33.6 C
Karnataka
Friday, May 10, 2024

    Indian Stock Market:ಚಂಚಲಚಿತ್ತ ಪೇಟೆಯಲ್ಲಿ VALUE PICK ಒಂದೇ ಕ್ಷೇಮ

    Must read

    ಷೇರುಪೇಟೆಯ ಹೆಗ್ಗುರುತಾದ ಸೆನ್ಸೆಕ್ಸ್‌ ನಿರಂತರವಾಗಿ ಏರಿಳಿತಗಳನ್ನುಂಟುಮಾಡುತ್ತಿದ್ದು ಅನಿರೀಕ್ಷಿತ ಮಟ್ಟದ ಬದಲಾವಣೆಗಳನ್ನು ಬಿಂಬಿಸುತ್ತಿದ್ದು ಅವಕಾಶಗಳನ್ನು ಕಾಲ್ಪನಿಕವೆಂದಿನಿಸುವಂತೆ ಶೀಘ್ರವಾಗಿ ಕಣ್ಮರೆಯಾಗುವಂತೆ ಮಾಡುತ್ತಿದೆ.  ಕೊರೋನಾ ಸಮಯದ ನಂತರದಲ್ಲಿ ಪೇಟೆಯಲ್ಲಿ ಹೆಚ್ಚಿನ ಬದಲಾವಣೆಗಳನ್ನು ಕಾಣುತ್ತಿದ್ದೇವೆ.  ಈ ರೀತಿಯ ಅಸ್ಥಿರ ವಾತಾವರಣಕ್ಕೆ ಕಾರಣವೇನು? ಎಂಬುದು ಎಲ್ಲರ ಮನದಲ್ಲಿ ಕಾಡುತ್ತಿರುವ ಪ್ರಶ್ನೆಯಾಗಿದೆ.

    ಈಗಿನ ಪೇಟೆಗಳ ಚಲನೆಯನ್ನು ಪರಿಶೀಲಿಸಿದಾಗ ಅರಿವಾಗುವುದು ಅವು ಸೂಜಿ ಮತ್ತು ಪಿನ್‌ ಗಳ ಮೇಲೆ ನಿಂತಂತಿದೆ ಎಂಬ ಸಿಟಿ ಬ್ಯಾಂಕ್‌ ನವರ ಹೇಳಿಕೆ ಸಹಜತೆಯಿಂದ ಕೂಡಿದೆ ಎನಿಸುತ್ತದೆ.

    ಈ ವರ್ಷದ ಏಪ್ರಿಲ್‌ 29 ರಂದು 57,060 ರಲ್ಲಿದ್ದ ಸೆನ್ಸೆಕ್ಸ್‌  ಮೇ ತಿಂಗಳ ಮಧ್ಯಂತರದಲ್ಲಿ 52,800 ರ ಸಮೀಪಕ್ಕೆ ಕುಸಿದು ಮಾರ್ಕೆಟ್‌ ಕ್ಯಾಪಿಟಲೈಸೇಷನ್‌ ರೂ.241.34 ಲಕ್ಷ ಕೋಟಿಗೆ ಮೇ 12 ರಂದು ತಲುಪಿತು. ಅಲ್ಲಿಂದ ಸೆನ್ಸೆಕ್ಸ್‌ ಪುಟಿದೆದ್ದು ಮೇ ಅಂತ್ಯದಲ್ಲಿ 56,000 ಪಾಯಿಂಟುಗಳ ಸಮೀಪಕ್ಕೆ ಏರಿಕೆ ಕಂಡಿತು.  ಜೊತೆಗೆ ಮಾರ್ಕೆಟ್‌ ಕ್ಯಾಪಿಟಲೈಸೇಷನ್‌ ರೂ.258 ಲಕ್ಷ ಕೋಟೆ ಮೀರಿತು. 

    ಜೂನ್‌ ತಿಂಗಳ 17 ರಂದು  ಮಧ್ಯಂತರದಲ್ಲಿ ಸೆನ್ಸೆಕ್ಸ್‌  50,921 ನ್ನು ತಲುಪಿ ವಾರ್ಷಿಕ ಕನಿಷ್ಠದ ದಾಖಲೆ ಬರೆಯಿತು.  ಅಂದಿನ ಮಾರ್ಕೆಟ್‌ ಕ್ಯಾಪಿಟಲೈಸೇಷನ್‌ ರೂ.239.18 ಲಕ್ಷ ಕೋಟಿಗೆ ಕುಸಿದಿತ್ತು.  ಆದರೆ ಜುಲೈ ತಿಂಗಳ ಅಂತ್ಯದಲ್ಲಿ ಸೆನ್ಸೆಕ್ಸ್‌ 57,570 ಪಾಯಿಂಟುಗಳೊಂದಿಗೆ ಪೇಟೆಯ ಬಂಡವಾಳೀಕರಣ ಮೌಲ್ಯವು ರೂ.266.58 ಲಕ್ಷ ಕೋಟಿಗೆ ಜಿಗಿಯಿತು.  ಅಂದರೆ ಏಪ್ರಿಲ್‌ ತಿಂಗಳ ಅಂತ್ಯದಲ್ಲಿ 57,000 ಪಾಯಿಂಟುಗಳಲ್ಲಿದ್ದುದು ಜೂನ್‌ ತಿಂಗಳ ಮಧ್ಯಂತರದಲ್ಲಿ 50,921 ಪಾಯಿಂಟುಗಳಿಗೆ ಕುಸಿದು ಮತ್ತೆ ಜುಲೈ ಅಂತ್ಯಕ್ಕೆ 57 ಸಾವಿರದ ಗಡಿ ದಾಟಿರುವುದು  ಹೂಡಿಕೆಯೆನಿಸದು.

      ಶುಕ್ರವಾರ ಸೆಪ್ಟೆಂಬರ್‌ 9 ರಂದು ಸೆನ್ಸೆಕ್ಸ್‌ 60,000 ದ ಗಡಿ ದಾಟಿ ಮತ್ತೆ ಹಿಂದಿರುಗಿ 59,793.14 ರಲ್ಲಿ ಕೊನೆಗೊಂಡಿದೆ.  ಅಂದಿನ ಪೇಟೆಯ ಬಂಡವಾಳೀಕರಣ ಮೌಲ್ಯವು ರೂ.283.03 ಲಕ್ಷ ಕೋಟಿಯನ್ನು ತಲುಪಿ ಸರ್ವಕಾಲೀನ ದಾಖಲೆ ನಿರ್ಮಿಸಿದೆ.  ಇದು ಒಂದು ರೀತಿಯ ವ್ಯವಹಾರಿಕತೆಗೆ ಪುಷ್ಠಿ ನೀಡುವಂತಹುದಾಗಿದೆ.   ಇಂತಹ ವಾತಾವರಣದಲ್ಲಿ ಅನೇಕ ಕಂಪನಿಗಳ ಷೇರಿನ ಬೆಲೆ ಚಲನೆಗಳನ್ನು ಹೆಸರಿಸಬಹುದು.  

    ಜೂನ್‌ 16, 2022 ರಂದು ಅಗ್ರಮಾನ್ಯ, ಪ್ರಮುಖ ಕಂಪನಿಗಳಾದ ಬಜಾಜ್‌ ಫೈನಾನ್ಸ್‌, ಸಿಯಟ್‌, ಗ್ಲೆನ್‌ ಮಾರ್ಕ್‌ ಫಾರ್ಮ,  ಗ್ರಾಫೈಟ್‌ ಇಂಡಿಯಾ, ಗ್ರಾಸಿಂ, ಗುಜರಾತ್‌ ಗ್ಯಾಸ್‌, ಹಿಂಡಾಲ್ಕೋ, ಹಿಂದೂಸ್ಥಾನ್‌ ಝಿಂಕ್‌, ಇಂಡಸ್‌ ಇಂಡ್‌ ಬ್ಯಾಂಕ್‌, ಇನ್ಫೋಸಿಸ್‌, ಎಲ್‌ ಐ ಸಿ ಹೌಸಿಂಗ್‌, ಎನ್‌ ಎಂ ಡಿ ಸಿ, ಸೇಲ್‌, ಟಾಟಾ ಸ್ಟೀಲ್‌, ಟೆಕ್‌ ಮಹಿಂದ್ರ, ಅಲ್ಟ್ರಾಟೆಕ್‌ ಮುಂತಾದವುಗಳು ವಾರ್ಷಿಕ ಕನಿಷ್ಠ ಮಟ್ಟಕ್ಕೆ ಇಳಿದವು.  ಆದರೆ ಕೇವಲ ಎರಡು/  ಮೂರು ತಿಂಗಳುಗಳಲ್ಲೇ ಅವು ಗಳಿಸಿಕೊಟ್ಟ ಅವಕಾಶಗಳು ಹೇಗಿತ್ತೆಂದರೆ  ಷೇರುಪೇಟೆಯಲ್ಲಿ ಇಷ್ಟು ಸುಲಭವಾಗಿ ಸಂಪಾದನೆ ಮಾಡಬಹುದೆಂಬ ಚಿಂತನೆಯಿಂದ ಮತ್ತಷ್ಟು ಹಣವನ್ನು ತೊಡಗಿಸಿರಲೂಬಹುದು. ಈ ಕಂಪನಿಗಳು ಯಾವ ರೀತಿಯಲ್ಲಿ ಪುಟಿದೆದ್ದವು ಎಂಬುದಕ್ಕೆ ಈ ಕೋಷ್ಠಕದ ಮೇಲೆ ಕಣ್ಣಾಯಿಸಿರಿ.

    ಕಂಪನಿ ಹೆಸರುಪೇಟೆಯ ಕನಿಷ್ಠ ದರ 16/06/2022ಪೇಟೆಯ ಗರಿಷ್ಠ ದರ 10/09/2022ವಾರ್ಷಿಕ ಕನಿಷ್ಠ ದರ
    ಬಜಾಜ್ ಫೈನಾನ್ಸ್5,365.607,320.005,235.60( 17/06)
    ಸಿಯಟ್911.101,431.25890(20/06)
    ಗ್ಲೆನ್‌ ಮಾರ್ಕ್‌ ಫಾರ್ಮ363388348.90 (20/06)
    ಗ್ರಾಫೈಟ್382.25408350.20(20/06)
    ಗ್ರಾಸಿಂ1,278.151,797.851,276.90(17/06)
    ಗುಜರಾತ್ ಗ್ಯಾಸ್421.85519.00403.80(23/06)
    ಹಿಂಡಾಲ್ಕೊ333.00430.60309(20/06)
    ಹಿಂದೂಸ್ಥಾನ್ ಝಿಂಕ್207.25291.90242.40(06/07)
    ಇಂಡಸ್‌ ಇಂಡ್‌ ಬ್ಯಾಂಕ್‌806.001,149.50763.75(23/06)
    ಇನ್ಫೋಸಿಸ್1,392.151,519.801,367.20(17/06)
    ಎಲ್  ಸಿ ಹೌಸಿಂಗ್‌309.00439.40291.75(20/06)
    ಎನ.ಎಂಡಿಸಿ107.45125.1099.60(15/07)
    ಹೆಚ್‌ ಡಿ ಎಫ್‌ ಸಿ ಬ್ಯಾಂಕ್‌1,278.001,509.001,271.75 (17/06)
    ಸೇಲ್66.6582.7563.60 (20/06)
    ಬಿ ಪಿ ಸಿ ಎಲ್‌310.35341.55293.50(21/06)
    ಟೆಕ್ ಮಹೀಂದ್ರ971.151,131.95971.15(16/06)
    ಅಲ್ಟ್ರಾಟೆಕ್5,2807,0275,158.05(17/06)

    ಈ ಪ್ರಮಾಣದ ಏರಿಕೆಯನ್ನು ಕೇವಲ ಒಂದೇ ತ್ರೈಮಾಸಿಕದಲ್ಲಿ ಪ್ರದರ್ಶಿಸಿರುವುದು ಉಳಿತಾಯಕ್ಕಿಂತ ಹೂಡಿಕೆಯಾಗಿಯೇ ಆಯ್ಕೆ ಮಾಡಿಕೊಳ್ಳುವುದು ಸುರಕ್ಷತೆಯ ದೃಷ್ಠಿಯಿಂದ ಸೂಕ್ತವಾಗಿದೆ.   ಉಳಿತಾಯವೆಂದರೆ ದೀರ್ಘಕಾಲೀನ ಚಿಂತನೆಯೊಂದಿಗೆ ಮಾಡಿ, ಸಮಯಬದ್ಧವಾಗಿ ಮಾಸಾಶನ ಒದಗಿಸುವುದಾಗಿದೆ.  

    ಅಂದರೆ ಷೇರುಪೇಟೆಯ ದೃಷ್ಠಿಯಿಂದ ಲಾಭಾಂಶವನ್ನು ಪಡೆಯುವುದಾಗಿದೆ.  ಆದರೆ ಅಲ್ಪಕಾಲೀನ ಸಮಯದಲ್ಲಿ ಅಪೂರ್ವವಾದ ಲಾಭ ಒದಗಿಸಿದಾಗ ನಗದೀಕರಿಸಿಕೊಂಡಲ್ಲಿ ಅದು ಲಾಭಗಳಿಕೆಗಾಗಿ ಹೂಡಿಕೆಮಾಡಿದಂತಾಗುತ್ತದೆ.  ಹಲವು ಬಾರಿ ದೊರೆತ ಲಾಭ ಗಳಿಕೆ ಅವಕಾಶವನ್ನು ಕಳೆದುಕೊಂಡಲ್ಲಿ ಮುಂದೆ ಬಂಡವಾಳಕ್ಕೇ ಕುತ್ತು ಬರಲು ಸಾಧ್ಯವಿದೆ.  ಕಾರಣ ಕಂಪನಿಗಳ ಸಾಧನೆಯು ಪೇಟೆಯಲ್ಲಾಗುವ ಬದಲಾವಣೆಗಳ ಮೇಲೆ ಅವಲಂಬಿತವಾಗಿದೆ. ಹಾಗಾಗಿ ಷೇರುಪೇಟೆಯಲ್ಲಿ VALUE PICK  ಅಂದರೆ ಉತ್ತಮ ಷೇರಿನ ಬೆಲೆ ಕುಸಿತ ಕಂಡಾಗ ಹೂಡಿಕೆಗೆ ಆಯ್ಕೆ ಮಾಡಿಕೊಳ್ಳುವುದು ಕ್ಷೇಮ.  

    ಕೆಲವೊಮ್ಮೆ ಅಪೂರ್ವ ಏರಿಕೆಯಿಂದ ಲಾಭ ಗಳಿಸಿಕೊಟ್ಟಾಗ ಅದನ್ನು PROFIT BOOK ಗೆ ಅಪೂರ್ವ ಅವಕಾಶವೆಂದು ನಗದೀಕರಿಸಿಕೊಳ್ಳುವುದು.   ಉಳಿತಾಯ ಮತ್ತು ಹೂಡಿಕೆಗಳ ಮೂಲ ಉದ್ದೇಶ ನಮ್ಮ ಹಣ ಸುರಕ್ಷಿತಗೊಳಿಸುವುದರೊಂದಿಗೆ ಲಾಭ ಗಳಿಸಿಕೊಳ್ಳುವುದು.  ಇಲ್ಲಿ ಕಾರ್ಪೊರೇಟ್‌ ಗಳ ಭವಿಷ್ಯವು ಅನೇಕ ಮಾನದಂಡಗಳಿಂದ ತೂಗುವುದರಿಂದ ಷೇರಿನ ಬೆಲೆಗಳು ಅದಕ್ಕನುಗುಣವಾಗಿ ಬದಲಾಗುತ್ತಿರುತ್ತವೆ.  ಹಾಗಾಗಿ ಅವಕಾಶಗಳನ್ನು ನಮ್ಮ ಅನುಕೂಲಕ್ಕೆ ಬಳಸಿಕೊಳ್ಳುವುದು ಸೂಕ್ತ.

    Disclaimer: ಇದು ಷೇರುಪೇಟೆಯ ಚಟುವಟಿಕೆಯಾಧರಿತ ಸುದ್ದಿ ವಿಶ್ಲೇಷಣೆ ಮಾತ್ರ . ಅಂತಿಮವಾಗಿ ಹೂಡಿಕೆ ನಿರ್ಧಾರ ಯಾವಾಗಲು ನಿಮ್ಮದೇ ಆಗಿರುತ್ತದೆ. ಅಂಕಣಕಾರರಾಗಲಿ ,ಕನ್ನಡಪ್ರೆಸ್ .ಕಾಮ್ ಆಗಲಿ ನಿಮ್ಮ ಹೂಡಿಕೆ ನಿರ್ಧಾರಗಳಿಗೆ ಜವಾಬ್ದಾರಿ ಆಗದು.

    ಕೆ ಜಿ ಕೃಪಾಲ್
    ಕೆ ಜಿ ಕೃಪಾಲ್
    ಕೆ ಜಿ ಕೃಪಾಲ್ ಆರ್ಥಿಕ ಚಿಂತಕ ಮತ್ತು ಷೇರು ಪೇಟೆ ತಜ್ಞ. ಬೆಂಗಳೂರು ಷೇರು ವಿನಿಮಯ ಕೇಂದ್ರದ ಹಲವು ಸುಧಾರಣ ಸಮಿತಿಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಷೇರು ಮಾರುಕಟ್ಟೆಯ ಆಳ . ಅಗಲಗಳನ್ನು ಸುಲಭವಾಗಿ ವಿವರಿಸಿ ಸರಳ ಕನ್ನಡದಲ್ಲಿ ಬರೆಯುವ ಕೆಲವೇ ಕೆಲವು ಬರಹಗಾರರಲ್ಲಿ ಇವರೂ ಒಬ್ಬರು. ನಾಡಿನ ಹಲವು ಮುಂಚೂಣಿ ಪತ್ರಿಕೆಗಳಲ್ಲಿ ಅಂಕಣಕಾರರಾಗಿ ನಾಡಿನ ಜನತೆಗೆ ಚಿರಪರಿಚಿತ. ಟೀವಿ ಚಾನಲ್ ಗಳು ಸೇರಿದಂತೆ ನೇರ ಸಂಪರ್ಕ ಕಾರ್ಯಕ್ರಮಗಳ ಮೂಲಕ ಷೇರು ಮಾರುಕಟ್ಟೆ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾ ಬಂದಿದ್ದಾರೆ.
    spot_img

    More articles

    LEAVE A REPLY

    Please enter your comment!
    Please enter your name here

    Latest article

    error: Content is protected !!