ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

VIJAYANAGARA APR 17

ಯಾರೂ ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ. ಕರ್ನಾಟಕ ರಾಜ್ಯ ಇದನ್ನು ಸಹಿಸುವುದಿಲ್ಲ. ಕಾನೂನು ತನ್ನ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಎಲ್ಲಾ ಸಂಘಟನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.

ಹುಬ್ಬಳ್ಳಿಯಲ್ಲಿ ವಿವಾದಾತ್ಮಕ ಪೋಸ್ಟ್ ಗೆ ಸಂಬಂಧಿಸಿದಂತೆ ನಡೆದಿರುವ ಗಲಾಟೆ ಕುರಿತು ಅವರು ಇಂದು ಭಾ.ಜ.ಪ.ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗುಳ್ಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಈಗಾಗಲೇ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಯಾರೇ ಕಾನೂನನ್ನು ಕೈಗೆ ತೆಗೆದುಕೊಂಡರೂ ಕಠಿಣ ಕ್ರಮ ತೆಗೆದುಕೊಳ್ಳಲು ಪೊಲೀಸರು ಹಿಂದೆ ಮುಂದೆ ನೋಡುವುದಿಲ್ಲ. ಇದಕ್ಕೆ ಪ್ರಚೋದನೆ ನೀಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಇದಕ್ಕೆ ರಾಜಕೀಯ ಬಣ್ಣ ನೀಡುವುದು ಬೇಡ . ಈ ಘಟನೆಯನ್ನು ಕಾನೂನಾತ್ಮಕ ಘಟನೆ ಎಂತಲೇ ಕಾಣಬೇಕು. ಅಂದಾಗ ಮಾತ್ರ ಇಂಥವು ನಿಲ್ಲುತ್ತದೆ ಎಂದರು.

ಹುಬ್ಬಳ್ಳಿಯಲ್ಲಿ ನಿನ್ನೆ ಕಾನೂನನ್ನು ಕೈಗೆ ತೆಗೆದುಕೊಳ್ಳುವ ಕೆಲಸವಾಗಿದೆ. ಪೊಲೀಸರು ವಾಟ್ಸಾಪ್ ಪೋಸ್ಟ್ ಒಂದರ ಮೇಲೆ ಕ್ರಮ ತೆಗೆದುಕೊಂಡು ಬಂಧಿಸಿ ಎಲ್ಲಾ ಕ್ರಮ ತೆಗೆದುಕೊಂಡರೂ ಕೂಡ ಪ್ರಚೋದನಕಾರಿಯಾಗಿ ಪೊಲೀಸ್ ಠಾಣೆ ಎದುರಿಗೆ ಬಂದು ಗಲಾಟೆ ಮಾಡಿ ಪೊಲೀಸರಿಗೂ ಏಟು ಬೀಳುವಂತೆ ಮಾಡಿದ್ದಾರೆ. ತದನಂತರ ಹಳೆ ಹುಬ್ಬಳ್ಳಿಯ ವಿವಿಧ ಭಾಗಗಳಲ್ಲಿ ಕಲ್ಲು ತೂರಾಟ ಮಾಡಿರುವುದು ಅಕ್ಷಮ್ಯ ಅಪರಾಧ ಎಂದರು.

LEAVE A REPLY

Please enter your comment!
Please enter your name here