ಬುಧವಾರದಿಂದ ಡಿಗ್ರಿ ಮತ್ತು ಪಿಯು ಕಾಲೇಜು ಆರಂಭ

ಶಾಲಾ ಸಮವಸ್ತ್ರ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ, ಶಿಕ್ಷಣ ಸಚಿವ ಬಿಸಿ ನಾಗೇಶ್ , ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಉಪಸ್ಥಿತರಿದ್ದರು.

BENGALURU FEB 14

ಬುಧವಾರ, ಫೆಬ್ರವರಿ 16ರಿಂದ ಪಿಯು ಮತ್ತು ಡಿಗ್ರಿ ಕಾಲೇಜುಗಳನ್ನುು ಆರಂಭಿಸಲು ಇಂದು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆ ತೀರ್ಮಾನಿಸಿದೆ.

ಸಭೆಯ ನಂತರ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಈ ವಿಷಯ ತಿಳಿಸಿದರು. ಎಲ್ಲೆಲ್ಲಿ ಸಮವಸ್ತ್ರ ಕಡ್ಡಾಯವಾಗಿದಿಯೋ ಅದನ್ನು ಪಾಲಿಸಲಾಗುವುದು. ಹೈಕೋರ್ಟಿನ ಮಧ್ಯಂತರ ಆದೇಶವನ್ನು ಪಾಲಿಸಲಾಗುವುದು ಎಂದು ತಿಳಿಸಿದರು.

ಹೈ ಕೋರ್ಟ್ ಆದೇಶದಂತೆ ಕಾಲೇಜು ಆಡಳಿತ ಮಂಡಳಿಗಳು ತೆಗೆದುಕೊಳ್ಳುವ ನಿರ್ಧಾರವನ್ನು ಜಾರಿಗೆ ತರಲು ಪೋಲೀಸ್ ಇಲಾಖೆ ಸಹಕಾರ ನೀಡಲಿದೆ ಎಂದು ಇಧೇ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶಾಂತಿ ಭಂಗವಾಗದಂತೆ ತಮ್ಮ ಇಲಾಖೆ ಶ್ರಮಿಸಲಿದೆ ಎಂದೂ ಹೇಳಿದರು.

ಬುಧವಾರದಿಂದಲೇ ಪದವಿ, ಎಂಜಿನಿಯರಿಂಗ್ ಕಾಲೇಜುಗಳು ಪುನಾರಂಭ

ಸಮವಸ್ತ್ರ ವಿವಾದದ ಹಿನ್ನೆಲೆಯಲ್ಲಿ ರಜೆ ನೀಡಲಾಗಿದ್ದ ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಸ್ನಾತಕೋತ್ತರ ತರಗತಿಗಳನ್ನು ಬುಧವಾರದಿಂದಲೇ ಪುನಾರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಹೀಗಾಗಿ, ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲ ಬಗೆಯ ಶಿಕ್ಷಣ ಸಂಸ್ಥೆಗಳಲ್ಲೂ ಭೌತಿಕ ತರಗತಿಗಳು ಮತ್ತೆ ಆರಂಭವಾಗಲಿವೆ. ರಜೆ ಹಿನ್ನೆಲೆಯಲ್ಲಿ ಈ ಸಂಸ್ಥೆಗಳಲ್ಲಿ ಆನ್ ಲೈನ್ ತರಗತಿಗಳನ್ನು ನಡೆಸಲಾಗುತ್ತಿದ್ದುದನ್ನು ಇಲ್ಲಿ ಸ್ಮರಿಸಬಹುದು.

LEAVE A REPLY

Please enter your comment!
Please enter your name here