23.5 C
Karnataka
Friday, May 10, 2024

    ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5 ಟಿ ಸೂತ್ರ: ಪ್ರಧಾನಿ ಮೆಚ್ಚುಗೆ

    Must read

    BENGALURU JAN 13

    ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5 ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ ನಂತರ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ಕೈಗೊಂಡಿರುವ ಕ್ರಮಗಳನ್ನು ಪ್ರಧಾನಿಯವರಿಗೆ ವಿವರಿಸಲಾಯಿತು. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸುತ್ತಿರುವ ಕುರಿತು ಹಾಗೂ ರಾಜ್ಯದಲ್ಲಿ ಲಸಿಕೆ ಹಾಕಿಸಿಕೊಂಡವರ ಪ್ರಮಾಣ ದೇಶದ ಸರಾಸರಿಗಿಂತ ಹೆಚ್ಚಿರುವ ಕುರಿತು ಪ್ರಧಾನಿಯವರು ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ತಿಳಿಸಿದ್ದಾರೆ.

    ಇದರೊಂದಿಗೆ ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಕುರಿತು ಸಹ ಪ್ರಧಾನಿಯವರಿಗೆ ಮಾಹಿತಿ ನೀಡಲಾಯಿತು. ಹಾಗೂ ಆಕ್ಸಿಜನೇಟೆಡ್ ಬೆಡ್ ಗಳು ಮತ್ತು ಆಕ್ಸಿಜನ್ ಪ್ಲಾಂಟ್ ಗಳನ್ನು ಹೆಚ್ಚಿಸಲು ಕೇಂದ್ರದ ನೆರವು ಕೋರಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

    ರಾಜ್ಯದಲ್ಲಿ ಹೋಂ ಐಸೊಲೇಷನ್ ನಲ್ಲಿ ಇರುವವರ ಮೇಲ್ವಿಚಾರಣೆಗೆ ತಂತ್ರಜ್ಞಾನದ ಬಳಕೆಯನ್ನು ಪ್ರಧಾನಿಯವರು ಶ್ಲಾಘಿಸಿದರು ಎಂದು ಅವರು ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅಲೆ ಫೆಬ್ರವರಿ ತಿಂಗಳಲ್ಲಿ ಅತ್ಯಂತ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಮೊದಲ ಹಾಗೂ ಎರಡನೇ ಅಲೆಯನ್ನು ಎದುರಿಸಿದ ಅನುಭವದ ಆಧಾರದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.

    ಮೂರನೇ ಅಲೆಯ ಸಂದರ್ಭದಲ್ಲಿ ಶೇ. 94ಕ್ಕೂ ಹೆಚ್ಚು ಸೋಂಕಿತರು ಹೋಮ್ ಐಸೊಲೇಷನ್ ನಲ್ಲಿ ಇದ್ದಾರೆ. ಆದ್ದರಿಂದ ಅವರಲ್ಲಿ ವಿಶ್ವಾಸ ಮೂಡಿಸುವ ಹಾಗೂ ಅವರಿಗೆ ಔಷಧ ಪೂರೈಕೆಯೂ ಸೇರಿದಂತೆ ಸೂಕ್ತ ಆರೈಕೆಯನ್ನು ಖಾತರಿಪಡಿಸಲು ಆದ್ಯತೆ ನೀಡುವಂತೆ ಪ್ರಧಾನಿಯವರು ತಿಳಿಸಿದ್ದಾರೆ.

    ಭಾರತ ಸರ್ಕಾರವು ಹೆಚ್ಚಿನ ಪರೀಕ್ಷೆ ನಡೆಸುವಂತೆ ಹಾಗೂ ಕೇಂದ್ರ ಸರ್ಕಾರ ಒದಗಿಸಿರುವ 23,000 ಕೋಟಿ ರೂ. ಪ್ಯಾಕೇಜ್ ನಡಿ ಅಂಬ್ಯುಲೆನ್ಸ್ ಹಾಗೂ ಆರೋಗ್ಯ ಮೂಲಸೌಕರ್ಯ ಹೆಚ್ಚಿಸಲು ಕ್ರಮ ವಹಿಸುವಂತೆ ಸಲಹೆ ನೀಡಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.

    ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ 32 ಸಾವಿರ ಕೋಟಿ ಹಣವನ್ನು ಆರೋಗ್ಯ ಮೂಲಭೂತ ಸೌಕರ್ಯಕ್ಕಾಗಿ ಎರಡನೆಯ ನಂತರ ಒದಗಿಸಿದೆ. ಹಲವು ರಾಜ್ಯಗಳು ಇನ್ನೂ ಇದರ ಪ್ರಯೋಜನ ಪಡೆದಿಲ್ಲ. ಆರೋಗ್ಯ ಮೂಲಭೂತ ಸೌಕರ್ಯಗಳಾದ ಐಸಿಯು, ಆಕ್ಸಿಜನ್ ಪ್ಲಾಂಟ್, ಆಕ್ಸಿಜಿನೆಟೆಡ್ ಬೆಡ್ ಹಾಗೂ ಅಂಬುಲೆನ್ಸ್ ಸೇರಿದಂತೆ ಇತರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ರಾಜ್ಯಗಳು ಸಹ ತಮ್ಮ ಪಾಲನ್ನು ಸೇರಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿದೆ ಎಂದು ಸಲಹೆ ಕೊಟ್ಟರು.

    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!