಚರಿಸಿ ಸರಳತೆಯನ್ನು ಮೆರೆದ ಮಾಜಿ ಸಚಿವ ಸುರೇಶ್ ಕುಮಾರ್-sureshkumar- ಅವರ ನಡೆಗೆ ಸಾರ್ವಜನಿಕರಿಂದ‌ ವ್ಯಾಪಕ ಮೆಚ್ಚುಗೆ‌ ವ್ಯಕ್ತವಾಗಿದೆ.

ಬಸವೇಶ್ವರ ನಗರದ ತಮ್ಮ ಮನೆಯಿಂದ ಮಾಗಡಿ ರಸ್ತೆಯ ಸುಮನಹಳ್ಳಿ ಬಸ್ ನಿಲ್ದಾಣದವರೆಗೂ ಒಬ್ಬರೇ ನಡೆದು ಬಂದು ಅಲ್ಲಿಂದ ತಮ್ಮೊಬ್ಬ ಸ್ನೇಹಿತರೊಂದಿಗೆ ಬಿ.ಎಂ.ಟಿ.ಸಿ ಬಸ್ ಹತ್ತಿದ ಅವರು ತಾವರೆಕೆರೆಯವರೆಗೂ ಬಸ್ ನಲ್ಲಿ ಸಂಚರಿಸಿ ಬಸ್ ಪ್ರಯಾಣಿಕರ ಕುಶಲೋಪರಿ ವಿಚಾರಿಸಿದ್ದಾರೆ.

ನಿರ್ವಾಹಕರು ಬೇಡವೆಂದರೂ ಕೇಳದೇ ತಮ್ಮ ಜೊತೆಗಿದ್ದ ಒಬ್ಬರೇ ಸ್ನೇಹಿತರದ್ದೂ ಸೇರಿದಂತೆ ತಲಾ ಇಪ್ಪತ್ತು ರೂಪಾಯಿ‌ ಕೊಟ್ಟು ಟಿಕೇಟು ಪಡೆದು ಮಾದರಿಯಾಗಿದ್ದಾರೆ. ತಮ್ಮೊಂದಿಗೆ ಅಂಗರಕ್ಷಕರನ್ನು ಸಹ ಕರೆದೊಯ್ಯದೇ ತಮ್ಮ ಎಂದಿನ ಸರಳ ನಡೆಯನ್ನು ಅವರು‌ ಅನುಸರಿಸಿದ್ದಾರೆ.

LEAVE A REPLY

Please enter your comment!
Please enter your name here