23.5 C
Karnataka
Monday, May 20, 2024

    Guest Lecturers:ಅತಿಥಿ ಉಪನ್ಯಾಸಕರ ಬೇಡಿಕೆ: ಒಂದೆರಡು ದಿನದಲ್ಲಿ ಸಿಹಿಸುದ್ದಿ ಎಂದ ಸಚಿವರು

    Must read

    BENGALURU JAN 11

    ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

    ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳನ್ನು ಕುರಿತು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ತಮ್ಮ ನೇತೃತ್ವದಲ್ಲಿ ಮಂಗಳವಾರ ನಡೆದ ಮೂರು ತಾಸುಗಳ ಸಭೆಯ ನಂತರ ಅವರು ಈ ಭರವಸೆ ನೀಡಿದರು. ಸಭೆಯಲ್ಲಿ ಉಪನ್ಯಾಸಕರಿಗೆ ಸಂಬಂಧಿಸಿದ ನಾಲ್ಕೈದು ಸಂಘಗಳ ಪ್ರತಿನಿಧಿಗಳೂ ಭಾಗವಹಿಸಿದ್ದರು.

    ಸಭೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ತಿನ ಹಲವು ಸದಸ್ಯರೊಂದಿಗೆ ವಿಷಯವನ್ನು ಕುರಿತು ಚರ್ಚಿಸಲಾಯಿತು. ಜೊತೆಗೆ ಅತಿಥಿ ಉಪನ್ಯಾಸಕರ ಸಂಘಗಳ ಪರವಾಗಿ ಸಲ್ಲಿಸಿದ ಅಹವಾಲುಗಳನ್ನು ಕೂಡ ಪರಿಶೀಲಿಸಲಾಯಿತು.

    ನಂತರ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು. ಸಿಎಂ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆಯುತ್ತಿರುವ ಕಾರಣ ಒಂದೆರಡು ದಿನಗಳಲ್ಲಿ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು. ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥದಲ್ಲಿ ಆರ್ಥಿಕ ಹೊರೆ ಮುಂತಾದ ಅಂಶಗಳಿವೆ. ಒಟ್ಟಿನಲ್ಲಿ ವಿಚಾರವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುತ್ತಿದೆ ಎಂದರು.

    ಸಭೆಯಲ್ಲಿ ಎಂಎಲ್ಸಿಗಳಾದ ಆಯನೂರು ಮಂಜುನಾಥ್, ಶಶಿಲ್ ನಮೋಶಿ, ಪುಟ್ಟಣ್ಣ, ಚಿದಾನಂದಗೌಡ, ಎಸ್.ವಿ.ಸುಂಕನೂರು, ಅರುಣ್ ಶಹಾಪುರ, ವೈ.ಎ. ನಾರಾಯಣಸ್ವಾಮಿ, ಕೆ.ಟಿ.ಶ್ರೀಕಂಠೇಗೌಡ, ಭೋಜೇಗೌಡ ಮತ್ತು ಹನುಮಂತ ನಿರಾಣಿ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್ ಮತ್ತು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಉಪಸ್ಥಿತರಿದ್ದರು.

    spot_img

    More articles

    1 COMMENT

    1. I am A1st digree students There is no proper class fill be in my college because most of teacher will be geust lecture will be there please solve the guest lecturer problem s

    LEAVE A REPLY

    Please enter your comment!
    Please enter your name here

    Latest article

    error: Content is protected !!