38.2 C
Karnataka
Sunday, April 28, 2024
    Home Authors Posts by ನಂದಿನಿ ಹೆದ್ದುರ್ಗ

    ನಂದಿನಿ ಹೆದ್ದುರ್ಗ

    17 POSTS 0 COMMENTS
    ನಂದಿನಿ ಹೆದ್ದುರ್ಗ ಅವರ ವಾಸ ಹಾಸನ ಜಿಲ್ಲೆ ಆಲೂರು ತಾಲೂಕಿನ ಹೆದ್ದುರ್ಗ ಎನ್ನುವ ಪುಟ್ಟ ಹಳ್ಳಿಯಲ್ಲಿ. ಬದುಕಿಗೆ ಕಾಫಿ ತೋಟ,ಕೃಷಿ. ಆಸಕ್ತಿ ಕೃಷಿ,ಕಾವ್ಯ,ಸಾಹಿತ್ಯ, ತಿರುಗಾಟ. ಮೂವತ್ತೈದನೇ ವಯಸಿನಲ್ಲಿ ಬರವಣಿಗೆ ಪ್ರಾರಂಭ. ಮೊದಲಿಗೆ ಹಾಸನದ ಪ್ರಾದೇಶಿಕ ಪತ್ರಿಕೆ ಜನತಾ ಮಾಧ್ಯಮಕ್ಕೆ ಅಂಕಣ ಬರಹಗಳನ್ನು ಬರೆಯುವುದರೊಂದಿಗೆ ಸಾಹಿತ್ಯಾರಂಭ. 2016 ಅಕ್ಟೋಬರ್ ನಲ್ಲಿ ಸಕಲೇಶಪುರದಲ್ಲಿ ನಡೆದಂತಹ ತಾಲೂಕು ಸಾಹಿತ್ಯ ಸಮ್ಮೇಳನದಲ್ಲಿ "ಅಸ್ಮಿತೆ" ಎನ್ನುವ ಕವನ ಸಂಕಲನ ಖ್ಯಾತ ಕವಿ ಬಿ ಆರ್ ಲಕ್ಷ್ಮಣರಾವ್ ಅವರಿಂದ ಬಿಡುಗಡೆ. ಆ ನಂತರದಲ್ಲಿ ಅವರ ಮಾರ್ಗದರ್ಶನದಲ್ಲಿ ಕವಿತೆ ಬರೆಯಲು ಆರಂಭ. ಜನವರಿ 1,2017ರಲ್ಲಿ ಮೊದಲ ಕವನಗಳ ಗುಚ್ಛ ವಿಶ್ವವಾಣಿ ಪತ್ರಿಕೆಯಲ್ಲಿ ಪ್ರಕಟ. 2018ಜನವರಿಯಲ್ಲಿ ಬೆಂಗಳೂರಿನ ಅಂಕಿತ ಪ್ರಕಾಶನದಿಂದ ಎರಡನೇ ಸಂಕಲನ "ಒಳಸೆಲೆ"ಬಿಡುಗಡೆ. ಕನ್ನಡದ ಖ್ಯಾತ ವಿಮರ್ಶಕಿ ಎಮ್ ಎಸ್ ಆಶಾದೇವಿಯವರ ಮುನ್ನುಡಿ ಮತ್ತು ಸುವಿಖ್ಯಾತ ಕವಿ ಎಚ್ ಎಸ್ ವೆಂಕಟೇಶ ಮೂರ್ತಿಯವರ ‌ಬೆನ್ನುಡಿಯಿರುವ ಈ ಸಂಕಲನಕ್ಕೆ ಶಿವಮೊಗ್ಗದ ಕರ್ನಾಟಕ ಸಂಘ ಕೊಡುವ ಪ್ರತಿಷ್ಠಿತ ಜಿ ಎಸ್ ಎಸ್ ಪ್ರಶಸ್ತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿನಿಧಿ ಗೌರವದ ಪುರಸ್ಕಾರ.ಮಂಡ್ಯದ ಅಡ್ಡ್ವೆಸರ್ ಕೊಡಮಾಡುವ ಅಡ್ಡ್ವೆಸರ್ ವರ್ಷದ ಸಂಕಲನ ಪುರಸ್ಕಾರ ದೊರೆತಿದೆ. ದಸರಾಕವಿಗೋಷ್ಠಿ,ಆಳ್ವಾಸ್ ನುಡಿಸಿರಿ, ಬಾಗಲಕೋಟೆಯ ನುಡಿಸಡಗರ ,ಧಾರವಾಡದಲ್ಲಿ ನಡೆದ ರಾಜ್ಯ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿ ಕವನ ವಾಚನ. ಇತ್ತೀಚೆಗೆ ಪ್ರಕಟವಾದ ಬ್ರೂನೊ..ದಿ ಡಾರ್ಲಿಂಗ್ ಎನ್ನುವ ಪ್ರಬಂಧ ಸಂಕಲನ ರತಿಯ ಕಂಬನಿ ಎಂಬ ಕವಿತಾ ಸಂಕಲನ ಮತ್ತು ಇಂತಿ ನಿನ್ನವಳೇ ಆದ ಪ್ರೇಮಕಥೆಗಳ ಸಂಕಲನ ಅಪಾರ ಓದುಗರ ಮೆಚ್ಚುಗೆ ಗಳಿಸಿವೆ.. ರತಿಯ ಕಂಬನಿ ಸಂಕಲನಕ್ಕೆ ಪ್ರತಿಷ್ಠಿತ ಅಮ್ಮ ಪ್ರಶಸ್ತಿ ಲಭಿಸಿದೆ.
    error: Content is protected !!