22 POSTS
ನಾಡಿನ ಹೆಸರಾಂತ ಶಿಕ್ಷಣ ತಜ್ಞರಾದ ಡಾ. ಬಿ.ಎಸ್ .ಶ್ರೀಕಂಠ ಅವರು ಕಳೆದ ನಲುವತ್ತು ವರ್ಷಕ್ಕೂ ಹೆಚ್ಚು ಕಾಲದಿಂದ ಶಿಕ್ಷಣ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸಧ್ಯ ಬೆಂಗಳೂರಿನ ಸಿಂಧಿ ಕಾಲೇಜಿನ ನಿರ್ದೇಶಕರಾಗಿ ನಿವೃತ್ತರಾಗಿರುವ ಬಿ. ಎಸ್ . ಶ್ರೀಕಂಠ ಅವರು ಈ ಹಿಂದೆ ಸುರಾನಾ, ಆರ್ ಬಿ ಎ ಎನ್ ಎಂ ಎಸ್ ಕಾಲೇಜಿನ ಪ್ರಿನ್ಸಿಪಾಲರು ಆಗಿದ್ದರು. ಶಿಕ್ಷಣ ಕ್ಷೇತ್ರದಲ್ಲಿ ಒಳ್ಳೆಯ ಆಡಳಿತಗಾರ ಎಂಬ ಹೆಸರು ಪಡೆದಿರುವ ಅವರು ಪ್ರಾಧ್ಯಾಪಕರಾಗಿಯೂ ವಿದ್ಯಾರ್ಥಿ ವಲಯದಲ್ಲಿ ಜನಪ್ರಿಯ. ವಿಜ್ಞಾನಿ ಆಗಿಯೂ ಅವರು ಶೈಕ್ಷಣಿಕ ವಲಯದಲ್ಲಿ ಪರಿಚಿತ.