30.1 C
Karnataka
Thursday, May 21, 2026
    Home Blog Page 33

    ಪ್ರವಾಹಕ್ಕೆ ಸೂರು ಕಳೆದುಕೊಂಡ ವೃದ್ಧೆಗೆ ನಾಲ್ಕೇ ತಿಂಗಳಲ್ಲಿ ಮನೆ

    BENGALURU JAN 16

    ಭಾರಿ ಮಳೆಗೆ ಸೂರು ಕಳೆದುಕೊಂಡ ಕಮಲವ್ವನಿಗೆ ಗಣೇಶ ಹಬ್ಬವನ್ನೂ ಸಂಭ್ರಮಿಸಲಾಗದ ಸಂಕಟ. ಅಂದು ಖಾಸಗಿ ವಾಹಿನಿ ಖಾಸಗಿ ಟಿವಿ ಯ ಸಂದರ್ಶನ ಕಾರ್ಯಕ್ರಮದಲ್ಲಿ ಜನರ ಸಂಕಷ್ಟ ಆಲಿಸಿ ಸ್ಥಳದಲ್ಲೇ ಪರಿಹಾರ ಸೂಚಿಸುತ್ತಿದ್ದ ಮುಖ್ಯಮಂತ್ರಿಗಳನ್ನು ಕಂಡು ಕಮಲವ್ವನೂ ತನ್ನ ಸಂಕಷ್ಟ ತೋಡಿಕೊಂಡಳು.

    “ಇಬ್ಬರೂ ಗಂಡುಮಕ್ಕಳು ಸತ್ತ ಹೋಗ್ಯಾರ, ಮನಿ ಕಟ್ಟಸಿಕೊಡ್ರಿ ಸಾಹೇಬ್ರ” ಎಂದು ಗದ್ಗದಿತಳಾಗಿ ನುಡಿದ ಕಮಲವ್ವನಿಗೆ ಸಾಂತ್ವನ ಹೇಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಮಲವ್ವ ಸ್ವಂತ ಸೂರಿನಡಿ ಸಂಕ್ರಾಂತಿ ಆಚರಿಸುವಂತೆ ಮಾಡಿದ್ದಾರೆ.

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸ್ವಕ್ಷೇತ್ರ ಶಿಗ್ಗಾಂವಿಯ ಮಂಚಿನಕೊಪ್ಪ ಗ್ರಾಮದ ಕಮಲವ್ವ ತಿಮ್ಮನಗೌಡ್ರ ತಮಗೆ ಮನೆ ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದರು. ಅವರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ನಾಲ್ಕೇ ತಿಂಗಳಿನಲ್ಲಿ ಮನೆ ನಿರ್ಮಿಸಿ, ಸಂಕ್ರಾಂತಿಯಂದು ಕಮಲವ್ವನಿಗೆ ಮನೆಯನ್ನು ಹಸ್ತಾಂತರಿಸಲಾಯಿತು.

    ಹ್ಯಾಬಿಟ್ಯಾಟ್ ಸೆಂಟರ್ ಮೂಲಕ ನಿರ್ಮಿಸಲಾದ ಸುಸಜ್ಜಿತ ಮನೆಯನ್ನು ಸವಣೂರ ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಅವರು ಹಸ್ತಾಂತರಿಸಿದರು.

    Guest Lecturers:ಅತಿಥಿ ಉಪನ್ಯಾಸಕರ ಸಮಸ್ಯೆಗೆ ರಾಜಕೀಯ ಬಣ್ಣ: ಸಚಿವರ ಬೇಸರ

    BENGALURU JAN 16

    ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸಂಬಂಧಿಸಿದ ಸಂಘಟನೆಗಳೊಂದಿಗೆ ಚರ್ಚಿಸಿಯೇ ಪರಿಹರಿಸಲಾಗಿದ್ದು, ಅವರು ಬಯಸಿದ್ದಕ್ಕಿಂತ ಹೆಚ್ಚಿನ ವೇತನವನ್ನು ಘೋಷಿಸಲಾಗಿದೆ. ಆದರೆ, ಈಗ ಕೆಲವು ಸಂಘಟನೆಗಳು ಈ ವಿಚಾರಕ್ಕೆ ಅನಗತ್ಯವಾಗಿ ರಾಜಕೀಯ ಬಣ್ಣ ಬಳಿಯುತ್ತಿರುವುದು ಸರಿಯಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ- Dr.C.N.Ashwatha Narayana-ಹೇಳಿದ್ದಾರೆ.

    ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಾವಿರಾರು ಜನರ ವೇತನ ಏರಿಕೆಯನ್ನು ಸಚಿವರು ಶನಿವಾರ ಪ್ರಕಟಿಸಿದ್ದರು. ಇದಾದ ನಂತರ ಮುಷ್ಕರನಿರತ ಉಪನ್ಯಾಸಕರು ತಾವು ಮುಷ್ಕರವನ್ನು ನಿಲ್ಲಿಸುವುದಿಲ್ಲ ಎನ್ನುತ್ತಿರುವ ಬಗ್ಗೆ ಸುದ್ದಿಗಾರರು ಭಾನುವಾರ ಇಲ್ಲಿ ಕೇಳಿದ ಪ್ರಶ್ನೆಗಳಿಗೆ ಸಚಿವರು ಹೀಗೆಂದು ಉತ್ತರಿಸಿದರು.

    ರಾಜ್ಯದಲ್ಲಿ 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಿದ್ದು, ಇವರಲ್ಲಿ 4,500 ಮಂದಿ ಮಾತ್ರ ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಹೊಂದಿದ್ದಾರೆ. ಸರಕಾರವು ಇವರ ವೇತನವನ್ನು ಗೌರವಾರ್ಹವಾಗಿ ಹೆಚ್ಚಿಸಬೇಕೆಂದು ಮುಷ್ಕರನಿರತ ಸಂಘಟನಗಳೇ ಹೇಳಿದ್ದವು. ಸರಕಾರ ಇದಕ್ಕೆ ಸ್ಪಂದಿಸಿದ್ದು, ದುಪ್ಪಟ್ಟಿಗಿಂತಲೂ ಹೆಚ್ಚು ವೇತನ ಏರಿಸಿದೆ. ಇಷ್ಟಾದಮೇಲೆ ಅತಿಥಿ ಉಪನ್ಯಾಸಕರು ಹಠ ತಳೆದಿರುವುದು ಬೇಸರದ ಸಂಗತಿ ಎಂದು ಅವರು ಹೇಳಿದರು.

    ಸೇವಾ ಭದ್ರತೆ ನೀಡುವುದಕ್ಕೂ ಸಾಧ್ಯ ಇಲ್ಲ ಎಂದು ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.

    ಅತ್ತ ದರಿ, ಇತ್ತ ಪುಲಿ

     ಸುಮಾ ವೀಣಾ

    ಮುಳ್ಳಿಡಿದ ಮರನೇರಿದಂತೆ- ನಡುಗನ್ನಡ ಸಾಹಿತ್ಯದ ಮಹತ್ವದ ಕವಿ ಲಕ್ಷ್ಮೀಶನ ‘ಜೈಮಿನಿಭಾರತ’ದ  ಹತ್ತೊಂಬತ್ತನೆಯ ಸಂಧಿ  ಇಪ್ಪತ್ತನಾಲ್ಕನೆ ಪದ್ಯದಲ್ಲಿ   ಪ್ರಸ್ತುತ ಮಾತು  ಉಲ್ಲೇಖವಾಗಿದೆ.

    ಉಪಮಾಲೋಲ ಲಕ್ಷ್ಮೀಶನ   ಉಪಮೆಗಳಲ್ಲಿ   ಮಹತ್ವದ್ದಾಗಿರುವ ಉಪಮೆ. ಮುಳ್ಳಿಡಿದ ಮರನೇರಿದಂತೆ ಎಂಬುದು ಉದ್ಧಾಲಕ ಹೇಳುವ ಮಾತು . ಮುಳ್ಳಿನ ಮರ ಹತ್ತಿದಂತೆ ಆಯಿತು  ಎಂದರೆ  ಕಷ್ಟಗಳನ್ನು ಒಡಲಿನಲ್ಲಿ ಸಂಚಯನ  ಮಾಡಿಕೊಂಡಂತೆ  ಎಂಬ  ಅರ್ಥವನ್ನು  ಸೂಚಿಸುತ್ತದೆ.

    ಉದ್ಧಾಲಕನ ಹೆಂಡತಿ ಚಂಡಿಕೆ ಪತಿಯ ಜಪ ತಪಕ್ಕೆ  ಸಹಾಯ  ಮಾಡುತ್ತಿರುತ್ತಾಳೆ.  ಹೆಂಡತಿಯ ಸಹಕಾರಕ್ಕೆ ಮೆಚ್ಚಿ ಮನೆಯ ಕೆಲಸಗಳನ್ನು  ನೋಡಿಕೊ  ಎಂದು ಉದ್ಧಾಲಕ ಹೇಳಿದಾಗ   ಆಕೆ ನನ್ನಿಂದಾಗದು  ನಾನು ಮನೆಕೆಲಸದ ಹೆಂಗಸಲ್ಲ ಎಂದು  ಕಟುವಾಗಿಯೇ ಹೇಳುತ್ತಾಳೆ.  ಆ ಮಾತನ್ನು  ಕೇಳಿದ ಉದ್ದಾಲಕ   ಈ ಪರಿಸ್ಥಿತಿಯನ್ನು ಬಿಸಿ ತುಪ್ಪಕ್ಕೆ ಹೋಲಿಸಿಕೊಳ್ಳುತ್ತಾನೆ. ಉಗುಳಿದರೆ ನಷ್ಟ ನುಂಗಿದರೆ ದೇಹ ಭಾದೆ ಎಂದು ತನಗಾದ ಸಂದಿಗ್ಧ ಪರಿಸ್ಥಿತಿಯನ್ನು ವಿವರಿಸುತ್ತಾನೆ.

    ಈ ರೀತಿಯ ಉಭಯಸಂಕಟದ ಪರಿಸ್ಥಿತಿ ಆಧುನಿಕ ದಿನ ಮಾನಗಳಲ್ಲಿಯೂ ಆಗುವುದಿದೆ.   ಹಬ್ಬ ಹುಣ್ಣಿಮೆಯ  ಸಂದರ್ಭದಲ್ಲಿ  ನಿತ್ಯೋಪಯೋಗಿ ವಸ್ತುಗಳ ಬೆಲೆ ಧಿಡೀರ್ ಏರಿಕೆ  ಆದಾಗಲೂ ಕೊಳ್ಳಲೂ ಆಗದು  ಕೊಳ್ಳದೆ ಇರಲೂ ಆಗದ  ಸಂದರ್ಭ.  ಉದ್ಧಾಲಕನಿಗೂ ಹೆಂಡತಿಯ ವಿಚಾರದಲ್ಲಿ ಹೀಗೆ ಆಗುತ್ತದೆ.  

    ಮುಳ್ಳಿಡಿದ ಮರ ಹೆಸರೇ ಹೇಳುವಂತೆ ಗೊತ್ತಿದ್ದೋ ಗೊತ್ತಿಲ್ಲದೆಯೋ ಮುಳ್ಳಿರುವ ಮರವನ್ನು ಏರಿ ಮತ್ತೆ ಇಳಿಯುತ್ತೇನೆ ಎಂದರೆ ಭಾದೆ  ಇದ್ದೇ ಇರುತ್ತದೆ. ಅತ್ತ ದರಿ ಇತ್ತ  ಪುಲಿ ಎಂಬ ಮಾತನ್ನು ಇಲ್ಲಿ ಸಾಮಯಿಕವಾಗಿ ತೆಗೆದುಕೊಳ್ಳಬಹುದು.

    This image has an empty alt attribute; its file name is suma-veena-2-edited.jpg

    ವೃತ್ತಿಯಿಂದ  ಉಪನ್ಯಾಸಕಿ ಪ್ರವೃತ್ತಿಯಿಂದ ಲೇಖಕಿ ಆಗಿರುವ ಸುಮಾವೀಣಾರ ಬರೆಹಗಳು ನಾಡಿನ ಪ್ರಮುಖ ಮುದ್ರಿತ ಮತ್ತು ಅಂತರ್ಜಾಲ  ಪತ್ರಿಕೆಗಳಲ್ಲಿ ಪ್ರಕಟವಾಗಿ  ಜನಮನ್ನಣೆ ಗಳಿಸಿವೆ. ಇವೆ ಸಂಶೋಧನಾತ್ಕ ಬರೆಹಗಳು ಅನನ್ಯವಾಗಿದ್ದು ISBN &ISSN ಸಂಖ್ಯೆಗಳಲ್ಲಿ ಅಚ್ಚಾಗಿವೆ. ಉತ್ತಮ ವಾಗ್ಮಿಯೂ ಆಗಿರುವ  ಇವರ ಸೋದಾಹರಣ ಭಾಷಣಗಳು, ಕತೆಗಳು ಆಕಾಶವಾಣಿಯಲ್ಲಿ ರಾಜ್ಯವ್ಯಾಪಿ ಪ್ರಸಾರ  ಆಗಿವೆ.  ಇವರ ‘ನಲಿವಿನ ನಾಲಗೆ’, ‘ಮನಸ್ಸು ಕನ್ನಡಿ’, ‘ಸೂರ್ಪನಖಿ ಅಲ್ಲ ಚಂದ್ರನಖಿ’, ಲೇಖಮಲ್ಲಿಕಾ ಕೃತಿಗಳು ಬಿಡುಗಡೆಯಾಗಿದ್ದು ಸಾಹಿತ್ಯಾಸಕ್ತರ   ಅಪಾರ ಮೆಚ್ಚುಗೆಗೆ ಪಾತ್ರವಾಗಿವೆ.

    Makara Sankranti :ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ ಎಂಬ ಸಿಹಿ ಮಾತಿನ ಹಬ್ಬ

    ರತ್ನಾ ಶ್ರೀನಿವಾಸ್

    ಜಗಚ್ಚಕ್ಷುವಾಗಿರುವ ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿಯನ್ನು ಪ್ರವೇಶಿಸುವ ಸಂಧಿ ಕಾಲವೇ ಸಂಕ್ರಮಣ ಅಥವ ಸಂಕ್ರಾಂತಿ.

    ಸೂರ್ಯ ದೇವನು ವಿಶ್ವದ ಆತ್ಮ. ಜಗತ್ತಿನ ಕಣ್ಣು. ಮಳೆ ಬೀಳಲು, ಬೆಳೆ ಬೆಳಗಲು, ಎಳೆ ಬೆಳಗು ಸೂರ್ಯನು ಕಾರಣ.ಆ ಸವಿತೃ ದೇವನ ದಿವ್ಯ ತೇಜಸ್ಸು ನಮಗೆ ಸಿದ್ದಿ, ಬುದ್ಧಿ, ಸಮೃದ್ದಿಗಳನ್ನು ನೀಡುತ್ತದೆ. ಸಂಕ್ರಾಂತಿ ಒಂದು ವಿಧದಲ್ಲಿ ಸೂರ್ಯನ ಆರಾಧನೆಯೇ.

    ಪುಷ್ಯ ಮಾಸದಲ್ಲಿ ಬರುವ (ಜನವರಿ 14 ಅಥವಾ 15ರಂದು) ಮಕರ ಸಂಕ್ರಾಂತಿ ಯನ್ನು ಉತ್ತರಾಯಣ ಪುಣ್ಯಕಾಲ ಎಂದು ಕರೆಯುತ್ತಾರೆ.
    ಸಂಕ್ರಾಂತಿಯಲ್ಲಿ ಎಳ್ಳು ಬೀರುವ ಸಂಪ್ರದಾಯವಿದೆ. ಇದಕ್ಕೆ ಪುರಾಣ ಕಾಲದ ಕಥೆಯೊಂದಿದೆ.

    ಶಿಲಾಸುರನೆಂಬ ರಕ್ಕಸ ಬ್ರಹ್ಮ ದೇವರಿಂದ ವರ ಪಡೆದುಕೊಂಡು ಅಹಂಕಾರದಿಂದ ಮೆರೆಯುತ್ತಾ ಲೋಕಪೀಡಕನಾಗಿರುತ್ತಾನೆ. ಆಗ ಸೂರ್ಯ ದೇವನು ಮಕರ ಮತ್ತು ಕರ್ಕ ರ ಸಹಾಯ ಪಡೆದುಕೊಂಡು ಶಿಲಾಸುರನನ್ನು ಸಂಹರಿಸುತ್ತಾನೆ. ಮಕರ ಶಿಲಾಸುರನನ್ನು ಹೊಟ್ಟೆ ಬಗಿದಾಗ ಭೂಮಿಗೆ ಎಳ್ಳು ಪ್ರವೇಶವಾಗುತ್ತದೆ. ಈತನ ಸಾಹಸಕ್ಕೆ ಮೆಚ್ಚಿದ ಸೂರ್ಯ ನಿನ್ನನ್ನು, ನಿನ್ನಿಂದ ಭೂಮಿಗೆ ಬಂದ ಎಳ್ಳನ್ನು ಪೂಜಿಸಿದವರಿಗೆ ಒಳ್ಳೆಯದಾಗಲಿ ಎಂದು ಹರಸಿದರಂತೆ. ಈ ಕಾರಣದಿಂದಲೇ ಎಳ್ಳು ಬೀರುವ ಆಚರಣೆ ಬಂದಿರುವುದಾಗಿಯೂ, ಮಕರ ಸಂಕ್ರಮಣ ಎಂಬ ಹೆಸರುಜನರಲ್ಲಿ ಉಳಿದಿರುವುದಾಗಿ ಈ ಕಥೆಯಿಂದ ತಿಳಿದುಬರುತ್ತದೆ.

    ಕರ್ನಾಟಕದಲ್ಲಿಎಳ್ಳು, ಸಕ್ಕರೆ ಅಚ್ಚು, ಬೆಲ್ಲ, ಕಬ್ಬು, ಬಾಳೆಹಣ್ಣನ್ನು ಬಂಧು ಮಿತ್ರರಿಗೆ ಹಂಚುವ ಸಂಪ್ರದಾಯ ಈ ಹಬ್ಬದ ಒಂದು ವಿಶೇಷ.
    ದನ ಕರುಗಳಿಗೆ ಮೈತೊಳೆದು ಭೂತ ಪೀಡೆಗಳಿಂದ ಅವುಗಳನ್ನು ರಕ್ಷಿಸುವ ಸಲುವಾಗಿ ಬೀದಿಗಳಲ್ಲಿ ಹೊತ್ತಿಸಿದ ಬೆಂಕಿಯನ್ನು ದಾಟಿಸುವುದರ ಉಂಟು.ಸಂಕ್ರಮಣ ಕರ್ನಾಟಕದ ಆಹಾರ ವೈವಿಧ್ಯ ಗಳನ್ನು ಅನಾವರಣಗೊಳಿಸುತ್ತದೆ. ಆ ವರ್ಷದಲ್ಲಿ ಬೆಳೆದ ಬೆಳೆಗಳನ್ನು ಬಳಸಿ ವಿಭಿನ್ನ ಅಡುಗೆಯನ್ನು ತಯಾರಿಸುತ್ತಾರೆ.

    ಒಟ್ಟಾರೆ ಸಂಕ್ರಾಂತಿ ಬದಲಾವಣೆ ಯನ್ನು ಅಳವಡಿಸಿ ಕೊಳ್ಳಲು ಹೇಳಿ ಮಾಡಿಸಿದ ಹಬ್ಬ. ಏಕೆಂದರೆ ಇದು ಕಾಲದ ಚಲನೆಯನ್ನು ತನ್ಮೂಲಕ ಬದಲಾವಣೆಯನ್ನೇ ಆಶಯವಾಗಿರಿಸಿ ಕೊಂಡಿದೆ.ಇದರ ವಿಶೇಷವೆಂದರೆ ಸಿಹಿಯಾದ ಮಾತು.ಎಳ್ಳು ಬೆಲ್ಲ ತಿಂದು ಒಳ್ಳೆ ಮಾತಾಡಿ ಎಂಬ ಸಿಹಿ ಮಾತಿನ ಹಬ್ಬ.

    ಈ ಸಂಕ್ರಮಣ ಎಲ್ಲರಲ್ಲಿಯೂ ಸಿಹಿ ಮಾತಿಗೆ, ಮಧುರಭಾವನೆಗೆ ಮೂಲವಾಗಲಿ. ಎಲ್ಲೆಡೆಯು ಆರೋಗ್ಯ, ಸಮೃದ್ದಿ, ಸಂತಸವಿರಲಿ.
    ಎಲ್ಲರಿಗೂ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು.

    This image has an empty alt attribute; its file name is ratna-srinivas-edited.jpg

    ರತ್ನಾ ಶ್ರೀನಿವಾಸ್ ಅವರು ಮೂಲತಃ ಹಾಸನ ಜಿಲ್ಲೆ ಅರಸೀಕೆರೆ ಯವರು.  ಪ್ರಾಥಮಿಕ ಪದವಿಯನ್ನು ಅರಸೀಕೆರೆಯಲ್ಲಿ ಪಡೆದು ಮುಂಬಯಿನಲ್ಲಿ  ಎಂ.ಎ ಎಂ.ಫಿಲ್  ಪಡೆದು ಪ್ರಸ್ತುತ ಆದಿತ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್ & ರಿಸರ್ಚ್, ಯಲಹಂಕ, ಇಲ್ಲಿ ಕನ್ನಡ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ಇವರ ಚಾರುವಸಂತದ ಆಯಾಮ ಅನನ್ಯತೆ ಸಂಪ್ರಬಂಧದ  ಪುಸ್ತಕವಾಗಿ ಅಭಿಜಿತ್ ಪ್ರಕಾಶನ ಮುಂಬೈನಿಂದ ಪ್ರಕಟವಾಗಿದೆ.

    Guest Lecturers:ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರ್ಕಾರದ ಸಂಕ್ರಾಂತಿ ಕೊಡುಗೆ

    BENGALURU JAN 14

    ನಾನಾ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟಕ್ಕಿಳಿದಿದ್ದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸರಕಾರ ಸಂಕ್ರಾಂತಿಗೆ ಸಿಹಿಸುದ್ದಿ ಕೊಟ್ಟಿದ್ದು, ವೇತನವನ್ನು ದುಪ್ಪಟ್ಟಿಗಿಂತಲೂ ಹೆಚ್ಚು ಏರಿಸಿದೆ. ಜೊತೆಗೆ, ಸೆಮಿಸ್ಟರ್-ವಾರು ನೇಮಕಾತಿಯನ್ನು ನಿಲ್ಲಿಸಿ, ಇನ್ನು ಮುಂದೆ ಇಡೀ ಶೈಕ್ಷಣಿಕ ವರ್ಷಕ್ಕೆ ನೇಮಿಸಿ ಕೊಳ್ಳುವುದಾಗಿ ಘೋಷಿಸಿದೆ.

    ಸರಕಾರದ ಪರವಾಗಿ ವಿಧಾನಸೌಧದಲ್ಲಿ ಶುಕ್ರವಾರ ಈ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ, ಇದಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ ಗೌರವಧನ ಪಡೆಯಲಿದ್ದಾರೆ ಎಂದು ಪ್ರಕಟಿಸಿದರು.

    ಹಾಗೆಯೇ, ಯುಜಿಸಿ ಬಯಸುವ ಶೈಕ್ಷಣಿಕ ಅರ್ಹತೆ ಹೊಂದದೆ 5 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವವರಿಗೆ ಮಾಸಿಕ 28 ಸಾವಿರ ರೂ. ಮತ್ತು ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರಿಗೆ ಮಾಸಿಕ 26 ಸಾವಿರ ರೂ. ಗೌರವ ಧನ ನಿಗದಿಪಡಿಸಲಾಗಿದೆ. ಜತೆಗೆ, ಇವರು ನಿಗದಿತ ಶೈಕ್ಷಣಿಕ ಅರ್ಹತೆ ಗಳಿಸಿಕೊಳ್ಳಲು 3 ವರ್ಷಗಳ ಕಾಲಾವಕಾಶ ನೀಡಲಾಗಿದೆ. ಅತಿಥಿ ಉಪನ್ಯಾಸಕರಿಗೆಲ್ಲ ಇನ್ನು ಮುಂದೆ ಪ್ರತೀ ತಿಂಗಳು 10ರೊಳಗೆ ವೇತನ ಪಾವತಿಸಲಾಗುವುದು ಎಂದು ಅವರು ವಿವರಿಸಿದರು.

    ಇದುವರೆಗೆ, ಯುಜಿಸಿ ನಿಗದಿತ ಅರ್ಹತೆ ಹೊಂದಿರುವ ಅತಿಥಿ ಉಪನ್ಯಾಸಕರು ತಿಂಗಳಿಗೆ 13 ಸಾವಿರ ರೂ. ಮತ್ತು ಮಿಕ್ಕವರು 11 ಸಾವಿರ ರೂ. ಗೌರವಧನ ಪಡೆಯುತ್ತಿದ್ದರು.

    ಇದಲ್ಲದೆ, ಅತಿಥಿ ಉಪನ್ಯಾಸಕರ ಸುಗಮ ನೇಮಕಾತಿಗೆ ಆನ್-ಲೈನ್ ಪೋರ್ಟಲ್ಲನ್ನು ಸಹ ಅಭಿವೃದ್ಧಿ ಪಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಇದರಲ್ಲಿ ಜ.17ರಿಂದ ಅರ್ಜಿ ಹಾಕಿಕೊಳ್ಳಬಹುದು. ಇದಕ್ಕೆ ಒಂದು ವಾರ ಕಾಲಾವಕಾಶವಿದ್ದು, ಅಭ್ಯರ್ಥಿಗಳು ತಮ್ಮ ಇಷ್ಟದ 5 ಸರಕಾರಿ ಕಾಲೇಜುಗಳನ್ನು ಸೂಚಿಸಲು ಅವಕಾಶ ಮಾಡಿಕೊಡಲಾಗಿದೆ. ಇದರೊಂದಿಗೆ ಅತಿಥಿ ಉಪನ್ಯಾಸಕರಿಗೆ ಸೂಕ್ತ ಕಾರ್ಯಭಾರ ಇರುವಂತೆ ವ್ಯವಸ್ಥೆ ಮಾಡಲಾಗುವುದು  ಎಂದು ಅವರು ತಿಳಿಸಿದರು.

    ಅತಿಥಿ ಉಪನ್ಯಾಸಕರ ಸಮಸ್ಯೆ/ಬೇಡಿಕೆಗಳ ಪರಿಹಾರಕ್ಕಾಗಿ ಸರ್ಕಾರವು ತಿಂಗಳ ಹಿಂದೆ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿಯನ್ನು ರಚಿಸಿ, ವರದಿ ನೀಡಲು ಒಂದು ತಿನಡೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

    `ಅತಿಥಿ ಉಪನ್ಯಾಸಕರ ಸಮಸ್ಯೆ 2002ರಿಂದಲೂ ಇತ್ತು. ಆದರೆ ಹಿಂದಿನ ಸರಕಾರಗಳು ಇದನ್ನು ಸರಿಯಾಗಿ ನಿಭಾಯಿಸದೆ ಇದ್ದುದರಿಂದ ಇದೊಂದು ಕಗ್ಗಂಟಾಗಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸಹಾನುಭೂತಿ ಮತ್ತು ಮಾನವೀಯ ನೆಲೆಯಲ್ಲಿ ಪರಿಗಣಿಸಿ, ಕ್ಷಿಪ್ರ ಗತಿಯಲ್ಲಿ ಸ್ಪಂದಿಸಿದರು. ಇದರಿಂದಾಗಿ ಕೇವಲ ಒಂದು ತಿಂಗಳಲ್ಲಿ ಪರಿಹಾರ ರೂಪಿಸುವುದು ಸಾಧ್ಯವಾಯಿತು’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಉಪಸ್ಥಿತರಿದ್ದರು.


    ಇದೊಂದು ಐತಿಹಾಸಿಕ ತೀರ್ಮಾನ. ಇದಕ್ಕೆ ಮಿಂಚಿನ ವೇಗದಲ್ಲಿ ಪರಿಹರ ಕೊಟ್ಟ ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. ಬೋಧಕರು ಈ ಸಮಾಜದ ಸಂಪತ್ತು. ಅವರ ನೆಮ್ಮದಿಯೇ ಸಮಾಜದ ನೆಮ್ಮದಿ.

    -ಡಾ.ಸಿ.ಎನ್. ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ ಸಚಿವ


    ಸರ್ಕಾರದ ಆದೇಶದ ಪ್ರತಿ ಇಲ್ಲಿದೆ. ಸ್ಕ್ರಾಲ್ ಮಾಡಿ ಓದಿ

    ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ 5 ಟಿ ಸೂತ್ರ: ಪ್ರಧಾನಿ ಮೆಚ್ಚುಗೆ

    BENGALURU JAN 13

    ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5 ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೊ ಸಂವಾದದಲ್ಲಿ ಭಾಗವಹಿಸಿದ ನಂತರ ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗಾಗಿ ಕೈಗೊಂಡಿರುವ ಕ್ರಮಗಳನ್ನು ಪ್ರಧಾನಿಯವರಿಗೆ ವಿವರಿಸಲಾಯಿತು. ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸುತ್ತಿರುವ ಕುರಿತು ಹಾಗೂ ರಾಜ್ಯದಲ್ಲಿ ಲಸಿಕೆ ಹಾಕಿಸಿಕೊಂಡವರ ಪ್ರಮಾಣ ದೇಶದ ಸರಾಸರಿಗಿಂತ ಹೆಚ್ಚಿರುವ ಕುರಿತು ಪ್ರಧಾನಿಯವರು ಮೆಚ್ಚುಗೆ ವ್ಯಕ್ತಪಡಿಸಿದರು ಎಂದು ತಿಳಿಸಿದ್ದಾರೆ.

    ಇದರೊಂದಿಗೆ ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳ ಕುರಿತು ಸಹ ಪ್ರಧಾನಿಯವರಿಗೆ ಮಾಹಿತಿ ನೀಡಲಾಯಿತು. ಹಾಗೂ ಆಕ್ಸಿಜನೇಟೆಡ್ ಬೆಡ್ ಗಳು ಮತ್ತು ಆಕ್ಸಿಜನ್ ಪ್ಲಾಂಟ್ ಗಳನ್ನು ಹೆಚ್ಚಿಸಲು ಕೇಂದ್ರದ ನೆರವು ಕೋರಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

    ರಾಜ್ಯದಲ್ಲಿ ಹೋಂ ಐಸೊಲೇಷನ್ ನಲ್ಲಿ ಇರುವವರ ಮೇಲ್ವಿಚಾರಣೆಗೆ ತಂತ್ರಜ್ಞಾನದ ಬಳಕೆಯನ್ನು ಪ್ರಧಾನಿಯವರು ಶ್ಲಾಘಿಸಿದರು ಎಂದು ಅವರು ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅಲೆ ಫೆಬ್ರವರಿ ತಿಂಗಳಲ್ಲಿ ಅತ್ಯಂತ ತೀವ್ರಗೊಳ್ಳುವ ನಿರೀಕ್ಷೆಯಿದ್ದು, ಮೊದಲ ಹಾಗೂ ಎರಡನೇ ಅಲೆಯನ್ನು ಎದುರಿಸಿದ ಅನುಭವದ ಆಧಾರದಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.

    ಮೂರನೇ ಅಲೆಯ ಸಂದರ್ಭದಲ್ಲಿ ಶೇ. 94ಕ್ಕೂ ಹೆಚ್ಚು ಸೋಂಕಿತರು ಹೋಮ್ ಐಸೊಲೇಷನ್ ನಲ್ಲಿ ಇದ್ದಾರೆ. ಆದ್ದರಿಂದ ಅವರಲ್ಲಿ ವಿಶ್ವಾಸ ಮೂಡಿಸುವ ಹಾಗೂ ಅವರಿಗೆ ಔಷಧ ಪೂರೈಕೆಯೂ ಸೇರಿದಂತೆ ಸೂಕ್ತ ಆರೈಕೆಯನ್ನು ಖಾತರಿಪಡಿಸಲು ಆದ್ಯತೆ ನೀಡುವಂತೆ ಪ್ರಧಾನಿಯವರು ತಿಳಿಸಿದ್ದಾರೆ.

    ಭಾರತ ಸರ್ಕಾರವು ಹೆಚ್ಚಿನ ಪರೀಕ್ಷೆ ನಡೆಸುವಂತೆ ಹಾಗೂ ಕೇಂದ್ರ ಸರ್ಕಾರ ಒದಗಿಸಿರುವ 23,000 ಕೋಟಿ ರೂ. ಪ್ಯಾಕೇಜ್ ನಡಿ ಅಂಬ್ಯುಲೆನ್ಸ್ ಹಾಗೂ ಆರೋಗ್ಯ ಮೂಲಸೌಕರ್ಯ ಹೆಚ್ಚಿಸಲು ಕ್ರಮ ವಹಿಸುವಂತೆ ಸಲಹೆ ನೀಡಿದೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.

    ಕೇಂದ್ರ ಸರ್ಕಾರ ಎಲ್ಲ ರಾಜ್ಯ ಸರ್ಕಾರಗಳಿಗೆ 32 ಸಾವಿರ ಕೋಟಿ ಹಣವನ್ನು ಆರೋಗ್ಯ ಮೂಲಭೂತ ಸೌಕರ್ಯಕ್ಕಾಗಿ ಎರಡನೆಯ ನಂತರ ಒದಗಿಸಿದೆ. ಹಲವು ರಾಜ್ಯಗಳು ಇನ್ನೂ ಇದರ ಪ್ರಯೋಜನ ಪಡೆದಿಲ್ಲ. ಆರೋಗ್ಯ ಮೂಲಭೂತ ಸೌಕರ್ಯಗಳಾದ ಐಸಿಯು, ಆಕ್ಸಿಜನ್ ಪ್ಲಾಂಟ್, ಆಕ್ಸಿಜಿನೆಟೆಡ್ ಬೆಡ್ ಹಾಗೂ ಅಂಬುಲೆನ್ಸ್ ಸೇರಿದಂತೆ ಇತರ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ರಾಜ್ಯಗಳು ಸಹ ತಮ್ಮ ಪಾಲನ್ನು ಸೇರಿಸಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿದೆ ಎಂದು ಸಲಹೆ ಕೊಟ್ಟರು.

    2nd Print Binnale-India: ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಮುದ್ರಣ ಬಿ ನಾಲೆ

    ಬಳಕೂರ. ವಿ.ಎಸ್.ನಾಯಕ

    ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅಡಿ ಇಟ್ಟವರಿಗೆ ಒಂದು ಅಚ್ಚರಿಯ ಕಲಾ ಲೋಕಕ್ಕೆ ಬಂದಂತಹ ಅನುಭವವಾಗಿತ್ತು. ಚಿತ್ರಕಲಾ ಪರಿಷತ್ತಿನ ಕಲಾ ಗ್ಯಾಲರಿಯಲ್ಲಿ ಒಂದಕ್ಕಿಂತ ಒಂದು ವಿಭಿನ್ನ ಶೈಲಿಯ ಕಲಾಕೃತಿಗಳು ಕಲಾಸಕ್ತರ ಗಮನಸೆಳೆದಿದ್ದು.ಇದಕ್ಕೆ ಕಾರಣ ಬೆಂಗಳೂರಿನಲ್ಲಿ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಅಂತರಾಷ್ಟ್ರೀಯ ಮುದ್ರಣ ಬಿ ನಾಲೆಯನ್ನು ಕೇಂದ್ರ ಲಲಿತ ಕಲಾ ಅಕಾಡೆಮಿ ಏರ್ಪಡಿಸಿದೆ.

    ಜನವರಿ 10 ರಿಂದ ಆರಂಭವಾಗಿ 23 ರವರೆಗೆ ನಡೆಯುವ ಈ ಪ್ರದರ್ಶನವನ್ನು ಲಲಿತಕಲಾ ಅಕಾಡೆಮಿ ಯು ಕರ್ನಾಟಕ ಚಿತ್ರಕಲಾ ಪರಿಷತ್ತಿನ ಸಹಯೋಗದೊಂದಿಗೆ ಕುಮಾರಕೃಪಾ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್ತಿನ ಕಲಾ ಗ್ಯಾಲರಿಯಲ್ಲಿ ನಡೆಸುತ್ತಿರುವುದು ವಿಶೇಷವಾಗಿದೆ.

    ಲಲಿತ ಕಲೆಯು ಒಂದು ಪ್ರಮುಖ ಮಾಧ್ಯಮವಾಗಿರುವ ಪ್ರಿಂಟ್ ಮೇಕಿಂಗ್ ನ ಈ ಪ್ರದರ್ಶನದಲ್ಲಿ ಭಾರತವೂ ಸೇರಿದಂತೆ ಜರ್ಮನಿ, ರಷ್ಯಾ, ನೆದರ್ಲ್ಯಾಂಡ್, ಮೆಕ್ಸಿಕೋ, ಬಾಂಗ್ಲಾದೇಶ, ಅಮೆರಿಕ, ಪ್ರಾನ್ಸ್, ಅರ್ಜೆಂಟೈನಾ, ಪೋಲಂಡ್, ಕ್ರೋ ಏಶಿಯ, ಇಸ್ರೇಲ್ ಪೆರು ಮತ್ತು ನೇಪಾಳ ಇತ್ಯಾದಿ14 ದೇಶಗಳ ವಿಭಿನ್ನ ಕಲಾಕೃತಿಗಳನ್ನು ಪ್ರದರ್ಶಿಸಿರುವುದು ವಿಶೇಷವಾಗಿದೆ.

    ಎಲ್ಲಾ ದೇಶಗಳ ಕಲಾಕೃತಿಗಳನ್ನು ಕಣ್ತುಂಬಿಕೊಳ್ಳುವ ಅವಕಾಶ ಕಲಾಸಕ್ತರಿಗೆ ಇದೆ. ಇದರಲ್ಲಿ ಅಂತರಾಷ್ಟ್ರೀಯ ವಿಭಾಗದಲ್ಲಿ 28, ಆಹ್ವಾನಿತ ಕಲಾವಿದರಲ್ಲಿ 33, ಮತ್ತು ರಾಷ್ಟ್ರಮಟ್ಟದ 121 ಕಲಾಕೃತಿಗಳನ್ನು ಪ್ರದರ್ಶಿಸಿರುವುದು ವಿಶೇಷವಾಗಿದೆ. ನಮ್ಮ ದೇಶದ ಅತ್ಯಂತ ಪ್ರಸಿದ್ಧ ಮುದ್ರಣ ಕಲಾವಿದರಾಗಿದ್ದ ಶಾಂತಿನಿಕೇತನದ ಸೋಮನಾಥ ಹೋರೆ ಅವರ ಜನ್ಮಶತಾಬ್ದಿಯ ನೆನಪಿನಲ್ಲಿ ವಿಶೇಷವಾದ ಒಂದು ವಿಭಾಗವನ್ನು ತೆರೆಯಲಾಗಿದೆ.14 ದಿನಗಳಕಾಲ ನಡೆಯುವ ಕಲಾ ಪ್ರದರ್ಶನದ ಸಂದರ್ಭದಲ್ಲಿ ರಾಷ್ಟ್ರ ಮಟ್ಟದ ಮುದ್ರಣ ಶಿಬಿರವೊಂದನ್ನು ಕೂಡ ಲಲಿತಕಲಾ ಅಕಾಡೆಮಿ ಆಯೋಜಿಸುತ್ತಿದೆ.

    ಈ ಅದ್ವಿತೀಯ ಕಲಾಪ್ರದರ್ಶನವನ್ನು ಕರ್ನಾಟಕ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ, ಬಿಎಲ್ ಶಂಕರ್ ಅವರು ಕೇಂದ್ರ ಲಲಿತಕಲಾ ಅಕಾಡೆಮಿಯ ಅಧ್ಯಕ್ಷರಾದ ಡಾ, ನಂದಲಾಲ್ ಠಾಕೂರ್ ಅವರ ಸಮ್ಮುಖದಲ್ಲಿ ಜನವರಿ 10ರಂದು ನೆರವೇರಿಸಿದ್ದಾರೆ.ಅತ್ಯಂತ ಅಪರೂಪದ ವಿಶಿಷ್ಟ ಕಲಾಕೃತಿಗಳ ಪ್ರದರ್ಶನವನ್ನು ಕಲಾವಿದರು ಹಾಗೂ ಕಲಾಸಕ್ತರು ಕೋವಿಡ್ ನಿಯಮವನ್ನು ಪಾಲಿಸುವುದರ ಮೂಲಕ ವೀಕ್ಷಿಸ ಬೇಕಾಗಿ ಈ ಅಂತರಾಷ್ಟ್ರೀಯ ಮುದ್ರಣ ಬಿ ನಾಲೆಯ ಸಂಯೋಜಕರು ಹಾಗೂ ಕೇಂದ್ರ ಲಲಿತಕಲಾ ಅಕಾಡೆಮಿ ನಿಕಟಪೂರ್ವ ಆಡಳಿತಾಧಿಕಾರಿ ಚಿ. ಸು. ಕೃಷ್ಣ ಸೆಟ್ಟಿ ವಿನಂತಿಸಿಕೊಂಡಿದ್ದಾರೆ.

    ಒಂದೇ ಸೂರಿನಡಿ ಇಂತಹ ಅದ್ಭುತ ಕಲಾಕೃತಿಗಳನ್ನು ನೋಡುವ ಸೌಭಾಗ್ಯ ನಿಮ್ಮದಾಗಲಿದೆ.
    ಸ್ಥಳ:ಕರ್ನಾಟಕ ಚಿತ್ರಕಲಾ ಪರಿಷತ್
    ಕಲಾ ಗ್ಯಾಲರಿ,ಕುಮಾರಕೃಪಾ ರಸ್ತೆ ಶಿವಾನಂದ ವೃತ್ತದ ಬಳಿ ಬೆಂಗಳೂರು
    ದಿನಾಂಕ ಜನವರಿ 23ರವರೆಗೆ ಈ ಕಲಾ ಪ್ರದರ್ಶನ ನಡೆಯಲಿದೆ.ಪ್ರವೇಶ ಉಚಿತ.

    This image has an empty alt attribute; its file name is V-S-NAIK.jpg

    ಕರ್ನಾಟಕ ಚಿತ್ರಕಲಾ ಪರಿಷತ್ ನಲ್ಲಿ ಉಪನ್ಯಾಸಕರಾಗಿರುವ ವಿ. ಎಸ್ . ನಾಯಕರ ಪೂರ್ಣ ಹೆಸರು ವೆಂಕಟದಾಸ್ ಎಸ್ . ನಾಯಕ. ನಾಡಿನ ಅನೇಕ ಪತ್ರಿಕೆಗಳಲ್ಲಿ ಇವರ ಬರಹಗಳು ಪ್ರಕಟವಾಗಿವೆ. ಅನೇಕ ಸಂಸ್ಥೆಗಳಲ್ಲಿ ಕಾರ್ಯಕ್ರಮ ಸಂಯೋಜಕರಾಗಿಯೂ ಪರಿಚಿತರು. ದೂರದರ್ಶನದಲ್ಲಿ ಗಾಂಧೀ ವಿಚಾರಧಾರೆ ಕುರಿತು ಅನೇಕ ಉಪನ್ಯಾಸಗಳನ್ನು ನೀಡಿದ್ದಾರೆ. ಹಲವಾರು ಸಂಸ್ಥೆಗಳ ಪುರಸ್ಕಾರಕ್ಕೂ ಪಾತ್ರರಾಗಿದ್ದಾರೆ.

    OMICRON : ಕೋವಿಡ್ ರೂಲ್ಸ್ ತಿಂಗಳಾಂತ್ಯದವರೆಗೂ ವಿಸ್ತರಣೆ

    BENGALURU JAN 11

    ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಈ ತಿಂಗಳ ಅಂತ್ಯದ ವರೆಗೆ ವಿಸ್ತರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆ ನಿರ್ಧರಿಸಿದೆ. ಕೋವಿಡ್ ಸೋಂಕಿಗೆ ಒಳಗಾಗಿರುವ ಮುಖ್ಯಮಂತ್ರಿಗಳು ತಮ್ಮ ನಿವಾಸದಿಂದಲೇ ಈ ಸಭೆಯಲ್ಲಿ ಭಾಗವಹಿಸಿದ್ದರು.

    ಸಭೆಯ ಮುಖ್ಯಾಂಶಗಳು:

    1. ಕೋವಿಡ್ ಮುಂಜಾಗ್ರತೆ ಕ್ರಮವಾಗಿ ಜಾರಿಗೊಳಿಸುವ ಮಾರ್ಗಸೂಚಿಗಳನ್ನು ಈ ತಿಂಗಳ ಅಂತ್ಯದ ವರೆಗೆ ವಿಸ್ತರಿಸಲು ನಿರ್ಧರಿಸಲಾಯಿತು.
    2. ಶಾಲಾ ಮಕ್ಕಳಲ್ಲಿ ಕೋವಿಡ್ ಹೆಚ್ಚುತ್ತಿರುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪ್ರಕರಣಗಳನ್ನು ಆಧರಿಸಿ ಬಿಇಓ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ವರದಿಯನ್ನು ಆಧರಿಸಿ, ಶಾಲೆಗಳನ್ನು ಮುಚ್ಚುವ ಕುರಿತು ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ತೀರ್ಮಾನಿಸಲಾಯಿತು.
    3. ತಾಲ್ಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತ ಮಕ್ಕಳಿಗೆ ಚಿಕಿತ್ಸೆ ನೀಡಲು ಮಕ್ಕಳ ವಾರ್ಡ್, ಐಸಿಯುಗಳನ್ನು ಮೀಸಲಿರಿಸಲು ಸೂಚಿಸಲಾಯಿತು.
    4. ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲು ನಿರ್ಧರಿಸಲಾಯಿತು.
    5. ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಜಂಟಿಯಾಗಿ ಎಲ್ಲ ಶಾಲೆಗಳಲ್ಲಿ 15 ದಿನಗಳಿಗೊಮ್ಮೆ ಮಕ್ಕಳ ಸಾಮಾನ್ಯ ಆರೋಗ್ಯ ತಪಾಸಣೆ ಮಾಡುವಂತೆ ಸೂಚಿಸಲಾಯಿತು.
    6. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾಗಿ ವಿಧಿಸಿರುವ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಯಿತು.
    7. ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿಗಳ ಕಿಟ್ ಅನ್ನು ಒದಗಿಸುವಂತೆ ಸೂಚಿಸಿದರು.
    8. ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ ಇಲ್ಲವೇ ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆಯನ್ನು ಬಲಪಡಿಸುವಂತೆ ಸೂಚಿಸಿದರು.
    9. ಹೋಮ್ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಯಿತು.
    10. ಬೆಂಗಳೂರಿನಲ್ಲಿ ಕೂಡಲೇ 27 ಕೋವಿಡ್ ಕೇರ್ ಸೆಂಟರುಗಳನ್ನು ಪ್ರಾರಂಭಿಸಲು ಸೂಚಿಸಿದರು.
    11. ಮುಂಬರುವ ಸಂಕ್ರಾಂತಿ, ವೈಕುಂಠ ಏಕಾದಶಿ ಮತ್ತಿತರ ಹಬ್ಬಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸುವಂತೆ ಕಂದಾಯ ಮತ್ತು ಮುಜರಾಯಿ ಇಲಾಖೆಗೆ ಸೂಚಿಸಿದರು.
    12. ಕೋವಿಡ್ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದು 9 ತಿಂಗಳು ಪೂರೈಸಿದ ಮುಂಚೂಣಿಯ ಕಾರ್ಯಕರ್ತರಿಗೆ 3ನೇ ಡೋಸ್ ಅನ್ನು ಆದ್ಯತೆಯ ಮೇರೆಗೆ ನೀಡಲು ಸೂಚಿಸಿದರು.
    13. ಬಿಬಿಎಂಪಿ ವ್ಯಾಪ್ತಿಯಲ್ಲಿ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 1.3 ಲಕ್ಷ ವರೆಗೆ ಹೆಚ್ಚಿಸಲು ಸೂಚಿಸಿದರು.
    14. ಯಾವುದೇ ರೀತಿಯ ಸಾರ್ವಜನಿಕ ಸಮಾವೇಶಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
    15. ಮಾರುಕಟ್ಟೆ ಪ್ರದೇಶದಲ್ಲಿ ಜನದಟ್ಟಣೆ ಕಡಿಮೆಗೊಳಿಸಲು ವಸ್ತುಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
    16. ರಾಜ್ಯದಲ್ಲಿ ಯಾವುದೇ ರೀತಿಯ ಸಿದ್ಧತೆಯಲ್ಲಿ ಲೋಪವಾಗದಂತೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
      ಸಭೆಯಲ್ಲಿ ಸಚಿವರಾದ ಡಾ.ಕೆ. ಸುಧಾಕರ್, ಬಿ.ಸಿ. ನಾಗೇಶ್, ಆರಗ ಜ್ಞಾನೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ. ಸುದರ್ಶನ್ ಮತ್ತು ಇತರ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಂಕ್ರಾಂತಿ ಮತ್ತು ವೈಕುಂಠ ಏಕಾದಶಿ ಆಚರಣೆಗೆ ಮಾರ್ಗಸೂಚಿ:

    Guest Lecturers:ಅತಿಥಿ ಉಪನ್ಯಾಸಕರ ಬೇಡಿಕೆ: ಒಂದೆರಡು ದಿನದಲ್ಲಿ ಸಿಹಿಸುದ್ದಿ ಎಂದ ಸಚಿವರು

    BENGALURU JAN 11

    ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

    ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳನ್ನು ಕುರಿತು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ತಮ್ಮ ನೇತೃತ್ವದಲ್ಲಿ ಮಂಗಳವಾರ ನಡೆದ ಮೂರು ತಾಸುಗಳ ಸಭೆಯ ನಂತರ ಅವರು ಈ ಭರವಸೆ ನೀಡಿದರು. ಸಭೆಯಲ್ಲಿ ಉಪನ್ಯಾಸಕರಿಗೆ ಸಂಬಂಧಿಸಿದ ನಾಲ್ಕೈದು ಸಂಘಗಳ ಪ್ರತಿನಿಧಿಗಳೂ ಭಾಗವಹಿಸಿದ್ದರು.

    ಸಭೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ತಿನ ಹಲವು ಸದಸ್ಯರೊಂದಿಗೆ ವಿಷಯವನ್ನು ಕುರಿತು ಚರ್ಚಿಸಲಾಯಿತು. ಜೊತೆಗೆ ಅತಿಥಿ ಉಪನ್ಯಾಸಕರ ಸಂಘಗಳ ಪರವಾಗಿ ಸಲ್ಲಿಸಿದ ಅಹವಾಲುಗಳನ್ನು ಕೂಡ ಪರಿಶೀಲಿಸಲಾಯಿತು.

    ನಂತರ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು. ಸಿಎಂ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆಯುತ್ತಿರುವ ಕಾರಣ ಒಂದೆರಡು ದಿನಗಳಲ್ಲಿ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು. ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥದಲ್ಲಿ ಆರ್ಥಿಕ ಹೊರೆ ಮುಂತಾದ ಅಂಶಗಳಿವೆ. ಒಟ್ಟಿನಲ್ಲಿ ವಿಚಾರವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುತ್ತಿದೆ ಎಂದರು.

    ಸಭೆಯಲ್ಲಿ ಎಂಎಲ್ಸಿಗಳಾದ ಆಯನೂರು ಮಂಜುನಾಥ್, ಶಶಿಲ್ ನಮೋಶಿ, ಪುಟ್ಟಣ್ಣ, ಚಿದಾನಂದಗೌಡ, ಎಸ್.ವಿ.ಸುಂಕನೂರು, ಅರುಣ್ ಶಹಾಪುರ, ವೈ.ಎ. ನಾರಾಯಣಸ್ವಾಮಿ, ಕೆ.ಟಿ.ಶ್ರೀಕಂಠೇಗೌಡ, ಭೋಜೇಗೌಡ ಮತ್ತು ಹನುಮಂತ ನಿರಾಣಿ, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್ ಮತ್ತು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಉಪಸ್ಥಿತರಿದ್ದರು.

    CM Bommai: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್

    BENGALURU JAN 10

    ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ದೃಢ ಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ತಾವು ಆರೋಗ್ಯ ದಿಂದ ಇರುವುದಾಗಿಯೂ ಸೌಮ್ಯ ಲಕ್ಷಣಗಳಿವೆ ಎಂದು ಹೇಳಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅವರು ಕೋರಿದ್ದಾರೆ.

    ಸದ್ಯ ಮುಖ್ಯಮಂತ್ರಿಗಳು ಹೋಂ ಕೌರಂಟೈನ್ ನಲ್ಲಿ ಇದ್ದಾರೆ.

    error: Content is protected !!