BENGALURU NOV 27
ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹಿಂದೆ ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ. ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದುಕಾಣುತ್ತಿದೆ. ವಿಷ್ಣುವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರುಗೆ ಶುಭ ಕೋರಲು. ಬಂದಿದ್ದೇನೆ ಎಂದರು .
ಮೈಸೂರಿನಲ್ಲಿ ನಿರ್ಮಾಣ ವಾಗುತ್ತಿರುವ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಪೂರ್ಣ ಗೊಳ್ಳುತ್ತಾ ಬಂದಿದೆ. ಡಿಸೆಂಬರ್ ಒಳಗೆ ಸ್ಮಾರಕದ ಉದ್ಘಾಟನೆಯನ್ನು ಅದ್ದೂರಿಯಾಗಿ ಮಾಡಲು ತೀರ್ಮಾನಿಸಲಾಗಿದೆ. ಹೆವಿವಿನ ವಿವರಗಳನ್ನು ಅವರ ಕುಟುಂಬದವರೊಂದಿಗೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು. ವಿಷ್ಣುವರ್ಧನ್ ಅವರ ಮೇರು ವ್ಯಕ್ತಿತ್ವ ಹಾಗೂ ಘನತೆಗೆ ತಕ್ಕ ಹಾಗೆ ಕಾರ್ಯಕ್ರಮವನ್ನು ವೈಭವಾಯುತವಾಗಿ ಆಯೋಜಿಸಲಾಗುವುದು ಎಂದರು.