24.7 C
Karnataka
Monday, May 25, 2026
    Home Blog Page 98

    ಪಾಸಿಟಿವಿಟಿ ದರ ಮತ್ತಷ್ಟು ಇಳಿದಿದೆ

    ಕೊರೊನಾ ಸೋಂಕಿನ ವಿರುದ್ಧ ನಿರಂತರ ಹೋರಾಟ ನಡೆಸುತ್ತಾ ಬಂದಿರುವ ಭಾರತ ಸರ್ಕಾರ, ಇದೀಗ ಸೋಂಕಿನ ಪ್ರಮಾಣವನ್ನು ಗಣನೀಯವಾಗಿ ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗುತ್ತಿದೆ. ದೇಶಾದ್ಯಂತ ಕೊರೊನಾ ಸಕ್ರಿಯ ಪ್ರಕರಣಗಳ ಪ್ರಮಾಣ ಇದೀಗ 8 ಲಕ್ಷ ಮಟ್ಟಕ್ಕಿಂತ ಕೆಳಕ್ಕೆ ತಗ್ಗಿದ್ದು, ಅದೀಗ 73 ದಿನಗಳ ನಂತರ 7,98,656ಕ್ಕೆ ಇಳಿಕೆ ಕಂಡಿದೆ.

    ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 62,480 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

    ದೇಶದಲ್ಲಿ ಇಲ್ಲಿಯ ತನಕ 2,85,80,647 ಸೋಂಕಿತರು ಗುಣಮುಖರಾಗಿದ್ದಾರೆ.

    ಕಳೆದ 24 ತಾಸುಗಳಲ್ಲಿ ದೇಶಾದ್ಯಂತ 88,977 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.

    ಸತತ 36ನೇ ದಿನದಲ್ಲಿ ದೈನಂದಿನ ಚೇತರಿಕೆ ಪ್ರಕರಣಗಳು ದಿನನಿತ್ಯ ಕಾಣಿಸಿಕೊಳ್ಳುತ್ತಿರುವ ಹೊಸ ಪ್ರಕರಣಗಳನ್ನು ಹಿಂದಿಕ್ಕುತ್ತಿವೆ.

    ಚೇತರಿಕೆ ಪ್ರಮಾಣ ಇದೀಗ 96.03%ಗೆ ಸುಧಾರಣೆ ಕಂಡಿದೆ.

    ವಾರದ ಪಾಸಿಟಿವಿಟಿ ದರ 5% ಒಳಗಿದ್ದು, ಅದೀಗ 3.80%ಗೆ ತಗ್ಗಿದೆ.

    ದೈನಿಂದಿನ ಪಾಸಿಟಿವಿಟಿ ದರವೂ ಸತತ 11ನೇ ದಿನದಲ್ಲಿ 5%ಗಿಂತ ಕೆಳಗಿನ ಮಟ್ಟದಲ್ಲಿದ್ದು, ಅದೀಗ 3.24% ಇದೆ.

    ಗಂಟಲು ಮತ್ತು ಮೂಗಿನ ದ್ರವ ಪರೀಕ್ಷೆ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಇದುವರೆಗೆ 38.71 ಕೋಟಿ ಜನರ ಪರೀಕ್ಷೆ ನಡೆಸಲಾಗಿದೆ.

    ದೇಶವ್ಯಾಪಿ ಹಮ್ಮಿಕೊಂಡಿರವ ಬೃಹತ್ ಕೋವಿಡ್-19 ಲಸಿಕಾ ಆಂದೋಲನ ಭರದಿಂದ ಸಾಗಿದ್ದು, ಇಲ್ಲಿಯ ತನಕ 26.89 ಕೋಟಿ ಲಸಿಕಾ ಡೋಸ್ ನೀಡಲಾಗಿದೆ.


    ರಾಷ್ಟ್ರೀಯ ಶಿಕ್ಷಣ ನೀತಿ ಈ ವರ್ಷದಿಂದಲೇ ಜಾರಿ

    ಇಪ್ಪತ್ತೊಂದನೆ ಶತಮಾನದಲ್ಲಿ ಕರ್ನಾಟಕ ಸೇರಿ ಇಡೀ ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ  ಬಹುದೊಡ್ಡ ಕ್ರಾಂತಿಕಾರಕ ಬದಲಾವಣೆಗಳಾಗುತ್ತವೆ. ಆ ನಿಟ್ಟಿನಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದೆ ಎಂದು ರಾಷ್ಟ್ರೀಯ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರೂ ಆದ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಮಾಜಿ ಅಧ್ಯಕ್ಷ ಡಾ.ಕಸ್ತೂರಿ ರಂಗನ್‌ ಹೇಳಿದರು.

    ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಮತ್ತು ಡೆನ್ಮಾರ್ಕ್ ನ ಅಲ್ಬೋರ್ಗ್ ವಿವಿಯ ಯುನೆಸ್ಕೊ ಸೆಂಟರ್ ಫಾರ್ ಪ್ರಾಬ್ಲಮ್ ಬೇಸ್ಡ್ ಲರ್ನಿಂಗ್ ಇನ್ ಎಂಜಿನಿಯರಿಂಗ್ ಸೈನ್ಸ್ ಮತ್ತು ಸಸ್ಟೈನಬಿಲಿಟಿ ಸಹಯೋಗದಲ್ಲಿ  ʼಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕಲಿಕಾ ಪದ್ಧತಿʼ ಬಗೆಗಿನ ಪ್ರಾದೇಶಿಕ ಸಂಶೋಧನಾ ವಿಚಾರ ಸಂಕಿರಣವನ್ನು ಉದ್ದೇಶಿಸಿ ಅವರು ಮಾತನಾಡಿದರು.

    “ರಾಷ್ಟ್ರೀಯ ಶಿಕ್ಷಣ ನೀತಿ ಕರ್ನಾಟಕದಲ್ಲಿ ಅತ್ಯಂತ ವೇಗವಾಗಿ ಜಾರಿಗೆ ಬರುತ್ತಿದೆ. ನೂತನ ಶಿಕ್ಷಣ ನೀತಿಯ ಕರಡು ಲಭ್ಯವಾದ ಕೂಡಲೇ ಹಾಗೂ ಕೇಂದ್ರ ಸರಕಾರ ಈ ನೀತಿಯನ್ನು ಪ್ರಕಟಿಸಿದ ಮೊದಲ ದಿನದಿಂದಲೇ ಸರಕಾರ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಈ ನಿಟ್ಟಿನಲ್ಲಿ ಕಾರ್ಯೋನ್ಮುಕರಾಗಿದ್ದನ್ನು ಕಂಡಿದ್ದೇನೆ” ಎಂದು ಕಸ್ತೂರಿರಂಗನ್ ಮೆಚ್ವುಗೆ ವ್ಯಕ್ತಪಡಿಸಿದರು.

    ಶಿಕ್ಷಣ ನೀತಿಯ ಬಗ್ಗೆ ರಾಜ್ಯ ಸರಕಾರಕ್ಕೆ ಇರುವ ಬದ್ಧತೆ, ದೂರದೃಷ್ಟಿ ಶ್ಲಾಘನೀಯ. ಡಾ.ಅಶ್ವತ್ಥನಾರಾಯಣ ಅವರು ಹೋಗುತ್ತಿರುವ ವೇಗ ನನಗೆ ಅಚ್ಚರಿ ಉಂಟು ಮಾಡಿದೆ ಎಂದು ಕಸ್ತೂರಿ ರಂಗನ್‌ ಹೇಳಿದರು.

    ಈ ವರ್ಷದಿಂದಲೇ ಜಾರಿಗೆ ಸಿದ್ಧತೆ

    ಬಳಿಕ ಮಾತನಾಡಿದ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರು, “ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈ ವರ್ಷದಿಂದಲೇ ಜಾರಿ ಮಾಡಲು ಸರಕಾರ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ” ಎಂದರು.

    ರಾಜ್ಯವು ಉದ್ಯಮಶೀಲತೆ, ಆವಿಷ್ಕಾರ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿ ಇರುವುದರಿಂದ ಶಿಕ್ಷಣ ನೀತಿಯೂ ರಾಜ್ಯದ ಶೈಕ್ಷಣಿಕ ವ್ಯವಸ್ಥೆಗೆ ಹೊಸ ಹುರುಪು ನೀಡಲಿದೆ. ಸಮಸ್ಯೆಗೆ ಪರಿಹಾರ ಕಲ್ಪಿಸುವ ಶಿಕ್ಷಣ ನೀಡುವ ಮೂಲಕ ಸಮಾಜ ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಶೀಘ್ರದಲ್ಲೇ ಸಾಕಾರವಾಗಲಿದೆ ಎಂದೇ ಡಿಸಿಎಂ ಹೇಳಿದರು.

    ಶಿಕ್ಷಣ ನೀತಿ ಜಾರಿ ಮಾಡುವ ನಿಟ್ಟಿನಲ್ಲಿ ನನಗೆ ಅವಕಾಶ ಸಿಕ್ಕಿದ್ದು, ನನ್ನ ಜೀವಮಾನದಲ್ಲಿ ಸಿಕ್ಕಿದ ಸುವರ್ಣಾವಕಾಶ ಎಂದ ಡಿಸಿಎಂ, ನಮ್ಮ ಜ್ಞಾನ ಸಂಪತ್ತು ಹೆಚ್ಚಿಸಿಕೊಳ್ಳಲು ನೀತಿಯೂ ಹೆಚ್ಚು ಪರಿಣಾಮಕಾರಿ. ಎಲ್ಲ ಸಮಸ್ಯೆಗಳಿಗೂ ಇದೊಂದೇ ಪರಿಹಾರ ಎಂದರು.

    ಯುನೆಸ್ಕೋದ ಸಮಸ್ಯೆಗೆ ಪರಿಹಾರ ಕಲ್ಪಿಸುವ ಕಲಿಕಾ ಶಿಕ್ಷಣ ವಿಭಾಗದ ಮುಖ್ಯಸ್ಥೆ ಪ್ರೊ.ಅನೆಟ್‌ ಕೊಲ್ಮಾಸ್‌ ಅವರು ಮಾತನಾಡಿ, ಯಾವುದೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ತಾಂತ್ರಿಕ ಮತ್ತು ಆವಿಷ್ಕಾರ ಶಿಕ್ಷಣಕ್ಕೆ ಯುನೆಸ್ಕೋ ಹೆಚ್ಚು ಒತ್ತು ನೀಡುತ್ತಿದೆ. ಆ ನಿಟ್ಟಿನಲ್ಲಿ ನಾವು ಎಲ್ಲ ದೇಶಗಳ ಜತೆ, ಮುಖ್ಯವಾಗಿ ಭಾರತದ ಜತೆ ನಿಕಟವಾಗಿ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದರು.

    ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಷಿ ಸೇರಿದಂತೆ ದೇಶ- ವಿದೇಶಗಳ ತಜ್ಞರು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

    ಶ್ರೀಶಿವಕುಮಾರ ಸ್ವಾಮೀಜಿ ಮನೆಯ ಜೀರ್ಣೋದ್ಧಾರಕ್ಕೆ ಭೂಮಿ ಪೂಜೆ‌

    ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ ಸಿದ್ದಗಂಗಾ ಮಠದ ಹಿರಿಯ ಜಗದ್ಗರು ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹುಟ್ಟಿದ ಮನೆ ಜೀರ್ಣೋದ್ಧಾರ ಕಾಮಗಾರಿಗೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಇಂದು ಮಾಗಡಿ ತಾಲೂಕಿನ ವೀರಾಪುರದಲ್ಲಿ ಭೂಮಿ ಪೂಜೆ ನೆರವೇರಿಸಿದರು.

    ನಂತರ ಮಾತನಾಡಿ ಇದೊಂದು ಪುಣ್ಯದ ಕೆಲಸವಾಗಿದ್ದು ವೀರಾಪುರದಲ್ಲಿ ರಸ್ತೆ, ಶಾಲೆ ಹಾಗೂ ದೇವಸ್ಥಾವನ್ನು ಸಹ ಅಭಿವೃದ್ಧಿ ಪಡಿಸಲಾಗುವುದು‌. ಶ್ರೀಗಳ ಮನೆಯನ್ನು ಜೀರ್ಣೋದ್ಧಾರಗೊಳಿಸಿ ಸುಸಜ್ಜಿತ ವಸ್ತುಸಂಗ್ರಹಾಲಯ ನಿರ್ಮಾಣ ಮಾಡಲಾಗುವುದು. ಅಲ್ಲಿ
    ಶ್ರೀ ಗಳು ಉಪಯೋಗಿಸುತ್ತಿದ್ದ ವಸ್ತುಗಳನ್ನು ಇಡಲಾಗುವುದು ಎಂದರು.

    ವೀರಾಪುರ ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ದಗಂಗಾ ಮಠದ ಶ್ರೀಶಿವಕುಮಾರ ಸ್ವಾಮೀಜಿ ಅವರ 111 ಅಡಿ ಪುತ್ಥಳಿ ನಿರ್ಮಾಣ ಸಾಂಸ್ಕೃತಿಕ ಹಾಗೂ ಪಾರಂಪರಿಕ ಪಾರ್ಕ್ ಗೆ ಸರ್ಕಾರ 25 ಕೋಟಿ ಅನುದಾನ ನೀಡಿದ್ದು, ಕೆ.ಆರ್.ಐ.ಡಿ.ಎಲ್ ಅವರು ಯಾವುದೇ ಸೇವಾ ಶುಲ್ಕ ಪಡೆಯದೆ ಪೂರ್ಣ ಹಣವನ್ನು ಕಾಮಗಾರಿಗೆ ವಿನಿಯೋಗಿಸಲಿದ್ದಾರೆ. ಕಾಮಗಾರಿಯು ನಿಧಾನಗತಿಯಲ್ಲಿ ಸಾಗುತ್ತಿದ್ದು, ಶೀಘ್ರವಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದರು.

    ಇಲ್ಲಿ ನಿರ್ಮಾಣವಾಗುವ 111ಅಡಿ ಪ್ರತಿಮೆಯನ್ನು ಶಿವಗಂಗೆ ಹಾಗೂ ಸಿದ್ದಗಂಗೆ ಯಿಂದ ನೋಡುವ ರೀತಿ ನಿರ್ಮಾಣ ಮಾಡಲಾಗುವುದು. ಪ್ರತಿಮೆಯ ಕೆಳಭಾಗದಲ್ಲಿ ಶ್ರೀ ಗಳ ಜೀವನ ಚರಿತ್ರೆಯ ಮ್ಯೂಸಿಯಂ ನಿರ್ಮಾಣ ಹಾಗೂ ಜೀವನ ಚರಿತ್ರೆಯ ಕಿರುಚಿತ್ರ ವೀಕ್ಷಿಸಲು ಆಡಿಟೋರಿಯಂ ಸಹ ನಿರ್ಮಿಸಲಾಗುವುದು.

    ಶ್ರೀ ಗಳ ಹುಟ್ಟೂರಿನಿಂದ ಸಿದ್ದಗಂಗೆ ಕರ್ಮಭೂಮಿಗೆ 22 ಕಿ.ಮೀ ಇದ್ದು,ಜನರು ಪಾದಯಾತ್ರೆ ಮಾಡುವಂತೆ ರಸ್ತೆ ಅಭಿವೃದ್ಧಿಯಾಗಬೇಕು. , ಅದಿರಂಗ, ಮಧ್ಯರಂಗ, ಅಂತ್ಯರಂಗ ದರ್ಶನ ಪಡೆದರೆ ಪುಣ್ಯ ಬರುತ್ತದೆ ಎಂಬ ನಂಬುಕೆ ಇದೆ. ಅದೇ ರೀತಿ ಶ್ರೀಗಳ ಹುಟ್ಟೂರು ವೀರಾಪುರ , ಸಿದ್ದಗಂಗಾ ಹಾಗೂ ಶಿವಗಂಗಾ ಸ್ಥಳಗಳ ದರ್ಶನ ಪಡೆದರೆ ಪುಣ್ಯ ಸಿಗುತ್ತದೆ ಎಂದರು.

    ಇದಕ್ಕೂ ಮುನ್ನ ಸಚಿವರು ಪ್ರತಿಮೆ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

    ಕಾರ್ಯಕ್ರಮದಲ್ಲಿ ಕೆ.ಆರ್.ಐ.ಡಿ.ಎಲ್ ಅಧ್ಯಕ್ಷ ರುದ್ರೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ, ರಾಮನಗರ ಉಪವಿಭಾಗಾಧಿಕಾರಿ ಮಂಜುನಾಥ್, ಮಾಗಡಿ ತಹಶೀಲ್ದಾರ್ ಶ್ರೀನಿವಾಸ್ ಪ್ರಸಾದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವಿನಯ್ ಕುಮಾರ್ ಉಪಸ್ಥಿತರಿದ್ದರು.

    ಹಳ್ಳಿ ಹಕ್ಕಿ ಸಿಡಿಸಿದ ಬಾಂಬ್ ಗೆ ಬೆಚ್ಚಿ ಬಿತ್ತೆ ಹೈಕಮಾಂಡ್

    ಬೃಹತ್‌ ನೀರಾವರಿ ಇಲಾಖೆಯಲ್ಲಿ 20,000 ಕೋಟಿ ರೂ. ಟೆಂಡರ್‌ ವ್ಯವಹಾರವನ್ನು ಹಣಕಾಸು ಇಲಾಖೆ ಕ್ಲಿಯರೆನ್ಸ್‌ ಇಲ್ಲದೆ ಅಂತಿಮಗೊಳಿಸಲಾಗಿದೆ. ಇದರಲ್ಲಿ 10% ಕಿಕ್‌ಬ್ಯಾಕ್‌ ವ್ಯವಹಾರವಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರ ನೇರ ಪಾತ್ರವಿದೆ ಎಂದು ಬಿಜೆಪಿ ಹಿರಿಯ ನಾಯಕ ಎಚ್.ವಿಶ್ವನಾಥ್‌ ಮಾಡಿರುವ ಆರೋಪ ಗುರುವಾರ ಕತ್ತಲಾಗುವ ಮುನ್ನವೇ ಹೈಕಮಾಂಡ್‌ ಕಿವಿಗೆ ಬಿದ್ದಿದೆ.ಇದರ ಬೆನ್ನ ಹಿಂದೆಯೇ ವಿಜಯೇಂದ್ರ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತು ಕತೆ ನಡೆಸಿದ್ದಾರೆ.

    ಅಲ್ಲದೆ, ಬಳ್ಳಾರಿಯಲ್ಲಿ ಜಿಂದಾಲ್‌ಗೆ 3,600 ಎಕರೆ ಪ್ರದೇಶವನ್ನು ಪರಭಾರೆ ಮಾಡುವುದರಲ್ಲೂ ಭರ್ತಿ ಭ್ರಷ್ಟಾಚಾರ ನಡೆದಿದೆ. ಹೈಕಮಾಂಡ್‌ಗೆ ಹಣ ನೀಡಬೇಕು ಎಂದು ಹೇಳುವ ಮೂಲಕ ಇಲ್ಲಿನ ಗಲೀಜನ್ನು ವರಿಷ್ಠರಿಗೂ ಮೆತ್ತಿಸುವ ಕೆಲಸ ನಡೆಯುತ್ತಿದೆ ಎಂದು ವಿಶ್ವನಾಥ್‌ ಹೇಳಿರುವ ಮಾತು ಗಂಭೀರ ಸ್ವರೂಪ ಪಡೆದುಕೊಂಡಿದೆ

    ಅರುಣ್‌ ಸಿಂಗ್‌ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಶಾಸಕರ ಅಭಿಪ್ರಾಯ ಆಲಿಸುತ್ತಿದ್ದ ಸಮಯದಲ್ಲೇ ವಿಶ್ವನಾಥ್‌ ಸಿಡಿಸಿದ ಬಾಂಬ್‌ ರಾಜ್ಯ ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿದೆ. ಹಳ್ಳಿಹಕ್ಕಿ ಹೇಳಿಕೆಗಳು ಭಿನ್ನಮತೀಯರ ಗುಂಪಿಗೆ ದೊಡ್ಡ ಲೀಡ್‌ ಕೊಟ್ಟಿದ್ದರೆ ಅತ್ತ ಸಿಎಂ ನಿಷ್ಠರ ಪಾಳೆಯದಲ್ಲಿ ಆತಂಕ ಉಂಟಾಗಿದೆ. ಜತೆಗೆ, ಮುಖ್ಯಮಂತ್ರಿ ನಿಷ್ಠರ ಗುಂಪಿನ ರೇಣುಕಾಚಾರ್ಯ ಹಾಗೂ ಎಸ್.ಆರ್.‌ವಿಶ್ವನಾಥ್‌ ವಿರುದ್ಧ ʼಕೆಲ ಶಬ್ದʼಗಳನ್ನು ಬಳಸಿ ಹಳ್ಳಿಹಕ್ಕಿ ಹರಿಹಾಯ್ದಿರುವುದು ಸ್ವತಃ ಮುಖ್ಯಮಂತ್ರಿಗೂ ತೀವ್ರ ಮುಜುಗರ ಉಂಟು ಮಾಡಿದೆ.

    ಇಷ್ಟಕ್ಕೂ ವಿಶ್ವನಾಥ್‌ ಹೇಳಿದ್ದೇನು?

    “ಜೆಡಿಎಸ್‌ನಲ್ಲಿ ಇದ್ದ ಕೆಟ್ಟ ಪರಿಸ್ಥಿತಿ ಈಗ ಬಿಜೆಪಿಯಲ್ಲೂ ಇದೆ. ಅಲ್ಲಿಂದ ಇಲ್ಲಿ ಬಂದರೆ, ಇಲ್ಲಿಯೂ ಅದೇ ಕುಟುಂಬ ರಾಜಕಾರಣ ಮನೆ ಮಾಡಿದೆ. ಕರ್ನಾಟಕದ ಬಿಜೆಪಿ ಘಟಕ ನರೇಂದ್ರ ಮೋದಿ ಸಾಧನೆ, ಕೆಲಸಗಳ ಬಗ್ಗೆ ಯಾರೂ ಮಾತನಾಡುತ್ತಿಲ್ಲ. ಇವರಿಗೆಲ್ಲ ʼವ್ಯವಹಾರವೇʼ ಮುಖ್ಯವಾಗಿಬಿಟ್ಟಿದೆ. ಇನ್ನು ಯಡಿಯೂರಪ್ಪ ಅವರಿಗೆ ವಯಸ್ಸು ಸಹಕರಿಸುತ್ತಿಲ್ಲ. ಆಡಳಿತದಲ್ಲಿ ಸಿಎಂ ಕುಟುಂಬದ ಹಸ್ತಕ್ಷೇಪ ಅತಿಯಾಗಿದೆ. ಲಂಚಗುಳಿತನ, ಭ್ರಷ್ಟಾಚಾರ ಮಿತಿ ಮೀರಿಬಿಟ್ಟಿದೆ. ಮುಖ್ಯವಾಗಿ ವಿಜಯೇಂದ್ರ ಹಸ್ತಕ್ಷೇಪದಿಂದ ಎಲ್ಲರಿಗೂ ಕಷ್ಟವಾಗುತ್ತಿದೆ. ನೀರಾವರಿ ಇಲಾಖೆಯಲ್ಲಿ 20,000 ಕೋಟಿ ರೂ. ಟೆಂಡರ್‌ ಫೈನಲ್‌ ಮಾಡಲಾಗಿದೆ. ಈ ಟೆಂಡರ್‌ಗೆ ಹಣಕಾಸು ಇಲಾಖೆ ಒಪ್ಪಿಗೆಯನ್ನೇ ನೀಡಿಲ್ಲ. ಅಧಿಕಾರಿಗಗಳನ್ನು ಕಡೆಗಣಿಸಲಾಗಿದೆ. ಇದೆಲ್ಲದರ ಹಿಂದೆ ವಿಜಯೇಂದ್ರ ಇದ್ದಾರೆ. 10% ಕಮೀಷನ್‌ ವ್ಯವಹಾರವಿದೆ. ಹೈಕಮಾಂಡ್‌ಗೂ ಹಣ ನೀಡಬೇಕೆಂದು ಇವರೆಲ್ಲ ಹೇಳಿಕೊಂಡು ಓಡಾಡುತ್ತಿದ್ದಾರೆ. ಇದರಿಂದ ವರಿಷ್ಠರಿಗೂ ಕೆಟ್ಟ ಹೆಸರು ಬರುತ್ತಿದೆ” ಎಂದು ವಿಶ್ವನಾಥ್‌ ಹೇಳಿದ್ದಾರೆ.

    ಇದೇ ವಿಷಯವನ್ನು ಅರುಣ್‌ ಸಿಂಗ್‌ಗೂ ನೇರವಾಗಿ ಹೇಳಿದ್ದೇನೆ ಎಂದ ಅವರು ಮಾಧ್ಯಮಗಳ ಮುಂದೆಯೂ ವಿವರವಾಗಿ ಮಾತನಾಡಿದರು.

    ಯಡಿಯೂರಪ್ಪ ಅವರನ್ನು ಬದಲಿಸಿ

    ವೀರಶೈವ ಸಮುದಾಯದವರನ್ನು ಮುಖ್ಯಮಂತ್ರಿ ಮಾಡಿ ಎಂದು ವಿಶ್ವನಾಥ್ ಹೇಳಿದ್ದಾರೆ.
    ಪಂಚಮಸಾಲಿ ಸಮುದಾಯಕ್ಕೆ ಸೇರಿದ ಮೂವರು ಶಾಸಕರಿದ್ದಾರೆ. ಮುರುಗೇಶ್ ನಿರಾಣಿ, ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್. ಈ ಮೂವರಲ್ಲಿ ಯಾರನ್ನಾದರೂ ಮುಖ್ಯಮಂತ್ರಿಯನ್ನಾಗಿ ಮಾಡಲಿ ಎಂದರು.

    ಯಡಿಯೂರಪ್ಪನವರಿಗೆ ಮೊದಲಿದ್ದ ಶಕ್ತಿ, ಸ್ಪಿರಿಟ್, ಆರೋಗ್ಯ ಈಗ ಇಲ್ಲ. ಹೀಗಾಗಿ ಕಾಮನ್ ಸೆನ್ಸ್ ಇರುವ ವ್ಯಕ್ತಿಯೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ. ಇನ್ನು, ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡುತ್ತಿರುವ ಮಠಾಧೀಶರು ಬಸವ ತತ್ತ್ವವನ್ನು ಮರೆಯಬಾರದು ಎಂದರು.

    ಸ್ವಲ್ಪ ಮೆತ್ತಗಾದರಾ ಸೈನಿಕ

    ಯೋಗೇಶ್ವರ್‌ ಉಸ್ತುವಾರಿ ಅರುಣ್‌ ಸಿಂಗ್‌ ಮುಂದೆ ಇದ್ದದ್ದೆಲ್ಲವನ್ನೂ ಬಿಚ್ಚಿಟ್ಟರು ಎಂದು ಅವರ ಆಪ್ತರೊಬ್ಬರು ಹೇಳಿದರು. ರಾಜ್ಯದಲ್ಲಿ ಮೂರು ಪಕ್ಷಗಳ ಸರಕಾರ ಇದೆ. ರಾಮನಗರ ಜಿಲ್ಲೆಯಲ್ಲೂ ಅದರಲ್ಲೂ ಚನ್ನಪಟ್ಟಣ ಕ್ಷೇತ್ರದಲ್ಲಿ ನಾನು ಹೇಳಿದ ಕೆಲಸಗಳು ಆಗುತ್ತಿಲ್ಲ. ಆದರೆ ಜೆಡಿಎಸ್‌ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳುವ ಕೆಲಸಗಳೆಲ್ಲ ಆಗುತ್ತಿವೆ” ಎಂದು ದೂರಿದರು.

    ಈ ಮಾತು ಕೇಳುತ್ತಿದ್ದಂತೆ, “ಹೇ ಸಚ್ಛಾ ಹೈ ಕ್ಯಾ” ಎಂದು ತಿರುಗಾ ಯೋಗಿಯನ್ನೇ ಪ್ರಶ್ನೆ ಮಾಡಿದ್ದಾರೆ. ಯೋಗಿ, ತಮ್ಮ ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲ ವಿಷಯಗಳನ್ನು ಬಿಡಿಸಿ ಬಿಡಿಸಿ ಹೇಳಿದ್ದಾರೆ ಎನ್ನಲಾಗಿದೆ.

    ಫೋನ್‌ ಕದ್ದಾಲಿಕೆ ಬಾಂಬ್

    ಉಳಿದಂತೆ ಭಿನ್ನರು ಸ್ಫೋಟಿಸಿದ ಇನ್ನೊಂದು ಭಾರೀ ಬಾಂಬ್‌ ಎಂದರೆ ಮೊಬೈಲ್‌ ಕರೆ ಕದ್ದಾಲಿಕೆ. ಭುನ್ನಮತೀಯರ ಗ್ಯಾಂಗ್‌ ಲೀಡರ್‌ ಎಂದೇ ಗುರುತಿಸಿಕೊಂಡಿರುವ ಅರವಿಂದ ಬೆಲ್ಲದ್‌ ತಮ್ಮ ಫೋನ್‌ ಕರೆಗಳ ಕದ್ದಾಲಿಕೆ ಆಗುತ್ತಿದೆ. ಪಕ್ಷದಲ್ಲಿಯೇ ಈ ಬಗ್ಗೆ ನನ್ನ ವಿರುದ್ಧ ದೊಡ್ಡ ಷಡ್ಯಂತ್ರ್ಯ ನಡೆಯುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.‌

    ಈ ಹಿಂದಿನ ಸರಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಕೂಡ ಫೋನ್‌ ಕದ್ದಾಲಿಕೆ ಆರೋಪ ಬಂದು ದೊಡ್ಡ ಗದ್ದಲವಾಗಿತ್ತು. ಈಗ ಸ್ವಪಕ್ಷೀಯರಿಂದಲೇ ಸಿಎಂ ವಿರುದ್ಧ ಈ ಗಂಭೀರ ಆರೋಪ ಬಂದಿದೆ. ಜತೆಗೆ, ನನ್ನನ್ನು ಯಾರೋ ಅಪರಿಚಿತರು ಫಾಲೋ ಮಾಡುತ್ತಿದ್ದಾರೆಂದು ಬೆಲ್ಲದ್‌ ಅವರು ಕಾಣದ ವ್ಯಕ್ತಿಗಳತ್ತ ಬೆರಳು ತೋರಿಸಿದ್ದಾರೆ.

    ಇವತ್ತಿನ ಮತ್ತೊಂದು ಮಹತ್ತ್ವದ ಬೆಳವಣಿಗೆ ಎಂದರೆ ನಿಗದಿಯಾಗದ್ದ ರೆಬೆಲ್‌ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಅರುಣ್‌ ಸಿಂಗ್‌ ಭೇಟಿ ರದ್ದಾಗಿದೆ. ಬಿಜೆಪಿ ಮೂಲಗಳ ಪ್ರಕಾರ ಯತ್ನಾಳ್‌ ಭೇಟಿಗೆ ಸಿಂಗ್‌ ನಿರಾಕರಿಸಿದ್ದಾರೆ ಎನ್ನಲಾಗಿದೆ. ಹಿಂದೆ ಇದೇ ಯತ್ನಾಳ್‌ ಅವರು ಅರುಣ್‌ ಸಿಂಗ್‌ ವಿರುದ್ಧ ಹರಿಹಾಯ್ದಿದ್ದರು. ಸಿಂಗ್‌ ಮುಖ್ಯಮಂತ್ರಿಗೆ ಫೇವರ್‌ ಮಾಡುತ್ತಿದ್ದಾರೆಂದು ದೂರಿದ್ದರು. ಬಹುಶಃ ಈ ಭೇಟಿ ಕ್ಯಾನ್ಸಲ್‌ಗೆ ಹಳೆಯ ಜಿದ್ದು ಕಾರಣ ಎನ್ನಬಹುದು.

    ಫೈನಲಿ, ಇವತ್ತು 10 ಶಾಸಕರನ್ನಷ್ಟೇ ಭೇಟಿಯಾಗಿದ್ದಾರೆ. ನಾಳೆ ಅಬ್ಬಾ ಎಂದರೂ 20 ಶಾಸಕರ ಅಭಿಪ್ರಾಯ ಕೇಳಬಹುದು. ಇದು ಪಕ್ಕಾ ಕಾಟಾಚಾರದ ಮಾತುಕತೆ ಎನ್ನುವುದು ಯಾರಿಗಾದರೂ ಅನಿಸುತ್ತದೆ ಎನ್ನುವುದು ವಿರೋಧಿ ಬಣದ ಗೊಣಗಾಟ. ಶುಕ್ರವಾರ ಸಂಜೆ ದಿಲ್ಲಿ ಫ್ಲೈಟ್‌ ಹತ್ತುವ ಮುನ್ನ ಅವರು ಪಕ್ಷದ ರಾಜ್ಯ ಪದಾಧಿಕಾರಿಗಳ ಸಭೆಯನ್ನೂ ನಡೆಸಲಿದ್ದಾರೆ.-cknewsnow.com

    ಕೋವಿಡ್ ಬರುವ ಮುನ್ನ Stay home, Stay safe ಕೋವಿಡ್ ಬಂದಾಗ Stay Brave, Stay safe


    ಕೋವಿಡ್ ಎರಡನೇ ಅಲೆ ಕಡಿಮೆಯಾಗುತ್ತಿದೆ.ಈ ಅಲೆಯನ್ನು ಅನೇಕರು ಮೆಟ್ಟಿನಿಂತು ಎದುರಿಸಿ ಬಂದಿದ್ದಾರೆ. ಗೆದ್ದವರ ಪಾಸಿಟಿವ್ ಕಥೆಗಳನ್ನು ಇಲ್ಲಿ ಸಾದರ ಪಡಿಸುತ್ತಿದ್ದೇವೆ. ಈ ಗೆಲವು ಇನ್ನೊಬ್ಬರಿಗೆ ಸ್ಫೂರ್ತಿಯಾಗಲಿ. ಕರೋನಾ ಒಂದೇ ಅಲ್ಲ ಯಾವ ರೋಗ ಬಂದರು ಧೈರ್ಯದಿಂದ ಎದುರಿಸಿದಾಗ ಜಯಿಸಲು ಸಾಧ್ಯ


    .

    ನನ್ನ ಕರೋನಾಜನಕ ಕಥೆ

    ಕರೋನಾ ಕುರಿತ ವಾರ್ತೆಯನ್ನು ಟಿವಿಯಲ್ಲಿ ನೋಡಿ ಭಯ ಪಡುತ್ತಿದ್ದ ಕಾಲ ಒಂದಿತ್ತು. ಆದರೆ ನನ್ನ test report ಪಾಸಿಟಿವ್ ಬಂದ ಕ್ಷಣ ನೆನಪಾಗಿದ್ದು ಶಾಲೆಯಲ್ಲಿ ಓದಿದ್ದ ಸುಭಾಷಿತ ” ಧೈರ್ಯಂ ಸರ್ವತ್ರ ಸಾಧನಂ” .

    ಮೇ 22 ನನ್ನ ಕರೋನಾ ಲಕ್ಷಣದ (ಜ್ವರ, ತಲೆಭಾರ) ಮೊದಲ ದಿನ. ಮೇ 23 (ಭಾನುವಾರ) ನನ್ನ ಟೆಸ್ಟ್ ರಿಪೋರ್ಟ್ ಪಾಸಿಟಿವ್ ಬಂದ ದಿನ.

    ಆ ದಿನ ನನ್ನ ತಲೆಯಲ್ಲಿ ಓಡುತ್ತಿದ್ದ 2 ವಿಷಯಗಳು: 

    1. ನನ್ನಿಂದ ಮನೆಯ ಯಾರಿಗೂ ಕರೋನಾ ಹರಡಬಾರದು.
    2. ಆಫೀಸ್ ಕೊಡುವ   3 ವಾರಗಳ ಕೋವಿಡ್  ರಜದಲ್ಲಿ ಯಾವ ಫಿಲ್ಮ್ ಮತ್ತು ವೆಬ್ ಸೀರಿಸ್ ನೋಡಬೇಕು?

    ಮೊದಲನೇ ದಿನದ ತಲೆ ಭಾರದಿಂದ ಚೇತರಿಸಿಕೊಂಡ ನಂತರ ನನಗೆ almost ಕೋವಿಡ್ ನ ಎಲ್ಲಾ ರೋಗ ಲಕ್ಷಣಗಳು ಕಾಣಿಸಲಾರಂಭಿಸಿದವು (ತಲೆಭಾರ, ಜ್ವರ, ಮೈ ಕೈ ನೋವು, ವಾಂತಿ,  ಭೇದಿ , ರುಚಿ ಮತ್ತು ವಾಸನೆ  ಇಲ್ಲದಾಯಿತು).

    ಆದರೆ  ನನ್ನ ವೈದ್ಯರ,  ಸ್ನೇಹಿತರ ಮತ್ತು ಮನೆಯ ಇತರ ಸದಸ್ಯರ ಸಹಾಯ ಮತ್ತು ಅವರು ನೀಡಿದ ಆತ್ಮಸ್ಥೈರ್ಯದಿಂದ ಮೊದಲ 5 ದಿನಗಳಲ್ಲಿ ಎಲ್ಲಾ ಲಕ್ಷಣಗಳು ಕ್ಷೀಣಿಸತೊಡಗಿದವು, ಆದರೆ ರುಚಿ ಮತ್ತು ವಾಸನೆ ಇಲ್ಲದೆ ನಾನು ಕಳೆದ 10 ದಿನಗಳು ಸ್ವಲ್ಪ ಮಟ್ಟಿಗೆ ಕಷ್ಟಕರವಾಗಿದ್ದವು.

    ಜಂಕ್ ಫುಡ್ ಮತ್ತು ಕುರುಕಲು ತಿಂಡಿಗೆ ಅಭ್ಯಾಸವಾಗಿದ್ದ ನಾಲಿಗೆಗೆ ಏನೂ ರುಚಿಯಿಲ್ಲದ ಬಿಸಿನೀರು, ಕಷಾಯ, ಅನ್ನ,ಸಾರು  ಹಸಿಬಿಸಿ ತರಕಾರಿ, ಹಣ್ಣು ತಿಂದು ಬೇಸರವಾಗಿತ್ತು. ಆದರೆ ಆರೋಗ್ಯವಾಗಿದ್ದಾಗ ಮಾಡಬೇಕೆಂದುಕೊಂಡಿದ್ದ ಸೋ ಕಾಲ್ಡ್  ಸ್ಟ್ರಿಕ್ಟ್ ಹೆಲ್ದಿ ಡಯೆಟ್ ,  ರೆಗ್ಯುಲರ್ ವಾಕಿಂಗ್  ಆ ಇಪ್ಪತ್ತೊಂದು ದಿನ ಮಾಡಿದ ಕಾರಣ ನನ್ನ ತೂಕ 1.5 kg ಕಡಿಮೆಯಾಯಿತು.

    ನ್ಯೂಸ್ ಚಾನೆಲ್ ಗಳನ್ನು ನೋಡಿ ನಾನು ಪಟ್ಟ ಭಯ ತುಂಬ ಸಿಲ್ಲಿ ಎನ್ನುವ ಅನುಭವ ಆಯಿತು.

    ಕೋವಿಡ್ –  19 ಒಂದು ಸಾಧಾರಣ ಜ್ವರ,  ಮತ್ತಿತರ ಲಕ್ಷಣಗಳಿಂದ ಕೂಡಿದ ರೋಗ.  ಅದರ ಬಗ್ಗೆ ತುಂಬಾ ತಲೆ/ ಮನಸ್ಸು ಕೆಡಿಸಿಕೊಂಡು ಕಂಗಾಲಾಗುವ ಅಗತ್ಯವಿಲ್ಲ. ಮೊದಲನೆಯ ದಿನದಿಂದಲೇ ವೈದ್ಯರನ್ನು ಸಂಪರ್ಕಿಸಿ ಔಷಧಿ, ಪ್ರಾಪರ್ ರೆಸ್ಟ್,  ಗುಡ್ ಡಯೆಟ್ ನಿಂದ ನಾವಿದನ್ನು ಸುಲಭವಾಗಿ ಸೋಲಿಸಬಹುದು.  ಇದು ನನ್ನ ಅನುಭವದ ಮಾತು. ಲಕ್ಷಣಗಳು ಕಾಣಿಸಿಕೊಂಡ ಕೂಡಲೇ ಹಿಂದೆ ಮುಂದೆ ನೋಡದೆ ಟೆಸ್ಟ್ ಮಾಡಿಸಿಕೊಳ್ಳಬೇಕು. ವೈದ್ಯರ ಸಲಹೆಯಂತೆ ನಡೆಯಬೇಕು. self medication ಯಾವಾಗಲೂ ಅಪಾಯಕಾರಿ.

    ಕೋವಿಡ್ ಬರುವ ಮುನ್ನ
    “Stay home, Stay safe”
    ಕೋವಿಡ್ ಬಂದಾಗ
    “Stay Brave, Stay safe”

    ನನ್ನ ಈ ಅನುಭವದ ಲೇಖನದಿಂದ ಇದನ್ನು ಓದುತ್ತಿರುವ ಯಾರಾದರೂ ಒಬ್ಬರಿಗೆ 1% ಕೋವಿಡ್ ನ ಭಯ ಹೋಗಿ ಅದನ್ನು ಎದುರಿಸಬಲ್ಲೆ ಎಂಬ positive energy ಬಂದರೆ ನನ್ನ ಈ ಮೊದಲ ಬರವಣಿಗೆ ಪ್ರಯತ್ನ ಸಾರ್ಥಕ. 


    ಕೊರೋನಾ ಗೆದ್ದವರು ತಮ್ಮ ಅನುಭವದ ಕಥೆಯನ್ನು [email protected] ಗೆ ಇ ಮೇಲ್ ಮಾಡಿ. ಸೂಕ್ತವಾದುವನ್ನು ಪ್ರಕಟಿಸಲಾಗುವುದು

    ಬೆಲ್ಲದ ಪೋನ್ ಟ್ಯಾಪ್ ಆರೋಪ; ನ್ಯಾಯಾಂಗ ತನಿಖೆಗೆ ಸಿದ್ಧರಾಮಯ್ಯ ಆಗ್ರಹ

    ತಮ್ಮ ಪೋನ್ ಟ್ಯಾಪ್ ಆಗ್ತಿದೆ ಎಂದು ಬಿಜೆಪಿಯ ಭಿನ್ನಮತೀಯ ಶಾಸಕ ಅರವಿಂದ್ ಬೆಲ್ಲದ ಅವರು ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು. ಈ ಆರೋಪವನ್ನು ತಿಪ್ಪೆ ಸಾರಿಸುವ ಸ್ಪಷ್ಟೀಕರಣದ ಮೂಲಕ ಮುಚ್ಚಿಹಾಕುವ ಪ್ರಯತ್ನ ಮಾಡದೆ ಈ ಬಗ್ಗೆ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆ ತರಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.

    ಪೋನ್ ಟ್ಯಾಪಿಂಗ್ ಆಗುತ್ತಿರುವುದನ್ನು ಬಹಿರಂಗಪಡಿಸುವ ಧೈರ್ಯ ತೋರಿದ ಶಾಸಕ ಅರವಿಂದ ಬೆಲ್ಲದ ಅವರನ್ನು ಅಭಿನಂದಿಸುತ್ತೇನೆ. ಇದು ಕೇವಲ ಬೆಲ್ಲದರೊಬ್ಬರ ಪೋನ್ ಗೆ ಸಂಬಂಧಿಸಿದ್ದಾಗಿರಲಿಕ್ಕಿಲ್ಲ, ರಾಜ್ಯ ಬಿಜೆಪಿಯಲ್ಲಿ ಭಿನ್ನಮತೀಯರೆಂದು ಗುರುತಿಸಿಕೊಂಡಿರುವ ಇತರ ಶಾಸಕರು ಮಾತ್ರವಲ್ಲ ವಿರೋಧಪಕ್ಷದ ನಾಯಕರ ಪೋನ್ ಗಳ ಕದ್ದಾಲಿಕೆಯೂ ನಡೆದಿರುವ ಎಲ್ಲ ಸಾಧ್ಯತೆಗಳೂ ಇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

    ರಾಜ್ಯ ಬಿಜೆಪಿಯ ಭಿನ್ನಮತೀಯ ನಾಯಕರಿಂದ ಮುಖ್ಯಮಂತ್ರಿಗಳನ್ನು ಪದಚ್ಯುತಿಗೊಳಿಸುವ ಪ್ರಯತ್ನ ನಡೆಯುತ್ತಿರುವ ಸಂದರ್ಭದಲ್ಲಿಯೇ ಇಂತಹದ್ದೊಂದು ಆರೋಪ ವ್ಯಕ್ತವಾಗಿದೆ. ಅರವಿಂದ ಬೆಲ್ಲದ ಅವರು ಭಿನ್ನಮತೀಯರ ಜೊತೆ ಗುರುತಿಸಿಕೊಂಡಿರುವ ಪ್ರಮುಖ ಶಾಸಕರೂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಆರೋಪದ ಗುರಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ ಆಗಿರುತ್ತಾರೆ.
    ಬೆಲ್ಲದ ಅವರ ಆರೋಪದ ತನಿಖೆಯನ್ನು ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವ ಯಾವ ಸಂಸ್ಥೆ ನಡೆಸಿದರೂ ಅದರಿಂದ ಸತ್ಯ ಸಂಗತಿ ಖಂಡಿತ ಹೊರಬರಲಾರದು. ಆದ್ದರಿಂದ ಈ ತನಿಖೆಯನ್ನು ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದಲೇ ನಡೆಸುವುದು ಸೂಕ್ತವಾಗಿದೆ. ಬೆಲ್ಲದ ಅವರು ತನ್ನ ಆರೋಪದಲ್ಲಿ ಈಗಾಗಲೇ ಜೈಲಲ್ಲಿರುವ ಯುವರಾಜ ಸ್ವಾಮಿ ಎಂಬ ವ್ಯಕ್ತಿಯ ಹೆಸರೂ ಪ್ರಸ್ತಾಪವಾಗಿದೆ. ಈ ಬಗ್ಗೆಯೂ ತನಿಖೆಯಾಗಬೇಕಾಗಿದೆ ಎಂದು ಅವರು ಹೇಳಿದ್ದಾರೆ.

    ಇಡೀ ರಾಜ್ಯ ಕೊರೊನಾ ಸೋಂಕಿನಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವಾಗಲೇ ಆಡಳಿತಾರೂಢ ಬಿಜೆಪಿಯ ನಾಯಕರು ಬೀದಿಬೀದಿಗಳಲ್ಲಿ ಕಚ್ಚಾಟಕ್ಕೆ ಇಳಿದಿರುವುದು ನೋಡಿದರೆ ಇವರಿಗೆ ಅಧಿಕಾರದ ಲಾಲಸೆ ಮಾತ್ರ ಇದೆ ಹೊರತು ರಾಜ್ಯದ ಜನರ ಹಿತರಕ್ಷಣೆಯ ಕಾಳಜಿ ಕಿಂಚಿತ್ತೂ ಇಲ್ಲ ಎನ್ನುವುದು ಸಾಬೀತಾಗಿದೆ.
    ಭಿನ್ನಮತೀಯ ಚಟುವಟಿಕೆಗಳಿಂದಾಗಿ ರಾಜ್ಯದ ಆಡಳಿತ ಯಂತ್ರ ಸಂಪೂರ್ಣವಾಗಿ ಸ್ಥಬ್ಧವಾಗಿದೆ.ಈ ಪರಿಸ್ಥಿವತಿಯನ್ನು ಘನತೆವೆತ್ತ ರಾಜ್ಯಪಾಲರು ಗಂಭೀರವಾಗಿ ಪರಿಗಣಿಸಿ ಈ ಜನದ್ರೋಹಿ ಸರ್ಕಾರವನ್ನು ವಜಾಮಾಡಬೇಕು ಎಂದು ಸಿದ್ಧರಾಮಯ್ಯ ಆಗ್ರಹ ಪಡಿಸಿದ್ದಾರೆ.


    ಬೆಲ್ಲದ ಆರೋಪ ಏನು?

    ಇಂದು ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅರವಿಂದ ಬೆಲ್ಲದ ತಮ್ಮ ಪೋನ್ ಟ್ಯಾಪ್ ಆಗುತ್ತಿರುವ ಸಂಶಯ ವ್ಯಕ್ತಪಡಿಸಿದ್ದರು. ಈ ಬಗ್ಗೆ ಸ್ಪೀಕರ್, ಗೃಹ ಮಂತ್ರಿ, ಪೋಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿರುವುದಾಗಿ ಹೇಳಿದ್ದರು.

    ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆ ಕಡಿತ ಇಲ್ಲ

    ಪದವಿ ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಮೊಟಕುಗೊಳಿಸುವ ಯಾವುದೇ ಚಿಂತನೆ ಅಥವಾ ಪ್ರಸ್ತಾವನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

    ಗುರುವಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಸ್ಥಳೀಯ ಹಾಗೂ ಪ್ರಾದೇಶಿಕ ಭಾಷೆಗಳಿಗೆ ಹೆಚ್ಚು ಮನ್ನಣೆ ನೀಡಿ ಆ ಭಾಷೆಗಳಲ್ಲೇ ವೃತ್ತಿಪರ ಶಿಕ್ಷಣ ಸೇರಿ ಎಲ್ಲ ವಿಭಾಗದ ಉನ್ನತ ಶಿಕ್ಷಣವನ್ನು ಬೋಧಿಸಬೇಕು ಎಂಬುದು ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯ. ಈ ಅಂಶಕ್ಕೆ ಶಿಕ್ಷಣ ನೀತಿಯಲ್ಲಿ ಹೆಚ್ಚು ಒತ್ತು ನೀಡಲಾಗಿದೆ” ಎಂದಿದ್ದಾರೆ.

    ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ, ಪದವಿ ಶಿಕ್ಷಣ ಸಂರಚನೆ ಹೀಗಿರುತ್ತದೆ. ಮೂರು ವರ್ಷ ವ್ಯಾಸಂಗ ಮಾಡಿದರೆ ಪದವಿ ಮುಗಿಯುತ್ತದೆ. ನಾಲ್ಕು ವರ್ಷ ಓದಿದರೆ ಅದನ್ನು ʼಡಿಗ್ರಿ ಆನರ್ಸ್‌ʼ ಎಂದು ಪರಿಗಣಿಸಲಾಗುತ್ತದೆ, ಮತ್ತೂ ಐದು ವರ್ಷ ವ್ಯಾಸಂಗ ಮಾಡಿದರೆ ಸ್ನಾತಕೋತ್ತರ ಪದವಿಯೇ ಪೂರ್ಣಗೊಳಿಸಿದಂತೆ ಆಗುತ್ತದೆ. ಇದು ಪೂರ್ವ ವ್ಯವಸ್ಥೆಯ ಸುಧಾರಣಾ ಕ್ರಮವಷ್ಟೇ ಎಂದು ಡಿಸಿಎಂ ವಿವರಿಸಿದ್ದಾರೆ.

    ಈ ವಿಷಯ ಇನ್ನು ಕರಡು ತಯಾರಿಕೆ ಹಂತದಲ್ಲಿದೆ. ಈಗಲೇ ಅದರ ಬಗ್ಗೆ ಆತಂಕಪಡುವ ಅಗತ್ಯ ಇಲ್ಲ. ಮುಖ್ಯವಾಗಿ ಪದವಿ ಶಿಕ್ಷಣದಲ್ಲಿ ಎರಡು ವರ್ಷ ಕನ್ನಡ ಬೋಧನೆ ಆಗುತ್ತಿರುವ ಹಾಲಿ ವ್ಯವಸ್ಥೆಯಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ. ಮಾತೃಭಾಷೆ ಕಲಿಕೆಯನ್ನು ಒಂದು ವರ್ಷಕ್ಕೆ ಸೀಮಿತಗೊಳಿಸುವ ಬಗ್ಗೆ ಸರಕಾರ ಚಿಂತನೆ ನಡೆಸಿಲ್ಲ ಎಂದು ಡಾ.ಅಶ್ವತ್ಥನಾರಾಯಣ ಸ್ಪಷ್ಟವಾಗಿ ಪುನುರುಚ್ಛರಿಸಿದ್ದಾರೆ.

    ಶಿಕ್ಷಣದಲ್ಲಿ ಗುಣಮಟ್ಟ ಹಾಗೂ ಜಾಗತಿಕ ದೃಷ್ಟಿ ಇಟ್ಟುಕೊಂಡು ಅತ್ಯಂತ ಪುರಾತನ ಭಾಷೆಯಾದ ಕನ್ನಡದ ಭೋಧನೆ ಮತ್ತು ಕಲಿಕೆಯನ್ನು ಮತ್ತಷ್ಟು ವಿಸ್ತೃತಗೊಳಿಸುವ ಉದ್ದೇಶ ಸರಕಾರಕ್ಕೆ ಇದೆಯೇ ವಿನಾ, ಅದಕ್ಕೆ ಧಕ್ಕೆ ಉಂಟು ಮಾಡುವ ಯಾವುದೇ ಚಿಂತನೆ ಹೊಂದಿಲ್ಲ. ಈ ಬಗ್ಗೆ ಯಾವುದೇ ತಪ್ಪು ಅಭಿಪ್ರಾಯ ಉಂಟಾಗುವುದು ಬೇಡ ಎಂದು ಡಿಸಿಎಂ ಮನವಿ ಮಾಡಿದ್ದಾರೆ.

    ಈ ವರ್ಷದಿಂದಲೇ ಶಿಕ್ಷಣ ನೀತಿ ಜಾರಿ ಆಗುತ್ತದೆ. ಅಂದರೆ, ಮೊದಲ ವರ್ಷವನ್ನು ಶೂನ್ಯವರ್ಷ ಎಂದು ಪರಿಗಣಿಸಲಾಗಿದೆ. ಆಡಳಿತಾತ್ಮಕ-ಕಾನೂನಾತ್ಮಕ ಸಿದ್ಧತೆಗಳನ್ನು ಪ್ರಸಕ್ತ ವರ್ಷದಲ್ಲಿ  ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಅದರ ರೂಪುರೇಶೆಯಷ್ಟೇ ಸದ್ಯಕ್ಕೆ ಸಿದ್ಧವಾಗುತ್ತಿದೆ. ಕನ್ನಡ ಕಲಿಕೆಯನ್ನು ಮೊಟಕುಗೊಳಿಸಲಾಗುತ್ತದೆ ಎಂದು ಈಗಲೇ ಆತಂಕಪಡುವುದು ಬೇಡ. ಸೂಕ್ತ ಮಾಹಿತಿ ಪಡೆದುಕೊಂಡು ಗೊಂದಲ ಬಗೆಹರಿಸಿಕೊಳ್ಳಬಹುದು ಎಂದು ಡಿಸಿಎಂ ಮನವಿ ಮಾಡಿದರು.

    ಬರಲಿದೆ ಕೈಗೆ ಹಾನಿ ಮಾಡದ ಸ್ಯಾನಿಟೈಜರ್

    ಕೈಗಳಿಗೆ ಹಿತವಾಗಿರುವ ಮತ್ತು ಅವುಗಳನ್ನು ಒಣಗಿಸದಿರುವ ಪರಿಸರ ಸ್ನೇಹಿ ಹ್ಯಾಂಡ್ ಸ್ಯಾನಿಟೈಜರ್, ಶೀಘ್ರದಲ್ಲೇ ಮಾರುಕಟ್ಟೆಯಲ್ಲಿ ಲಭ್ಯವಾಗಲಿದೆ. ಆಲ್ಕೋಹಾಲ್ ಮುಕ್ತ, ಉರಿಯದ ಮತ್ತು ವಿಷಕಾರಿಯಲ್ಲದ ಹ್ಯಾಂಡ್ ಸ್ಯಾನಿಟೈಜರ್ ಅನ್ನು ಸಿಲ್ವರ್ ನ್ಯಾನೊಪರ್ಟಿಕಲ್ ನಿಂದ ಪುಣೆ ಮೂಲದ ಸ್ಟಾರ್ಟ್ ಅಪ್ ಅಭಿವೃದ್ಧಿಪಡಿಸಿದೆ.

    ಸ್ಯಾನಿಟೈಜರ್ಗಳನ್ನು ಪದೇ ಪದೇ ಬಳಸುವುದರಿಂದ ಕೈಗಳು ಒಣಗಿ ಬಿರುಸಾಗುತ್ತಿದ್ದುದು ಕೋವಿಡ್ 19 ಸಾಂಕ್ರಾಮಿಕದ ಸಮಯದಲ್ಲಿ ಜನರು ಎದುರಿಸುತ್ತಿರುವ ಸವಾಲಾಗಿದೆ.

    ವಿಇನ್ನೋವೇಟ್-ಬಯೋಸೊಲ್ಯೂಷನ್ಸ್ ಎಂಬ ಈ ಸ್ಚಾರ್ಟಪ್ ಅಭಿವೃದ್ಧಿಪಡಿಸಿದ ಸ್ಯಾನಿಟೈಜರ್ ಆಂಟಿಮೈಕ್ರೊಬಿಯಲ್ ಚಟುವಟಿಕೆಯನ್ನು ಹೆಚ್ಚಿಸುತ್ತದೆ. ಇದರಿಂದಾಗಿ ಮತ್ತೆ ಮತ್ತೆ ಸ್ಯಾನಿಟೈಜರ್ ಹಾಕುವ ಅಗತ್ಯವನ್ನು ನಿವಾರಿಸುತ್ತದೆ. ಇದರಲ್ಲಿರುವ ಸಿಲ್ವರ್ ನ್ಯಾನೊಪಾರ್ಟಿಕಲ್ಸ್ ಸಂಪರ್ಕಕ್ಕೆ ಬರುವ ಸೂಕ್ಷ್ಮಜೀವಿಗಳನ್ನು ಕೊಲ್ಲುತ್ತದೆ.

    “ಅಧ್ಯಯನದ ಫಲಿತಾಂಶಗಳ ಬಗ್ಗೆ ನಮಗೆ ತುಂಬಾ ವಿಶ್ವಾಸವಿದೆ ಮತ್ತು ನಮ್ಮ ಸ್ಯಾನಿಟೈಸರ್ ಗೆ ಪರವಾನಗಿಯನ್ನು ಭಾರತದ ಸಿಡಿಎಸ್ ಸಿ ಓ ದಿಂದ ಪಡೆಯಲು ಕಾಯುತ್ತಿದ್ದೇವೆ. ಇಂತಹ ಆವಿಷ್ಕಾರವು ಭಾರತವನ್ನು ತನ್ನ ‘ಆತ್ಮನಿರ್ಭರ ಭಾರತ್’ ಧ್ಯೇಯದತ್ತ ಕೊಂಡೊಯ್ಯುತ್ತದೆ ಮತ್ತು ಭವಿಷ್ಯದಲ್ಲಿ ಇಂತಹ ಸಾಂಕ್ರಾಮಿಕ ರೋಗಗಳನ್ನು ಎದುರಿಸಿ ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿ ಮಾಡುತ್ತದೆ ಎಂದು ನಮಗೆ ಖಾತ್ರಿಯಿದೆ ”ಎಂದು ವಿಇನ್ನೋವೇಟ್-ಬಯೋಸೊಲ್ಯೂಷನ್ಸ್ ಸಂಸ್ಥೆಯು ಸಹ-ಸಂಸ್ಥಾಪಕ ಮತ್ತು ಸಿಒಒ ಡಾ. ಅನುಪಮಾ ಎಂಜಿನಿಯರ್ ಹೇಳಿದ್ದಾರೆ.

    ಸಿಲ್ವರ್ ನ್ಯಾನೊ ಪಾರ್ಟಿಕಲ್ಸ್ ಎಚ್ಐವಿ, ಹೆಪಟೈಟಿಸ್ ಬಿ, ಹರ್ಪಿಸ್ ಸಿಂಪ್ಲೆಕ್ಸ್ ವೈರಸ್, ಇನ್ಫ್ಲುಯೆನ್ಜ ವೈರಸ್ ಮುಂತಾದ ಅನೇಕ ಮಾರಕ ವೈರಸ್ ಗಳ ವಿರುದ್ಧ ಕಾರ್ಯನಿರ್ವಹಿಸುವ ಪರಿಣಾಮಕಾರಿ ಆಂಟಿವೈರಲ್ ಎಂದು ಕಂಡುಬಂದಿದೆ.

    ವಿವಿಧ ರೀತಿಯ ವೈರಸ್ಗಳ ಮೇಲೆ ಸ್ಯಾನಿಟೈಸರ್ ನ ಪರಿಣಾಮಕಾರಿತ್ವವನ್ನು ಮೌಲ್ಯಮಾಪನ ಮಾಡುವ ಅಧ್ಯಯನವನ್ನು ಪ್ರಸ್ತುತ ತಂಡವು ನಡೆಸುತ್ತಿದೆ. (ಮಾಹಿತಿ: ಪಿಐಬಿ)

    ದೇಶವ್ಯಾಪಿ ಕೋವಿಡ್ ಸಕ್ರಿಯ ಪ್ರಕರಣ ಇಳಿಕೆ

    ಭಾರತದ ಸಕ್ರಿಯ ಪ್ರಕರಣಗಳ ಸಂಖ್ಯೆ 8,26,740 ಆಗಿದ್ದು, ಇದು 71 ದಿನಗಳ ನಂತರದ ಅತೀ ಕಡಿಮೆ ಪ್ರಮಾಣವಾಗಿದೆ

    ಕಳೆದ 24 ಗಂಟೆಗಳಲ್ಲಿ ಭಾರತವು 67,208 ದೈನಂದಿನ ಹೊಸ ಪ್ರಕರಣಗಳನ್ನು ವರದಿ ಮಾಡಿದೆ

    ದೇಶಾದ್ಯಂತ ಇದುವರೆಗೆ ಚೇತರಿಸಿಕೊಂಡವರ ಸಂಖ್ಯೆ 2,84,91,670

    ಕಳೆದ 24 ಗಂಟೆಗಳಲ್ಲಿ 1,03,570 ರೋಗಿಗಳು ಚೇತರಿಸಿಕೊಂಡಿದ್ದಾರೆ

    ದೈನಂದಿನ ಚೇತರಿಕೆಯ ಪ್ರಕರಣಗಳ ಸಂಖ್ಯೆಯು ಸತತ 35 ನೇ ದಿನವೂ ದೈನಂದಿನ ಹೊಸ ಪ್ರಕರಣಗಳನ್ನು ಮೀರಿಸುತ್ತಿವೆ

    ಚೇತರಿಕೆಯ ದರ 95.93% ರಷ್ಟು ಹೆಚ್ಚಾಗಿದೆ

    ಸಾಪ್ತಾಹಿಕ ದೃಢಪಟ್ಟ ದರವು 5% ಕ್ಕಿಂತ ಕಡಿಮೆ ಇದೆ, ಈಗ ಇದು 3.99% ಆಗಿದೆ

    ದೈನಂದಿನ ಸದೃಢಪಟ್ಟ ಪ್ರಕರಣಗಳ ದರವು 3.48% ಇದ್ದು, ಇದು ಸತತ 10 ದಿನಗಳವರೆಗೆ 5% ಕ್ಕಿಂತ ಕಡಿಮೆಯಿದೆ.

    ಪರೀಕ್ಷಾ ಸಾಮರ್ಥ್ಯ ಗಣನೀಯವಾಗಿ ಹೆಚ್ಚಾಗಿದೆ – ಒಟ್ಟು 38.52 ಕೋಟಿ ಪರೀಕ್ಷೆಗಳನ್ನು ಮಾಡಲಾಗಿದೆ

    26.55 ಕೋಟಿ ಲಸಿಕೆ ಡೋಸೇಜ್ ಅನ್ನು ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ನೀಡಲಾಗಿದೆ

    ಬಿಗ್ ಬಾಸ್ ಸೆಕೆಂಡ್ ಇನ್ನಿಂಗ್ಸ್ ಈ ತಿಂಗಳೇ ಶುರು

    ಕೊರೋನಾ ಎರಡನೆ ಅಲೆ ಕಾರಣದಿಂದ ಅರ್ಧಕ್ಕೆ ನಿಂತಿದ್ದ ಕಲರ್ಸ್ ಕನ್ನಡ ಚಾನಲ್ ನ ರಿಯಾಲಿಟಿ ಶೋ ಬಿಗ್ ಬಾಸ್ ಮತ್ತೆ ಆರಂಭವಾಗುತ್ತದೆ ಎಂಬ ಸುದ್ದಿ ಇದೀಗ ಅಧಿಕೃತವಾಗಿ ಖಚಿತ ಗೊಂಡಿದೆ.

    ವಾಹಿನಿಯ ಬಿಸ್ನೆಸ್ ಹೆಡ್ ಪರಮೇಶ್ವರ ಗುಂಡ್ಕಲ್ ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಊರು ಸೇರಿದಾಗಲೇ ದಾರಿ ಮುಗಿಯುವುದು. ಮನೆ ಸೇರಿದಾಗಲೇ ಹಾದಿಯಲ್ಲಿ ಕಷ್ಟಪಟ್ಟಿದ್ದು ಸಾರ್ಥಕ ಅನಿಸೋದು. ಅರ್ಧದಲ್ಲಿಯೇ ನಿಲ್ಲಿಸಿದ್ದ ಪ್ರಯಾಣವನ್ನು ಈಗ ಪುನಃ ಅದೇ ಹನ್ನೆರಡು ಜನರೊಂದಿಗೆ ಶುರು ಮಾಡುವ ಸಮಯ ಎಂದು ಹೇಳುವ ಮೂಲಕ ಬಿಗ್ ಬಾಸ್ ಜರ್ನಿ ಆರಂಭವಾಗುವ ಸೂಚನೆ ನೀಡಿದ್ದಾರೆ.

    ಇಂದೊಂದು ಥರ ಎರಡನೇ ಇನ್ನಿಂಗ್ಸ್. ಯಾರು ಚೆನ್ನಾಗಿ ಆಡುತ್ತಿದ್ದಾರೆ, ಎಲ್ಲಿ ಚೆನ್ನಾಗಿ ಆಡಬಹುದಿತ್ತು, ಎಲ್ಲಿ ಚೆನ್ನಾಗಿ ಆಡಬೇಕಾಗಿತ್ತು, ಯಾರಿಗೆ ಗಾಯವಾಗಿದೆ, ಯಾರು ಬೇಗ ಸುಸ್ತಾಗುತ್ತಾರೆ, ಯಾರು ರೊಚ್ಚಿಗೇಳುತ್ತಾರೆ, ಪಿಚ್ ಹೇಗೆ ವರ್ತಿಸುತ್ತಿದೆ ಎನ್ನುವುದೆಲ್ಲಾ ಗೊತ್ತಿದೆ. ಮೊದಲನೇ ಇನ್ನಿಂಗ್ಸ್ ನ ಸ್ಕೋರ್ ಕಾರ್ಡ್ ಎಲ್ಲರಿಗೂ ಗೊತ್ತು. ಆದರೆ ಎರಡನೇ ಇನ್ನಿಂಗ್ಸ್ ನಲ್ಲಿ ಯಾರು ಹೇಗೆ ಆಡುತ್ತಾರೆ ಅನ್ನುವುದರ ಮೇಲೇ ಮ್ಯಾಚ್ ಯಾರು ಗೆಲ್ಲುತ್ತಾರೆ ಎಂಬ ತೀರ್ಮಾನ ಆಗುವುದು.. ಎರಡನೇ ಇನ್ನಿಂಗ್ಸ್ನಲ್ಲಿ ಮತ್ತೆ ಮೊದಲ ರನ್ ಓಡಬೇಕು. ಮೊದಲ ವಿಕೆಟ್ ಉರುಳಿಸಬೇಕು. ಅದೇ ಏಕಾಗ್ರತೆ, ಶ್ರದ್ಧೆ ಮತ್ತು ಜೀವನಪ್ರೀತಿ ಬೇಕು.

    ಇಷ್ಟು ವರ್ಷಗಳ ಕಾಲ ಜಗತ್ತಿನ ಬೇರೆ ಬೇರೆ ದೇಶಗಳಲ್ಲಿ ನಡೆದ ಯಾವ ಬಿಗ್ ಬಾಸ್ ಶೋದಲ್ಲೂ ಎರಡನೇ ಇನಿಂಗ್ಸ್ ಆಡುವ ಅವಕಾಶ ಯಾರಿಗೂ ಸಿಕ್ಕಿರಲಿಲ್ಲ. ಕನ್ನಡದಲ್ಲಿ ಈ ಹನ್ನೆರಡು ಕಂಟೆಸ್ಟೆಂಟುಗಳಿಗೆ ಅಂಥದ್ದೊಂದು ಅವಕಾಶ ಸಿಗುತ್ತಿದೆ.ಜೂನ್ ತಿಂಗಳು. ಹೊರಗಡೆ ಮಳೆ. ಹೊಸ ತರಗತಿಗೆ ಹೊಸದಾಗಿರೋ ಕೊಡೆ ಹಿಡಿದು ಹೋದಷ್ಟೇ ಖುಷಿಯೊಂದಿಗೆ ವಾಪಸ್ ಕೆಲಸಕ್ಕೆ ಹಾಜರಾಗುತ್ತಿದ್ದೇವೆ. ಪಾಸಾಗುತ್ತೇವೋ ಫೇಲಾಗುತ್ತೇವೋ ಅನ್ನುವುದಕ್ಕಿಂತ ತರಗತಿಯಲ್ಲಿ ಕುಳಿತು ಕಲಿತಾ ಇರಬೇಕು ಅನ್ನೋದೇ ವಿಷಯ ಎಂದು ಪರಮೇಶ್ವರ್ ಹೇಳುತ್ತಾರೆ.

    ಆರಂಭ ಎಂದಿನಿಂದ ಎಂಬುದು ಇನ್ನಷ್ಟೆ ಪ್ರಕಟವಾಗಬೇಕಿದೆ.

    error: Content is protected !!