ದೇವರನ್ನು ತೋರಿಸಿದ ಸನ್ಯಾಸಿ

1
289

ಒಂದು ದಿನ ಒಬ್ಬ ಸನ್ಯಾಸಿಯು ನದಿ ತೀರದಲ್ಲಿ ಧ್ಯಾನ ಮಾಡುತ್ತಿದ್ದರು.ಒಬ್ಬ ಯುವಕ ಅವರ ಬಳಿಗೆ ಬಂದು ಅವರ ಧ್ಯಾನಕ್ಕೆ ಅಡಚಣೆಯನ್ನು ಉಂಟು ಮಾಡಿ , “ಗುರುಗಳೆ ನಾನು ನಿಮ್ಮ ಶಿಷ್ಯನಾಗಲು ಬಯಸುತ್ತಿದ್ದೇನೆ” ಎಂದು ಹೇಳಿದ.ಆಗ ಆ ಸನ್ಯಾಸಿಯು “ಏಕೆ?” ಎಂದು ಕಾರಣ ಕೇಳಿದರು.

ಆ ಯುವಕ ನಾನು ದೇವರನ್ನು ಹುಡುಕುತ್ತಿದ್ದೇನೆ ಎಂದು ಹೇಳುತ್ತಾನೆ.

ಗುರುಗಳು ಏಕಾಏಕಿ ಜಿಗಿದು ನಿಂತರು. ಆ ಯುವಕನ ಕತ್ತನ್ನು ಹಿಡಿದುಕೊಂಡು, ಎಳೆದು ತಂದು, ನದಿಯಲ್ಲಿ ಬಿಡುತ್ತಾರೆ. ಅವನ ತಲೆಯನ್ನು ಹಿಡಿದುಕೊಂಡು ನೀರಿನೊಳಗೆ ಮುಳುಗಿಸುತ್ತಾರೆ. ಒಂದು ನಿಮಿಷ ಅವನನ್ನು ಹಾಗೇ ನೀರಿನಲ್ಲಿ ಮುಳುಗಿಸುತ್ತಾರೆ. ಅವನಿಗೆ ಉಸಿರು ಕಟ್ಟಿದಂತಾಗುತ್ತದೆ. ಆನಂತರ ಆ ತೊಂದರೆಯಿಂದ ಸುಧಾರಿಸಿಕೊಳ್ಳಲು ಅವನಿಗೆ ಅವಕಾಶ ನೀಡುತ್ತಾರೆ.

ನಂತರ ಆ ಸನ್ಯಾಸಿಯು ಆ ಯುವಕನನ್ನು ನದಿಯಿಂದ ಎಳೆದು ಹೊರ ತರುತ್ತಾರೆ. ಆ ನೀರಿನಿಂದಾಗಿ ಆ ಯುವಕನಿಗೆ ಉಸಿರು ಕಟ್ಟಿದಂತಾಗುತ್ತದೆ. ಉಸಿರಾಡಲು ಕಷ್ಟವಾಗಿ ಕೆಮ್ಮುತ್ತಿರುತ್ತಾನೆ. ಅಂತಿಮವಾಗಿ ಅವನನ್ನು ಆರಾಮಾಗಿ ಬಿಟ್ಟು ಆ ಸನ್ಯಾಸಿ ಹೇಳುತ್ತಾರೆ :“ಈಗ ಹೇಳು.. ನಿನ್ನನ್ನು ನೀರಿನಲ್ಲಿ ಮುಳುಗಿಸಿದಾಗ ಎಲ್ಲದಕ್ಕಿಂತ ಅತಿ ಮುಖ್ಯವಾಗಿ ನಿನಗೆ ಬೇಕೆನಿಸಿದ್ದು ಯಾವುದು..??”

ಆಗ ಯುವಕ “ಗಾಳಿ” ಎಂದು ಉತ್ತರಿಸುತ್ತಾನೆ..

“ಚೆನ್ನಾಗಿದೆ.. ಈಗ ಮನೆಗೆ ಹೋಗು.. ಗಾಳಿಗಿಂತ ದೊಡ್ಡ ದೇವರು ನಿನಗೆ ಬೇಕು ಅಂತ ಅನಿಸಿದಾಗ ಮತ್ತೆ ನನ್ನ ಹತ್ತಿರ ಬಾ” ಎಂದು ಹೇಳುತ್ತಾರೆ ಆ ಸನ್ಯಾಸಿ.

ಆಪತ್ಕಾಲದಲ್ಲಿ ಒದಗುವವರೆ ದೇವರು ಎಂಬುದರ ಅರಿವು ಯುವಕನಿಗೆ ಆಗುತ್ತದೆ.

1 COMMENT

LEAVE A REPLY

Please enter your comment!
Please enter your name here